ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ ಮೇಲೆ ಇಂದು ಬೆಳಗ್ಗೆ ದಾಳಿ ನಡೆದಿದೆ. ವಸಂತ ರವರ ಸಹೋದರನಾದ ಭೀಮಸಿಂಗ್ ನಾಯಕ್ ಅವರ ಬಾಗಲಕೋಟೆಯ ಮನೆಯ ಮೇಲೆಯೂ ಸಹ ದಾಳಿ ನಡೆದಿದೆ. ಭೀಮಸಿಂಗ್ ನಾಯಕ ಬಾಗಲಕೋಟೆ ಡಿಎಆರ್ನಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಾಗಲಕೋಟೆಯ ಪೋಸ್ಟಲ್ ಕಾಲೋನಿಯಲ್ಲಿರುವ ಭೀಮಸಿಂಗ್ ಮನೆ ಮೇಲೆ ದಾಳಿ ನಡದಿದೆ. ಹಾಗೆಯೇ ವಸಂತ ನಾಯಕ ಅವರ ಮೂಲ ಗ್ರಾಮ ಬಾಗಲಕೋಟೆ ತಾಲೂಕಿನ ಬಸವನಗರ ತಾಂಡಾದಲ್ಲಿರುವ ಮನೆಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೀಗ ತಾನೇ ಅಧಿಕಾರ ವಹಿಸಿಕೊಂಡ ಬಾಗಲಕೋಟೆ ಲೋಕಾಯುಕ್ತ ಎಸ್.ಪಿ ಮಹಾನಿಂಗ್ ನಂದಗಾವಿ ಮಾರ್ಗದರ್ಶನದಲ್ಲಿ ಲೋಕಾಯುಕ್ತ, ಡಿವೈಎಸ್ ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ವಿಶ್ವನಾಥ ಭಜಂತ್ರಿ
