ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಲಂಚ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಾಗೇಪಲ್ಲಿ ತಾಲೂಕಿನಲ್ಲಿ ಸೇವೆ ನಿರ್ವಹಿಸುತ್ತಿದ್ದ ಕೃಷಿ ಅಧಿಕಾರಿ ಶಂಕರಯ್ಯ, ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರನೊಬ್ಬನಿಂದ ಲಕ್ಷಾಂತರ ರೂ. ಲಂಚ ಪಡೆಯುತ್ತಿರುವ ಸಂದರ್ಭದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಶಂಕರಯ್ಯನನ್ನು ವಶಕ್ಕೆ ಪಡೆದಿದ್ದಾರೆ.
ಶಂಕಿತ ಅಧಿಕಾರಿ ಶಂಕರಯ್ಯ, ಗುತ್ತಿಗೆದಾರ ಮಂಜುನಾಥ್ ಬಳಿ ರೂ. 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗಿ ಆರೋಪ ಕೇಳಿ ಬಂದಿದೆ. ಇದೇ ಹಿನ್ನೆಲೆಯಲ್ಲಿ, ಮೊದಲನೇ ಹಂತದಲ್ಲಿ ರೂ. 1 ಲಕ್ಷ ಮೊತ್ತವನ್ನು ಮುಂಗಡವಾಗಿ ಸ್ವೀಕರಿಸಿದ್ದ ಶಂಕರಯ್ಯ, ಬಳಿಕ ಉಳಿದ ರೂ. 2 ಲಕ್ಷ ಪಡೆಯುವ ವೇಳೆಯಲ್ಲಿ ಲೋಕಾಯುಕ್ತದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.
ಚಿಕ್ಕಬಳ್ಳಾಪುರ ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ದಾಳಿ ನಡೆದಿದೆ. ಶಂಕರಯ್ಯನ ಹಸ್ತಲಾಘವ ಬಹಿರಂಗವಾಗಿದ್ದು, ಅವನ ಬ್ಯಾಗಿನಲ್ಲಿ ಕಂತೆ ಕಂತೆ ನಗದು ಪತ್ತೆಯಾಗಿದೆ. ಹಣದ ಪ್ರಮಾಣ ಬಹಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಅಧಿಕಾರಿಗಳು ನಗದು ಎಣಿಸಲು ವಿಶೇಷ ಯಂತ್ರವನ್ನು ಸ್ಥಳಕ್ಕೇ ತರಿಸಿದ್ದಾರೆ.
ಈ ದಾಳಿಗೆ ಲೋಕಾಯುಕ್ತ ಎಸ್ಪಿ ಆಂಟೋನಿ ಜಾನ್ ನೇತೃತ್ವ ವಹಿಸಿದ್ದರು. ಕಚೇರಿಯ ಇತರ ಸಿಬ್ಬಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದ್ದು, ತನಿಖೆ ಮುಂದುವರಿಯುತ್ತಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…