Categories: CorruptionLatest

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ತಿಪ್ಪೇಸ್ವಾಮಿ ಅವರ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಿಢೀರ್ ದಾಳಿ ನಡೆಸಿದ್ದಾರೆ.

ಬಳ್ಳಾರಿಯ ಹನುಮನಗರದಲ್ಲಿರುವ ನಿವಾಸ, ಕುಡತಿನಿಯಲ್ಲಿನ ಮನೆ ಹಾಗೂ ಸಿರುಗುಪ್ಪದಲ್ಲಿರುವ ಕಚೇರಿ ಸೇರಿದಂತೆ ಮೂರು ಸ್ಥಳಗಳಲ್ಲಿ ಲೋಕಾಯುಕ್ತ ಎಸ್ಪಿ ಎನ್. ವಾಸುದೇವರಾಮ ಅವರ ನೇತೃತ್ವದ ತಂಡಗಳು ಏಕಕಾಲಕ್ಕೆ ಶೋಧ ಕಾರ್ಯಾಚರಣೆ ನಡೆಸಿವೆ.

ದಾಳಿಯ ವೇಳೆ ಬಳ್ಳಾರಿ ಹಾಗೂ ಸಂಡೂರು ಭಾಗಗಳಲ್ಲಿ ಹೊಂದಿರುವ 8 ಎಕರೆ ಜಮೀನಿನ ದಾಖಲೆಗಳು, 12 ನಿವೇಶನಗಳ ದಾಖಲೆ ಪತ್ರಗಳು, 290 ಗ್ರಾಂ ಚಿನ್ನಾಭರಣ, 800 ಗ್ರಾಂ ಬೆಳ್ಳಿ ಆಭರಣ, ನಗದು ಹಣ, ಬ್ಯಾಂಕ್ ಖಾತೆಯಲ್ಲಿದ್ದ ₹50 ಲಕ್ಷ ಮೊತ್ತ ಹಾಗೂ ಕಾರು, ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 8 ವಾಹನಗಳ ಮಾಹಿತಿ ಪತ್ತೆಯಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ತಿಪ್ಪೇಸ್ವಾಮಿ ಅವರು ತಮ್ಮ ಆದಾಯಕ್ಕಿಂತ ಶೇ.174ರಷ್ಟು ಅಧಿಕ ಆಸ್ತಿ ಸಂಪಾದಿಸಿರುವುದು ಬೆಳಕಿಗೆ ಬಂದಿದ್ದು, ಒಟ್ಟು ₹2.20 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪಾಧೀಕ್ಷಕರಾದ ಸಿದ್ದಪ್ಪ ಎಸ್. ಬೀಳಗಿ, ಸಚಿನ್ ಎಸ್. ಚಲುವಾದಿ, ಪೊಲೀಸ್ ನಿರೀಕ್ಷಕರಾದ ಸುರೇಶ್ ಎಂ. ಬಾವಿಮನಿ, ಅಮರೇಶ್ ಸೇರಿದಂತೆ ಸುಮಾರು 30 ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದು, ತನಿಖೆ ಪೂರ್ಣಗೊಂಡ ಬಳಿಕ ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

1 hour ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

1 hour ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

1 hour ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

1 hour ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

1 hour ago

ಪಿಜಿ ಮುಂದೆ ಮದ್ಯಪಾನಕ್ಕೆ ವಿರೋಧ: ಮಾಲೀಕನ ಮೇಲೆ ಹಲ್ಲೆ, ಚಿಕಿತ್ಸೆ ಫಲಿಸದೆ ಸಾವು

ಬೆಂಗಳೂರು ನಗರದಲ್ಲಿ ಪಿಜಿ ಮುಂದೆ ಮದ್ಯಪಾನ ಮಾಡುತ್ತಿದ್ದವರನ್ನು ಪ್ರಶ್ನಿಸಿದ್ದ ಕಾರಣಕ್ಕೆ ಪಿಜಿ ಮಾಲೀಕನೊಬ್ಬ ಹತ್ಯೆಯಾಗಿರುವ ದುರ್ಘಟನೆ ರಾಮಮೂರ್ತಿ ನಗರ ಪೊಲೀಸ್…

1 hour ago