Latest

ಭೈರತಿ ಸುರೇಶ್ ಮಾಜಿ ಪರ್ಸನಲ್ ಸೆಕ್ರಟರಿಯ ಮನೆ ಮೇಲೆ ಲೋಕಾಯುಕ್ತದ ದಾಳಿ, ಅಪಾರ ಆಸ್ತಿ ದಾಖಲೆ ವಶ

ಬೆಂಗಳೂರು: ರಾಜ್ಯದ ಸಚಿವ ಭೈರತಿ ಸುರೇಶ್ ಅವರ ಮಾಜಿ ಪರ್ಸನಲ್ ಸೆಕ್ರಟರಿ (ಪಿಎಸ್) ಮಾರುತಿ ಬಗಲಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ದೂರುಗಳ ಬೆನ್ನಲ್ಲೇ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಅಧಿಕಾರಿಗಳು, ಮಾರುತಿ ಬಗಲಿ ನಿವಾಸದಲ್ಲಿ ತೀವ್ರ ತಪಾಸಣೆ ನಡೆಸಿದ್ದು, ಸುಮಾರು 8 ನಿವೇಶನಗಳ ದಾಖಲೆ, 5 ವಾಸಸ್ತವ ಮನೆಗಳ ದಾಖಲೆ, ಮತ್ತು 19 ಎಕರೆ ಜಮೀನಿನ ಕಾಗದ ಪತ್ರಗಳು ಸೇರಿದಂತೆ ಹಲವಾರು ಮಹತ್ವದ ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾರುತಿ ಬಗಲಿ ಅವರು ಕಳೆದ ಎರಡು ವರ್ಷಗಳ ಕಾಲ ಸಚಿವ ಭೈರತಿ ಸುರೇಶ್ ಅವರಿಗೆ ಪರ್ಸನಲ್ ಸೆಕ್ರಟರಿಯಾಗಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ಹಿಂದೆ ಅವರು ಸೇವೆಯಿಂದ ಹೊರಬಿದ್ದಿದ್ದರು. ಅವರು ಕೆಲಸದಲ್ಲಿದ್ದ ಅವಧಿಯಲ್ಲೇ ಅಕ್ರಮವಾಗಿ ಆಸ್ತಿ ಸಂಪಾದನೆ ನಡೆದಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಲೋಕಾಯುಕ್ತದ ಈ ದಾಳಿಯಿಂದ ಭೈರತಿ ಸುರೇಶ್ ಅವರ ಕಚೇರಿ ಹಾಗೂ ಆಡಳಿತ ಕ್ರಮಗಳು ಮತ್ತೊಮ್ಮೆ ಬೆಳಕಿಗೆ ಬಂದಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ತನಿಖಾ ವರದಿ ಹೊರಬೀಳಬೇಕಿದೆ. ಅಧಿಕಾರಿಗಳ ಪ್ರಾಥಮಿಕ ಮಾಹಿತಿ ಪ್ರಕಾರ, ವಶಪಡಿಸಿಕೊಳ್ಳಲಾದ ದಾಖಲೆಗಳ ಪರಿಶೀಲನೆಯ ನಂತರ ಮುಂದಿನ ಹಂತದ ಕ್ರಮ ಕೈಗೊಳ್ಳಲಾಗುವುದು.

ಇದೇ ಸಂದರ್ಭದಲ್ಲಿ, ರಾಜಕೀಯ ವಲಯದಲ್ಲಿ ಈ ದಾಳಿ ಚರ್ಚೆಗೆ ಗ್ರಾಸವಾಗಿದ್ದು, ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿ ವಿಚಾರಗಳಲ್ಲಿ ಸಾರ್ವಜನಿಕ ಗಮನ ಮತ್ತೊಮ್ಮೆ ಸೆಳೆಯುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

12 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

12 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

12 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

12 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago