Latest

ಕೊಪ್ಪಳದಲ್ಲಿ ಲೋಕಾಯುಕ್ತ ದಾಳಿ: ಮಾಜಿ ಹೊರಗುತ್ತಿಗೆ ನೌಕರ ಕಳಕಪ್ಪ ವಿರುದ್ಧ ಅಕ್ರಮ ಆಸ್ತಿ ಪತ್ತೆ

ಕೊಪ್ಪಳ, ಜುಲೈ 31: ರಾಜ್ಯದ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಹಿಂದೆ ಹೊರಗುತ್ತಿಗೆ ಆಧಾರಿತ ಕೆಲಸ ಮಾಡುತ್ತಿದ್ದ ಕಳಕಪ್ಪ ಎಂಬುವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗುರುವಾರ ಬೆಳಿಗ್ಗೆಯಿಂದಲೇ ಪ್ರಗತಿ ನಗರದಲ್ಲಿರುವ ಅವರ ನಿವಾಸದಲ್ಲಿ ತನಿಖೆ ನಡೆಯುತ್ತಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆಗೆ ತೊಡಗಿದ್ದಾರೆ.

ದೂರುಗಳ ಅಡಿಯಲ್ಲಿ ಈ ದಾಳಿ ನಡೆದಿದ್ದು, ಕುಡಿಯುವ ನೀರು ಹಾಗೂ ಚರಂಡಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇಲಾಖೆ ಕೆಲವರು ಕಳಕಪ್ಪ ವಿರುದ್ಧ ಕಳೆದ ವಾರವೇ ಅಧಿಕೃತವಾಗಿ ದೂರು ಸಲ್ಲಿಸಿದ್ದಾಗಿ ಮೂಲಗಳು ತಿಳಿಸಿವೆ.

ಲೋಕಾಯುಕ್ತ ತನಿಖೆ ಸಂದರ್ಭ ಪ್ರಮುಖ ದಾಖಲೆಗಳು ವಶಕ್ಕೆ ಪಡೆಯಲಾಗಿದ್ದು, ಈಗಾಗಲೇ ಕಳಕಪ್ಪ ಅವರ ಹೆಸರಿನಲ್ಲಿ 20ಕ್ಕೂ ಹೆಚ್ಚು ಮನೆ ಹಾಗೂ ನಿವೇಶನಗಳ ದಾಖಲೆಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಇದು ಅವರ ಅಧಿಕ ಆದಾಯಕ್ಕೆ ಮೀರಿ ಸಂಪತ್ತಾಗಿದ್ದು, ಇನ್ನಷ್ಟು ಆಸ್ತಿಗಳ ಕುರಿತಾಗಿ ತನಿಖೆ ಮುಂದುವರಿಯುತ್ತಿದೆ.

ಅಕ್ರಮಗಳಿಗೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆಯೇ ಅವರನ್ನು ಹೊರಗುತ್ತಿಗೆ ಕೆಲಸದಿಂದ ವಜಾಗೊಳಿಸಲಾಗಿತ್ತು. ಸದ್ಯಕ್ಕೆ ಲೋಕಾಯುಕ್ತ ಅಧಿಕಾರಿಗಳ ತನಿಖೆ ಮುಂದುವರಿದಿದ್ದು, ಅಧಿಕೃತವಾಗಿ ಹೆಚ್ಚಿನ ವಿವರಗಳು ನಿರೀಕ್ಷೆಯಲ್ಲಿವೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

9 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

9 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

12 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

14 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

14 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

14 hours ago