ಕೊಪ್ಪಳ, ಜುಲೈ 31: ರಾಜ್ಯದ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಹಿಂದೆ ಹೊರಗುತ್ತಿಗೆ ಆಧಾರಿತ ಕೆಲಸ ಮಾಡುತ್ತಿದ್ದ ಕಳಕಪ್ಪ ಎಂಬುವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗುರುವಾರ ಬೆಳಿಗ್ಗೆಯಿಂದಲೇ ಪ್ರಗತಿ ನಗರದಲ್ಲಿರುವ ಅವರ ನಿವಾಸದಲ್ಲಿ ತನಿಖೆ ನಡೆಯುತ್ತಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆಗೆ ತೊಡಗಿದ್ದಾರೆ.
ದೂರುಗಳ ಅಡಿಯಲ್ಲಿ ಈ ದಾಳಿ ನಡೆದಿದ್ದು, ಕುಡಿಯುವ ನೀರು ಹಾಗೂ ಚರಂಡಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇಲಾಖೆ ಕೆಲವರು ಕಳಕಪ್ಪ ವಿರುದ್ಧ ಕಳೆದ ವಾರವೇ ಅಧಿಕೃತವಾಗಿ ದೂರು ಸಲ್ಲಿಸಿದ್ದಾಗಿ ಮೂಲಗಳು ತಿಳಿಸಿವೆ.
ಲೋಕಾಯುಕ್ತ ತನಿಖೆ ಸಂದರ್ಭ ಪ್ರಮುಖ ದಾಖಲೆಗಳು ವಶಕ್ಕೆ ಪಡೆಯಲಾಗಿದ್ದು, ಈಗಾಗಲೇ ಕಳಕಪ್ಪ ಅವರ ಹೆಸರಿನಲ್ಲಿ 20ಕ್ಕೂ ಹೆಚ್ಚು ಮನೆ ಹಾಗೂ ನಿವೇಶನಗಳ ದಾಖಲೆಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಇದು ಅವರ ಅಧಿಕ ಆದಾಯಕ್ಕೆ ಮೀರಿ ಸಂಪತ್ತಾಗಿದ್ದು, ಇನ್ನಷ್ಟು ಆಸ್ತಿಗಳ ಕುರಿತಾಗಿ ತನಿಖೆ ಮುಂದುವರಿಯುತ್ತಿದೆ.
ಅಕ್ರಮಗಳಿಗೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆಯೇ ಅವರನ್ನು ಹೊರಗುತ್ತಿಗೆ ಕೆಲಸದಿಂದ ವಜಾಗೊಳಿಸಲಾಗಿತ್ತು. ಸದ್ಯಕ್ಕೆ ಲೋಕಾಯುಕ್ತ ಅಧಿಕಾರಿಗಳ ತನಿಖೆ ಮುಂದುವರಿದಿದ್ದು, ಅಧಿಕೃತವಾಗಿ ಹೆಚ್ಚಿನ ವಿವರಗಳು ನಿರೀಕ್ಷೆಯಲ್ಲಿವೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…