ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿರುವುದು ಸೇರಿದಂತೆ ಹಲವು ಅಕ್ರಮಗಳು ಪತ್ತೆಯಾಗಿವೆ.
ಕಳೆದ ಎರಡು ದಿನಗಳಿಂದ ಲೋಕಾಯುಕ್ತ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆಗಳು ಹಾಗೂ ಖಾಸಗಿ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಗೌಪ್ಯ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಹಲವು ಅಕ್ರಮಗಳು ಮತ್ತು ನಿರ್ಲಕ್ಷ್ಯಗಳು ಬಹಿರಂಗಗೊಂಡಿದ್ದು, ವಿವರವಾದ ವರದಿ ಸಿದ್ಧಪಡಿಸಲಾಗಿದೆ.
ಪಿಸಿ & ಪಿಎನ್ಡಿಟಿ ಕಾಯಿದೆ ಪ್ರಕಾರ, ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್ಗಳನ್ನು ಪ್ರತಿ 90 ದಿನಕ್ಕೊಮ್ಮೆ ಪರಿಶೀಲಿಸಬೇಕು. ಆದರೆ, ಈ ಕುರಿತು ಡಿಎಚ್ಒ ಕಚೇರಿಯಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸದಿರುವುದು ಪತ್ತೆಯಾಗಿದೆ. ಅಲ್ಲದೆ, ಮಂಡ್ಯ ಮತ್ತು ಪಾಂಡವಪುರ ಉಪವಿಭಾಗಾಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸಬೇಕಿದ್ದರೂ, ಅದು ನಡೆದಿಲ್ಲ ಎಂಬುದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಪರಿಶೀಲನೆ ವೇಳೆ 7 ಅಪ್ರಾಪ್ತ ಗರ್ಭಿಣಿಯರಿಗೆ ನಿಯಮ ಉಲ್ಲಂಘಿಸಿ ಸ್ಕ್ಯಾನಿಂಗ್ ಮಾಡಿರುವುದು ದೃಢಪಟ್ಟಿದೆ. ಜೊತೆಗೆ, 18ರಿಂದ 20 ವರ್ಷದೊಳಗಿನ ಮಹಿಳೆಯರಿಗೆ ವಯಸ್ಸಿನ ದೃಢೀಕರಣ ದಾಖಲೆ ಪಡೆಯದೇ 64 ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಲಾಗಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಂದಿದೆ.
ಇದಲ್ಲದೆ, ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಸ್ಕ್ಯಾನಿಂಗ್ ವರದಿಗಳನ್ನು ಸರಿಯಾಗಿ ಸಂಗ್ರಹಿಸದೇ ಇರುವುದಲ್ಲದೆ, ದಾಖಲಾದ ಮಾಹಿತಿ ಮತ್ತು ವಾಸ್ತವಿಕ ವರದಿಗಳ ನಡುವೆ ವ್ಯತ್ಯಾಸ ಕಂಡುಬಂದಿದೆ.
ಮತ್ತೊಂದೆಡೆ, ಸರಕಾರಿ ಆಸ್ಪತ್ರೆಗಳ ಸ್ತ್ರೀರೋಗ ತಜ್ಞರು ಗರ್ಭಿಣಿಯರನ್ನು ಉನ್ನತ ದರ್ಜೆಯ ಸರಕಾರಿ ಆಸ್ಪತ್ರೆಗಳಿಗೆ ಶಿಫಾರಸು ಮಾಡುವ ಬದಲು ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಿಗೆ ರೆಫರ್ ಮಾಡಿರುವುದು ಕೂಡ ಬೆಳಕಿಗೆ ಬಂದಿದೆ. ಇದರಿಂದ ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಪ್ರಯತ್ನ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಒಟ್ಟಾರೆ, ಆರೋಗ್ಯ ಇಲಾಖೆಯಲ್ಲಿ ಗಂಭೀರ ನಿರ್ಲಕ್ಷ್ಯ ಮತ್ತು ನಿಯಮ ಉಲ್ಲಂಘನೆ ನಡೆದಿರುವುದು ಈ ದಾಳಿಯಿಂದ ಬಹಿರಂಗವಾಗಿದ್ದು, ಮುಂದಿನ ಕ್ರಮಗಳತ್ತ ಎಲ್ಲರ ಗಮನ ಸೆಳೆಯಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…