Latest

ಕರ್ನಾಟಕದ ವಿವಿಧೆಡೆ ಲೋಕಾಯುಕ್ತ ದಾಳಿ: ಅಧಿಕೃತ ನಿವಾಸಗಳಿಂದ ಲಕ್ಷಾಂತರ ನಗದು, ಬಂಗಾರದ ಒಡವೆ, ಜಮೀನು ದಾಖಲೆಗಳು ಪತ್ತೆ

ಬೆಂಗಳೂರು, ಜುಲೈ 23: ರಾಜ್ಯದಲ್ಲಿ ಭ್ರಷ್ಟಾಚಾರ ಎದುರಿಸಲು ಚಾಲನೆ ನೀಡಿರುವ ಲೋಕಾಯುಕ್ತ ಸಂಸ್ಥೆ ಇಂದು ಕರ್ನಾಟಕದ ಹಲವೆಡೆ ಭರ್ಜರಿ ದಾಳಿಗಳನ್ನು ನಡೆಸಿದ್ದು, ಅಧಿಕಾರಿಗಳ ನಿವಾಸಗಳಿಂದ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಕೊಪ್ಪಳ:
ಕೊಪ್ಪಳ ಜಿಲ್ಲೆಯಲ್ಲಿ ಡಿಐಸಿ ಉಪ ನಿರ್ದೇಶಕ ಎಸ್.ಎಂ. ಚವ್ಹಾಣ ಅವರ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಆರ್. ವಸಂತಕುಮಾರ್ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ. ಅಧಿಕೃತ ನಿವಾಸದಲ್ಲಿ ದಾಳಿ ವೇಳೆ ಇದೀಗವರೆಗೂ 52 ಲಕ್ಷ ರೂಪಾಯಿ ನಗದು, 1 ಕೆಜಿ ಬಂಗಾರ, 3 ಕೆಜಿ ಬೆಳ್ಳಿ, 13 ಸೈಟ್, ಆರು ಎಕರೆ ಜಮೀನು, ಮತ್ತು ಮೂರು ಮನೆಗಳ ದಾಖಲೆಗಳು ಪತ್ತೆಯಾಗಿದೆ. ಕೊಪ್ಪಳದಲ್ಲಿ ಎರಡು ಮನೆಗಳು ಹಾಗೂ ಹುಬ್ಬಳ್ಳಿಯಲ್ಲಿ ಒಂದು ಮನೆ ಹೊಂದಿರುವುದೂ ದಾಖಲೆಗಳಿಂದ ದೃಢಪಟ್ಟಿದೆ. ಹಣ ಎಣಿಕೆ ಕಾರ್ಯ ಇನ್ನೂ ಮುಂದುವರಿದಿದ್ದು, ಹೆಚ್ಚು ಸಂಪತ್ತಿನ ಪತ್ತೆಯಾಗುವ ಸಾಧ್ಯತೆ ಇದೆ.

ಕಲ್ಬುರ್ಗಿ ಮತ್ತು ಬೀದರ್:
ಇದೇ ವೇಳೆ, ಕಲ್ಬುರ್ಗಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸುನೀಲ್ ಕುಮಾರ್ ಅವರ ವಿರುದ್ಧವೂ ಭರ್ಜರಿ ದಾಳಿ ನಡೆದಿದೆ. ಕಲ್ಬುರ್ಗಿಯ ಕಚೇರಿ, ಬಾಡಿಗೆ ಮನೆಯಲ್ಲಿ ಹಾಗೂ ಬೀದರ್ ಜಿಲ್ಲೆಯ ಜೈಲ್ ಕಾಲೋನಿಯ ಮನೆಯಲ್ಲಿ, ಜೊತೆಗೆ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದಲ್ಲಿರುವ ಮನೆ ಸೇರಿದಂತೆ ನಾಲ್ಕು ಕಡೆ ಏಕಕಾಲಕ್ಕೆ 20 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ದಾಳಿಯಲ್ಲಿ 1 ಕೆಜಿ 266 ಗ್ರಾಂ ಬಂಗಾರದ ಒಡವೆ, ಅಂದಾಜು 2.5 ಕೆಜಿ ಬೆಳ್ಳಿಯ ಆಭರಣಗಳು, 15 ಲಕ್ಷ ರೂಪಾಯಿ ನಗದು, ಮತ್ತು 89 ಲಕ್ಷ ರೂ. ಮೌಲ್ಯದ ವಿವಿಧ ಬ್ಯಾಂಕ್ ಎಫ್‌ಡಿಗಳು ಪತ್ತೆಯಾಗಿವೆ. ಜೊತೆಗೆ 3 ಸೈಟ್‌ಗಳು ಮತ್ತು 1 ಮನೆ ದಾಖಲೆಗಳು ವಶಕ್ಕೆ ಪಡೆಯಲಾಗಿದೆ.

ತೀವ್ರ ತನಿಖೆ ಮುಂದುವರೆದಿದ್ದು, ಎರಡೂ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗದಿತ ಆದಾಯಕ್ಕಿಂತ ಬಹಳಷ್ಟು ಅಧಿಕ ಸಂಪತ್ತನ್ನು ಹೊಂದಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳನ್ನಾಧರಿಸಿ ಈ ದಾಳಿಗಳನ್ನು ನಡೆಸಲಾಗಿದೆ. ಲೋಕಾಯುಕ್ತ ಎಸ್‌ಪಿ ಪ್ರಕಟಣೆಯಲ್ಲಿ, ಇನ್ನು ಮುಂದೆವೂ ಈ ರೀತಿಯ ದಾಳಿ ಮುಂದುವರಿಯಲಿದ್ದು, ಯಾವುದೇ ಅಧಿಕಾರಿ ಭ್ರಷ್ಟಾಚಾರ ಎಸಗಿದರೆ ಕಾನೂನು ಕ್ರಮ ತಪ್ಪದಂತೆ ಜಾರಿಗೆ ತರಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

17 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

17 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

17 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

17 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago