ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಾಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣ ಬಿ. ಗುಡಗೇರಿ ವಿರುದ್ಧ ಆಕ್ರಮ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಶನಿವಾರ ಬೆಳಗ್ಗೆಯೇ ದಾಳಿ ನಡೆಸಿದ್ದಾರೆ.
ರಾಮಕೃಷ್ಣ ಗುಡಗೇರಿ ಅವರು ಹುಬ್ಬಳ್ಳಿಯ ನವನಗರ ನಿವಾಸದಲ್ಲಿರುವವರಾಗಿದ್ದು, 2010ರಲ್ಲಿ ಪಿಡಿಒ ಹುದ್ದೆಗೆ ಸೇರಿದ್ದರು. ಜಿಲ್ಲೆಯ ಹಲವಾರು ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಿ, ಇತ್ತೀಚಿನ ಕೆಲವು ವರ್ಷಗಳಿಂದ ಬಾಡ ಗ್ರಾಮ ಪಂಚಾಯಿತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತದ ತಂಡವು ಶನಿವಾರ ನಸುಕಿನ ವೇಳೆಗೆ ಬಾಡ ಗ್ರಾಮದ ಪಂಚಾಯಿತಿ ಕಚೇರಿ ಹಾಗೂ ನವನಗರದ ನಿವಾಸದ ಮೇಲೆ ಸಮಾಂತರ ದಾಳಿ ನಡೆಸಿತು. ಪರಿಶೀಲನೆಯ ವೇಳೆ ನಗದು, ಚಿನ್ನಾಭರಣ ಮತ್ತು ಬಹುಮೌಲ್ಯದ ಸ್ಥಿರಾಸ್ತಿ ದಾಖಲಾತಿಗಳು ಸಿಕ್ಕಿವೆ.
ತನಿಖೆಯಲ್ಲಿ ರಾಮಕೃಷ್ಣ ಅವರು ತಮ್ಮ ಆದಾಯಕ್ಕಿಂತ ಶೇ.138ರಷ್ಟು ಅಧಿಕ ಆಸ್ತಿ ಹೊಂದಿರುವುದು ಬಹಿರಂಗವಾಗಿದೆ.
ಲೋಕಾಯುಕ್ತದ ಪ್ರಾಥಮಿಕ ವರದಿಯಂತೆ, ದಾಳಿ ವೇಳೆ ₹79,500 ನಗದು, ₹8.53 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ₹86.15 ಲಕ್ಷ ಮೌಲ್ಯದ ಸ್ಥಿರಾಸ್ತಿ ದಾಖಲೆಗಳು ಪತ್ತೆಯಾಗಿವೆ. ಈ ಆಸ್ತಿಗಳಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ಹೊಂದಿರುವ ಎರಡು ನಿವೇಶನಗಳೂ ಸೇರಿವೆ.
ಪ್ರಸ್ತುತ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಹೆಚ್ಚುವರಿ ಮಾಹಿತಿಗಾಗಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…