ರಾಜ್ಯದಲ್ಲಿ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಭಾರೀ ಕಾರ್ಯಾಚರಣೆ ನಡೆಸಿದ್ದು, ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಚಿತ್ರದುರ್ಗದಲ್ಲಿ ಮಾಜಿ ಅಕೌಂಟೆಂಟ್ ಮನೆ ಮೇಲೆ ದಾಳಿ
ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೆದೇಹಳ್ಳಿ ಬಡಾವಣೆಯ ನಿವಾಸ ಹಾಗೂ ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆಯಲ್ಲಿ ಶೋಧ ಕಾರ್ಯ ನಡೆದಿದೆ. ಸುಶೀಲಮ್ಮ ಅವರು ಒಂದು ವರ್ಷ ಹಿಂದೆ ವಿಆರ್ಎಸ್ ಪಡೆದಿದ್ದು, ಸೇವೆಯಲ್ಲಿದ್ದ ವೇಳೆ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ಮತ್ತು ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಪರಿಶೀಲನೆ ಮುಂದುವರಿದಿದೆ.
ಬಳ್ಳಾರಿಯಲ್ಲಿ ಸಹಾಯಕ ನಿರ್ದೇಶಕ ಟಾರ್ಗೆಟ್
ಬಳ್ಳಾರಿಯಲ್ಲಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಸಿದ್ಧಾರ್ಥ್ ನಗರದಲ್ಲಿನ ನಿವಾಸ ಸೇರಿದಂತೆ ನಾಲ್ಕು ಕಡೆಗಳಲ್ಲಿ ಶೋಧ ನಡೆದಿದೆ. ಅವರ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಗಳಿದ್ದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಶಿವಣ್ಣ ಬಳಸುತ್ತಿದ್ದ ಸರ್ಕಾರಿ ಬೊಲೆರೋ ವಾಹನವನ್ನು ಕೂಡ ಪರಿಶೀಲಿಸಲಾಗಿದ್ದು, ಅದರಲ್ಲಿ ಪತ್ತೆಯಾದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.
ಮೈಸೂರು-ಮಂಡ್ಯದಲ್ಲಿ ಎಇಇ ರೇವಣ್ಣ ಮನೆಗಳ ಪರಿಶೀಲನೆ
ಮೈಸೂರಿನಲ್ಲಿ ಲೋಕೋಪಯೋಗಿ ಇಲಾಖೆಯ ಎಇಇ ರೇವಣ್ಣ ಅವರ ಕಚೇರಿ ಹಾಗೂ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೈಸೂರು ಮತ್ತು ಮಂಡ್ಯದ ಎರಡು ನಿವಾಸಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.
ಶಿವಮೊಗ್ಗದಲ್ಲಿ ಜಿಲ್ಲಾ ಅಧಿಕಾರಿ ಮನೆ ಮೇಲೆ ದಾಳಿ
ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್ ಅವರ ಮನೆ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ ನಡೆದಿದೆ. ಶಿವಮೊಗ್ಗ, ಶಿಕಾರಿಪುರ ಹಾಗೂ ಸಾಗರ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಶಿಕಾರಿಪುರದ ಚೆನ್ನಕೇಶವ ನಗರದಲ್ಲಿನ ಮನೆ, ತೋಟ, ಫಾರ್ಮ್ ಹೌಸ್ ಹಾಗೂ ಸಾಗರದ ಬಳಿಯ ಶಾಲೆಯ ಮೇಲೂ ಪರಿಶೀಲನೆ ನಡೆಸಲಾಗಿದೆ. ನಗರದ ನವಿಲೆ ಪ್ರದೇಶದ ಮನೆ ಮತ್ತು ಕೆಇಬಿ ಸರ್ಕಲ್ ಸಮೀಪದ ಬಿಸಿಎಂ ಕಚೇರಿಯಲ್ಲೂ ದಾಖಲೆ ಪರಿಶೀಲನೆ ನಡೆದಿದೆ.
ಇದೇ ವೇಳೆ, ಬಿಸಿಎಂ ಇಲಾಖೆಯ ರಾಘವೇಂದ್ರ ಎಂಬವರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಿದ್ದು, ಶಿವಮೊಗ್ಗದ ಚಾಲುಕ್ಯನಗರದಲ್ಲಿನ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಬಹು ತಂಡಗಳ ಕಾರ್ಯಾಚರಣೆ
ಒಟ್ಟು ಹಲವು ತಂಡಗಳಾಗಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಶಿವಮೊಗ್ಗ, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಯ ಅಧಿಕಾರಿಗಳೂ ಭಾಗಿಯಾಗಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆಯುತ್ತಿದೆ.
ರಾಜ್ಯಾದ್ಯಂತ ನಡೆದ ಈ ಸಮನ್ವಿತ ದಾಳಿ, ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಸಂಸ್ಥೆಯ ಕಟ್ಟುನಿಟ್ಟಿನ ಕ್ರಮಕ್ಕೆ ಮತ್ತೊಮ್ಮೆ ಸಾಕ್ಷಿಯಾಗಿದೆ. ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳು ಮುಂದಿನ ದಿನಗಳಲ್ಲಿ ಹೊರಬೀಳುವ ಸಾಧ್ಯತೆ ಇದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…