Latest

ಅಕ್ರಮ ಆಸ್ತಿ ಆರೋಪ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ

ಗದಗ: ರಾಜ್ಯದ ಲೋಕಾಯುಕ್ತ ಠಾಣೆ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಗದಗದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಅವರ ನಿವಾಸದ ಮೇಲೆ ಅಕ್ರಮ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಭಾರಿ ಮಟ್ಟದ ದಾಳಿ ನಡೆಸಿದ್ದಾರೆ.

ಎಸ್‌ಪಿ ಹನುಮಂತರಾಯ ಅವರ ನೇತೃತ್ವದಲ್ಲಿ ನಡೆದ ಈ ವಿಶೇಷ ಕಾರ್ಯಾಚರಣೆಯಲ್ಲಿ ಗದಗ, ಹಡಗಲಿ ಮತ್ತು ಹಾವೇರಿ ಸೇರಿದಂತೆ ಗಂಗಾಧರ ಶಿರೋಳ ಅವರ ಸ್ವಾಮ್ಯದ ಆರು ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಅವರ ನಿವಾಸಗಳು ಹಾಗೂ ಕಛೇರಿಗಳನ್ನು ಸಮಗ್ರವಾಗಿ ಪರಿಶೀಲಿಸಲಾಗಿದೆ.

ದಾಳಿಯ ವೇಳೆ ಅಧಿಕಾರಿಗಳು ಬಹಳಷ್ಟು ಪ್ರಮಾಣದ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳು, ಹೂಡಿಕೆ ದಾಖಲೆಗಳು ಹಾಗೂ ಹಲವು ಮಾದರಿಯ ವಾಹನಗಳನ್ನು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಜತೆಗೆ, ಅವರ ಆಸ್ತಿ ಗಳಿಕೆ ಕುರಿತು ಹೆಚ್ಚಿನ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಲೋಕಾಯುಕ್ತದ ಈ ಕ್ರಮದಿಂದಾಗಿ ಗದಗ ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗಿದ್ದು, ಅಧಿಕಾರಿಗಳಿಂದ ಅಧಿಕೃತ ಮಾಹಿತಿಗಾಗಿ ಇನ್ನಷ್ಟೇ ನಿರೀಕ್ಷೆ ನಡೆಯುತ್ತಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

11 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

18 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

18 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago