
ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಇಬ್ಬರು ಸಹಾಯಕ ಎಂಜಿನಿಯರ್ಗಳು ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಹೆಬ್ಬಾಳ ಉಪ ವಿಭಾಗದ ಎಇಇ ಮಹದೇವ ಮತ್ತು ಆರ್ಎಂವಿ ಉಪ ವಿಭಾಗದ ಎಇ ಸುರೇಂದ್ರ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ಜಮೆನಾದ ಹಣವನ್ನು ಜಪ್ತಿ ಮಾಡಿದ್ದಾರೆ.
ಎನ್ಒಸಿ (ನೋ ಅಭ್ಜೆಕ್ಷನ್ ಸರ್ಟಿಫಿಕೆಟ್) ನೀಡಲು 10 ಲಕ್ಷ ರೂಪಾಯಿಗಳ ಲಂಚವನ್ನು ಬೇಡಿಕೆಯಿಟ್ಟಿದ್ದ ಇಂಜಿನಿಯರ್ಗಳು, ದೂರುದಾರ ಸಂಜಯ್ ಎಂಬುವವರಿಂದ ಮುಂಗಡವಾಗಿ 5 ಲಕ್ಷ ರೂ.ಗಳನ್ನು ಪಡೆಯುವ ಸಂದರ್ಭದಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆರೋಪಿತರನ್ನು ಸ್ಥಳದಲ್ಲೇ ವಶಕ್ಕೆ ಪಡೆದ ಅಧಿಕಾರಿಗಳು, ಹಣವನ್ನು ಸಾಕ್ಷ್ಯವಾಗಿ ಜಪ್ತಿ ಮಾಡಿದ್ದಾರೆ. ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಬಿಎಂಪಿಯಲ್ಲಿನ ಅಧಿಕಾರಿಗಳಿಂದ ಲಂಚ ಬೇಡಿಕೆ ಆರೋಪಗಳು ಮುಂದುವರಿದಿರುವಂತೆ ಈ ಪ್ರಕರಣ ಮತ್ತೊಮ್ಮೆ ರಾಜ್ಯದ ಆಡಳಿತ ವ್ಯವಸ್ಥೆಯ ಭದ್ರತೆ ಬಗ್ಗೆ ಪ್ರಶ್ನೆ ಎಬ್ಬಿಸಿದೆ.