ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿರುವುದು ಸೇರಿದಂತೆ ಹಲವು ಅಕ್ರಮಗಳು ಪತ್ತೆಯಾಗಿವೆ.
ಕಳೆದ ಎರಡು ದಿನಗಳಿಂದ ಲೋಕಾಯುಕ್ತ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆಗಳು ಹಾಗೂ ಖಾಸಗಿ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಗೌಪ್ಯ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಹಲವು ಅಕ್ರಮಗಳು ಮತ್ತು ನಿರ್ಲಕ್ಷ್ಯಗಳು ಬಹಿರಂಗಗೊಂಡಿದ್ದು, ವಿವರವಾದ ವರದಿ ಸಿದ್ಧಪಡಿಸಲಾಗಿದೆ.
ಪಿಸಿ & ಪಿಎನ್ಡಿಟಿ ಕಾಯಿದೆ ಪ್ರಕಾರ, ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್ಗಳನ್ನು ಪ್ರತಿ 90 ದಿನಕ್ಕೊಮ್ಮೆ ಪರಿಶೀಲಿಸಬೇಕು. ಆದರೆ, ಈ ಕುರಿತು ಡಿಎಚ್ಒ ಕಚೇರಿಯಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸದಿರುವುದು ಪತ್ತೆಯಾಗಿದೆ. ಅಲ್ಲದೆ, ಮಂಡ್ಯ ಮತ್ತು ಪಾಂಡವಪುರ ಉಪವಿಭಾಗಾಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸಬೇಕಿದ್ದರೂ, ಅದು ನಡೆದಿಲ್ಲ ಎಂಬುದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಪರಿಶೀಲನೆ ವೇಳೆ 7 ಅಪ್ರಾಪ್ತ ಗರ್ಭಿಣಿಯರಿಗೆ ನಿಯಮ ಉಲ್ಲಂಘಿಸಿ ಸ್ಕ್ಯಾನಿಂಗ್ ಮಾಡಿರುವುದು ದೃಢಪಟ್ಟಿದೆ. ಜೊತೆಗೆ, 18ರಿಂದ 20 ವರ್ಷದೊಳಗಿನ ಮಹಿಳೆಯರಿಗೆ ವಯಸ್ಸಿನ ದೃಢೀಕರಣ ದಾಖಲೆ ಪಡೆಯದೇ 64 ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಲಾಗಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಂದಿದೆ.
ಇದಲ್ಲದೆ, ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಸ್ಕ್ಯಾನಿಂಗ್ ವರದಿಗಳನ್ನು ಸರಿಯಾಗಿ ಸಂಗ್ರಹಿಸದೇ ಇರುವುದಲ್ಲದೆ, ದಾಖಲಾದ ಮಾಹಿತಿ ಮತ್ತು ವಾಸ್ತವಿಕ ವರದಿಗಳ ನಡುವೆ ವ್ಯತ್ಯಾಸ ಕಂಡುಬಂದಿದೆ.
ಮತ್ತೊಂದೆಡೆ, ಸರಕಾರಿ ಆಸ್ಪತ್ರೆಗಳ ಸ್ತ್ರೀರೋಗ ತಜ್ಞರು ಗರ್ಭಿಣಿಯರನ್ನು ಉನ್ನತ ದರ್ಜೆಯ ಸರಕಾರಿ ಆಸ್ಪತ್ರೆಗಳಿಗೆ ಶಿಫಾರಸು ಮಾಡುವ ಬದಲು ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಿಗೆ ರೆಫರ್ ಮಾಡಿರುವುದು ಕೂಡ ಬೆಳಕಿಗೆ ಬಂದಿದೆ. ಇದರಿಂದ ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಪ್ರಯತ್ನ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಒಟ್ಟಾರೆ, ಆರೋಗ್ಯ ಇಲಾಖೆಯಲ್ಲಿ ಗಂಭೀರ ನಿರ್ಲಕ್ಷ್ಯ ಮತ್ತು ನಿಯಮ ಉಲ್ಲಂಘನೆ ನಡೆದಿರುವುದು ಈ ದಾಳಿಯಿಂದ ಬಹಿರಂಗವಾಗಿದ್ದು, ಮುಂದಿನ ಕ್ರಮಗಳತ್ತ ಎಲ್ಲರ ಗಮನ ಸೆಳೆಯಲಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…
ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…
ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…
ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…