Latest

ಭೈರತಿ ಸುರೇಶ್ ಮಾಜಿ ಪರ್ಸನಲ್ ಸೆಕ್ರಟರಿಯ ಮನೆ ಮೇಲೆ ಲೋಕಾಯುಕ್ತದ ದಾಳಿ, ಅಪಾರ ಆಸ್ತಿ ದಾಖಲೆ ವಶ

ಬೆಂಗಳೂರು: ರಾಜ್ಯದ ಸಚಿವ ಭೈರತಿ ಸುರೇಶ್ ಅವರ ಮಾಜಿ ಪರ್ಸನಲ್ ಸೆಕ್ರಟರಿ (ಪಿಎಸ್) ಮಾರುತಿ ಬಗಲಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ದೂರುಗಳ ಬೆನ್ನಲ್ಲೇ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಅಧಿಕಾರಿಗಳು, ಮಾರುತಿ ಬಗಲಿ ನಿವಾಸದಲ್ಲಿ ತೀವ್ರ ತಪಾಸಣೆ ನಡೆಸಿದ್ದು, ಸುಮಾರು 8 ನಿವೇಶನಗಳ ದಾಖಲೆ, 5 ವಾಸಸ್ತವ ಮನೆಗಳ ದಾಖಲೆ, ಮತ್ತು 19 ಎಕರೆ ಜಮೀನಿನ ಕಾಗದ ಪತ್ರಗಳು ಸೇರಿದಂತೆ ಹಲವಾರು ಮಹತ್ವದ ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾರುತಿ ಬಗಲಿ ಅವರು ಕಳೆದ ಎರಡು ವರ್ಷಗಳ ಕಾಲ ಸಚಿವ ಭೈರತಿ ಸುರೇಶ್ ಅವರಿಗೆ ಪರ್ಸನಲ್ ಸೆಕ್ರಟರಿಯಾಗಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ಹಿಂದೆ ಅವರು ಸೇವೆಯಿಂದ ಹೊರಬಿದ್ದಿದ್ದರು. ಅವರು ಕೆಲಸದಲ್ಲಿದ್ದ ಅವಧಿಯಲ್ಲೇ ಅಕ್ರಮವಾಗಿ ಆಸ್ತಿ ಸಂಪಾದನೆ ನಡೆದಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಲೋಕಾಯುಕ್ತದ ಈ ದಾಳಿಯಿಂದ ಭೈರತಿ ಸುರೇಶ್ ಅವರ ಕಚೇರಿ ಹಾಗೂ ಆಡಳಿತ ಕ್ರಮಗಳು ಮತ್ತೊಮ್ಮೆ ಬೆಳಕಿಗೆ ಬಂದಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ತನಿಖಾ ವರದಿ ಹೊರಬೀಳಬೇಕಿದೆ. ಅಧಿಕಾರಿಗಳ ಪ್ರಾಥಮಿಕ ಮಾಹಿತಿ ಪ್ರಕಾರ, ವಶಪಡಿಸಿಕೊಳ್ಳಲಾದ ದಾಖಲೆಗಳ ಪರಿಶೀಲನೆಯ ನಂತರ ಮುಂದಿನ ಹಂತದ ಕ್ರಮ ಕೈಗೊಳ್ಳಲಾಗುವುದು.

ಇದೇ ಸಂದರ್ಭದಲ್ಲಿ, ರಾಜಕೀಯ ವಲಯದಲ್ಲಿ ಈ ದಾಳಿ ಚರ್ಚೆಗೆ ಗ್ರಾಸವಾಗಿದ್ದು, ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿ ವಿಚಾರಗಳಲ್ಲಿ ಸಾರ್ವಜನಿಕ ಗಮನ ಮತ್ತೊಮ್ಮೆ ಸೆಳೆಯುತ್ತಿದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

38 minutes ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

40 minutes ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

42 minutes ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

43 minutes ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

45 minutes ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

46 minutes ago