ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ತಿಪ್ಪೇಸ್ವಾಮಿ ಅವರ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಿಢೀರ್ ದಾಳಿ ನಡೆಸಿದ್ದಾರೆ.
ಬಳ್ಳಾರಿಯ ಹನುಮನಗರದಲ್ಲಿರುವ ನಿವಾಸ, ಕುಡತಿನಿಯಲ್ಲಿನ ಮನೆ ಹಾಗೂ ಸಿರುಗುಪ್ಪದಲ್ಲಿರುವ ಕಚೇರಿ ಸೇರಿದಂತೆ ಮೂರು ಸ್ಥಳಗಳಲ್ಲಿ ಲೋಕಾಯುಕ್ತ ಎಸ್ಪಿ ಎನ್. ವಾಸುದೇವರಾಮ ಅವರ ನೇತೃತ್ವದ ತಂಡಗಳು ಏಕಕಾಲಕ್ಕೆ ಶೋಧ ಕಾರ್ಯಾಚರಣೆ ನಡೆಸಿವೆ.
ದಾಳಿಯ ವೇಳೆ ಬಳ್ಳಾರಿ ಹಾಗೂ ಸಂಡೂರು ಭಾಗಗಳಲ್ಲಿ ಹೊಂದಿರುವ 8 ಎಕರೆ ಜಮೀನಿನ ದಾಖಲೆಗಳು, 12 ನಿವೇಶನಗಳ ದಾಖಲೆ ಪತ್ರಗಳು, 290 ಗ್ರಾಂ ಚಿನ್ನಾಭರಣ, 800 ಗ್ರಾಂ ಬೆಳ್ಳಿ ಆಭರಣ, ನಗದು ಹಣ, ಬ್ಯಾಂಕ್ ಖಾತೆಯಲ್ಲಿದ್ದ ₹50 ಲಕ್ಷ ಮೊತ್ತ ಹಾಗೂ ಕಾರು, ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 8 ವಾಹನಗಳ ಮಾಹಿತಿ ಪತ್ತೆಯಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ತಿಪ್ಪೇಸ್ವಾಮಿ ಅವರು ತಮ್ಮ ಆದಾಯಕ್ಕಿಂತ ಶೇ.174ರಷ್ಟು ಅಧಿಕ ಆಸ್ತಿ ಸಂಪಾದಿಸಿರುವುದು ಬೆಳಕಿಗೆ ಬಂದಿದ್ದು, ಒಟ್ಟು ₹2.20 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪಾಧೀಕ್ಷಕರಾದ ಸಿದ್ದಪ್ಪ ಎಸ್. ಬೀಳಗಿ, ಸಚಿನ್ ಎಸ್. ಚಲುವಾದಿ, ಪೊಲೀಸ್ ನಿರೀಕ್ಷಕರಾದ ಸುರೇಶ್ ಎಂ. ಬಾವಿಮನಿ, ಅಮರೇಶ್ ಸೇರಿದಂತೆ ಸುಮಾರು 30 ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದು, ತನಿಖೆ ಪೂರ್ಣಗೊಂಡ ಬಳಿಕ ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…