ಉಡುಪಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಶಂಕೆಯ ಹಿನ್ನೆಲೆ, ಕಾರ್ಕಳ ಮೆಸ್ಕಾಂ ಅಕೌಂಟ್ಸ್ ಅಧಿಕಾರಿ ಗಿರೀಶ್ ರಾವ್ ವಿರುದ್ಧ ಲೋಕಾಯುಕ್ತ ಪೊಲೀಸರು ಶನಿವಾರ ಬೆಳಗ್ಗೆಯಿಂದ ಸುದೀರ್ಘ ದಾಳಿ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಪುಲ್ಕೇರಿಯಲ್ಲಿ ಇರುವ ಗಿರೀಶ್ ರಾವ್ ಅವರ ನಿವಾಸ, ವಾಣಿಜ್ಯ ಸಂಕೀರ್ಣ ಹಾಗೂ ಇತರ ಮೂರು ಸ್ಥಳಗಳ ಮೇಲೆ ದಾಳಿ ನಡೆಯಿತು. ಈ ತನಿಖೆಯನ್ನು ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಅವರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳ ತಂಡ ನಡೆಸಿತ್ತು.
ಮೂಲಗಳ ಪ್ರಕಾರ, ಗಿರೀಶ್ ರಾವ್ ಅವರ ಹೊಂದಿರುವ ಆಸ್ತಿ, ಆಯವ್ಯಯಕ್ಕೆ ತಕ್ಕಷ್ಟು ಅಡಾಲು ದಾಖಲೆ ನೀಡದಿರುವ ಕಾರಣದಿಂದಾಗಿ ಈ ದಾಳಿಯ ಅವಶ್ಯಕತೆ ಉಂಟಾಯಿತು ಎಂದು ಹೇಳಲಾಗಿದೆ. ದಾಳಿಯ ವೇಳೆ ದಾಖಲೆಗಳು, ಆಸ್ತಿ ವಿವರಗಳು ಹಾಗೂ ಬ್ಯಾಂಕ್ ಲೆಕ್ಕಪತ್ರಗಳ ಪರಿಶೀಲನೆ ನಡೆದಿದ್ದು, ಮೌಲ್ಯಮಾಪನ ಪ್ರಕ್ರಿಯೆ ಮುಂದುವರಿದಿದೆ.
ಈ ಕುರಿತು ಹೆಚ್ಚಿನ ಮಾಹಿತಿ ಮುಂದಿನ ತನಿಖೆ ನಂತರ ಬಹಿರಂಗವಾಗುವ ಸಾಧ್ಯತೆ ಇದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಲೋಕಾಯುಕ್ತ ಇಲಾಖೆ ಸ್ಪಷ್ಟಪಡಿಸಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…