ಚಿಕ್ಕೋಡಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಪ್ರಾದೇಶಿಕ ಕಚೇರಿಯಲ್ಲಿ ಲಂಚ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೆಟ್ರೋಲ್ ಬಂಕ್‌ಗೆ ಅಗತ್ಯವಿರುವ ನೊ ಎನ್‌ಸಿ (NOC) ನೀಡಲು ಹಣದ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಧಿಡೀರ್ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ದೂರುದಾರ ಸಾಗರ ದೋಡಮನಿ ಎಂಬುವವರಿಂದ ಬಂದ ಖಚಿತ ಮಾಹಿತಿ ಆಧರಿಸಿ, ಲೋಕಾಯುಕ್ತ ಡಿವೈಎಸ್ಪಿ ಬಿ.ಎಸ್. ಪಾಟೀಲ ಹಾಗೂ ಇನ್ಸ್ಪೆಕ್ಟರ್ ಎಸ್.ಎಚ್. ಹೋಸಮನಿ ನೇತೃತ್ವದ ತಂಡ ದಾಳಿ ನಡೆಸಿದ್ದು, ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲೇ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಶೋಭಾ ಪೊಳ್ ಹಾಗೂ ಕಂಪ್ಯೂಟರ್ ಆಪರೇಟರ್ ಪ್ರವೀಣ ದೊಡಮನಿ ಅವರನ್ನು ಲಂಚ ಸ್ವೀಕಾರದ ಪ್ರಕರಣದಲ್ಲಿ ಬಂಧಿಸಲಾಗಿದೆ.

ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿರುವ ಲೋಕಾಯುಕ್ತ ತಂಡವು ಹೆಚ್ಚಿನ ತನಿಖೆ ನಡೆಸುತ್ತಿದೆ. ಸಾರ್ವಜನಿಕ ಸೇವಾ ಕಚೇರಿಗಳಲ್ಲಿರುವ ಭ್ರಷ್ಟಾಚಾರ ನಿಗ್ರಹಿಸಲು ರಾಜ್ಯ ಲೋಕಾಯುಕ್ತ ಸಂಸ್ಥೆ ಕ್ರಮ ಕೈಗೊಂಡಿದ್ದಾರೆ.

ಈ ಪ್ರಕರಣದ ಸಂಬಂಧ ಅಧಿಕೃತ ದೂರು ದಾಖಲಿಸಲಾಗಿ, ಮುಂದಿನ ಹಂತದ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Related News

error: Content is protected !!