ಚಿಕ್ಕೋಡಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಪ್ರಾದೇಶಿಕ ಕಚೇರಿಯಲ್ಲಿ ಲಂಚ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೆಟ್ರೋಲ್ ಬಂಕ್ಗೆ ಅಗತ್ಯವಿರುವ ನೊ ಎನ್ಸಿ (NOC) ನೀಡಲು ಹಣದ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಧಿಡೀರ್ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ದೂರುದಾರ ಸಾಗರ ದೋಡಮನಿ ಎಂಬುವವರಿಂದ ಬಂದ ಖಚಿತ ಮಾಹಿತಿ ಆಧರಿಸಿ, ಲೋಕಾಯುಕ್ತ ಡಿವೈಎಸ್ಪಿ ಬಿ.ಎಸ್. ಪಾಟೀಲ ಹಾಗೂ ಇನ್ಸ್ಪೆಕ್ಟರ್ ಎಸ್.ಎಚ್. ಹೋಸಮನಿ ನೇತೃತ್ವದ ತಂಡ ದಾಳಿ ನಡೆಸಿದ್ದು, ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲೇ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಶೋಭಾ ಪೊಳ್ ಹಾಗೂ ಕಂಪ್ಯೂಟರ್ ಆಪರೇಟರ್ ಪ್ರವೀಣ ದೊಡಮನಿ ಅವರನ್ನು ಲಂಚ ಸ್ವೀಕಾರದ ಪ್ರಕರಣದಲ್ಲಿ ಬಂಧಿಸಲಾಗಿದೆ.
ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿರುವ ಲೋಕಾಯುಕ್ತ ತಂಡವು ಹೆಚ್ಚಿನ ತನಿಖೆ ನಡೆಸುತ್ತಿದೆ. ಸಾರ್ವಜನಿಕ ಸೇವಾ ಕಚೇರಿಗಳಲ್ಲಿರುವ ಭ್ರಷ್ಟಾಚಾರ ನಿಗ್ರಹಿಸಲು ರಾಜ್ಯ ಲೋಕಾಯುಕ್ತ ಸಂಸ್ಥೆ ಕ್ರಮ ಕೈಗೊಂಡಿದ್ದಾರೆ.
ಈ ಪ್ರಕರಣದ ಸಂಬಂಧ ಅಧಿಕೃತ ದೂರು ದಾಖಲಿಸಲಾಗಿ, ಮುಂದಿನ ಹಂತದ ತನಿಖೆ ಮುಂದುವರಿದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…