Latest

ಕರ್ನಾಟಕದ ವಿವಿಧೆಡೆ ಲೋಕಾಯುಕ್ತ ದಾಳಿ: ಅಧಿಕೃತ ನಿವಾಸಗಳಿಂದ ಲಕ್ಷಾಂತರ ನಗದು, ಬಂಗಾರದ ಒಡವೆ, ಜಮೀನು ದಾಖಲೆಗಳು ಪತ್ತೆ

ಬೆಂಗಳೂರು, ಜುಲೈ 23: ರಾಜ್ಯದಲ್ಲಿ ಭ್ರಷ್ಟಾಚಾರ ಎದುರಿಸಲು ಚಾಲನೆ ನೀಡಿರುವ ಲೋಕಾಯುಕ್ತ ಸಂಸ್ಥೆ ಇಂದು ಕರ್ನಾಟಕದ ಹಲವೆಡೆ ಭರ್ಜರಿ ದಾಳಿಗಳನ್ನು ನಡೆಸಿದ್ದು, ಅಧಿಕಾರಿಗಳ ನಿವಾಸಗಳಿಂದ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಕೊಪ್ಪಳ:
ಕೊಪ್ಪಳ ಜಿಲ್ಲೆಯಲ್ಲಿ ಡಿಐಸಿ ಉಪ ನಿರ್ದೇಶಕ ಎಸ್.ಎಂ. ಚವ್ಹಾಣ ಅವರ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಆರ್. ವಸಂತಕುಮಾರ್ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ. ಅಧಿಕೃತ ನಿವಾಸದಲ್ಲಿ ದಾಳಿ ವೇಳೆ ಇದೀಗವರೆಗೂ 52 ಲಕ್ಷ ರೂಪಾಯಿ ನಗದು, 1 ಕೆಜಿ ಬಂಗಾರ, 3 ಕೆಜಿ ಬೆಳ್ಳಿ, 13 ಸೈಟ್, ಆರು ಎಕರೆ ಜಮೀನು, ಮತ್ತು ಮೂರು ಮನೆಗಳ ದಾಖಲೆಗಳು ಪತ್ತೆಯಾಗಿದೆ. ಕೊಪ್ಪಳದಲ್ಲಿ ಎರಡು ಮನೆಗಳು ಹಾಗೂ ಹುಬ್ಬಳ್ಳಿಯಲ್ಲಿ ಒಂದು ಮನೆ ಹೊಂದಿರುವುದೂ ದಾಖಲೆಗಳಿಂದ ದೃಢಪಟ್ಟಿದೆ. ಹಣ ಎಣಿಕೆ ಕಾರ್ಯ ಇನ್ನೂ ಮುಂದುವರಿದಿದ್ದು, ಹೆಚ್ಚು ಸಂಪತ್ತಿನ ಪತ್ತೆಯಾಗುವ ಸಾಧ್ಯತೆ ಇದೆ.

ಕಲ್ಬುರ್ಗಿ ಮತ್ತು ಬೀದರ್:
ಇದೇ ವೇಳೆ, ಕಲ್ಬುರ್ಗಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸುನೀಲ್ ಕುಮಾರ್ ಅವರ ವಿರುದ್ಧವೂ ಭರ್ಜರಿ ದಾಳಿ ನಡೆದಿದೆ. ಕಲ್ಬುರ್ಗಿಯ ಕಚೇರಿ, ಬಾಡಿಗೆ ಮನೆಯಲ್ಲಿ ಹಾಗೂ ಬೀದರ್ ಜಿಲ್ಲೆಯ ಜೈಲ್ ಕಾಲೋನಿಯ ಮನೆಯಲ್ಲಿ, ಜೊತೆಗೆ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದಲ್ಲಿರುವ ಮನೆ ಸೇರಿದಂತೆ ನಾಲ್ಕು ಕಡೆ ಏಕಕಾಲಕ್ಕೆ 20 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ದಾಳಿಯಲ್ಲಿ 1 ಕೆಜಿ 266 ಗ್ರಾಂ ಬಂಗಾರದ ಒಡವೆ, ಅಂದಾಜು 2.5 ಕೆಜಿ ಬೆಳ್ಳಿಯ ಆಭರಣಗಳು, 15 ಲಕ್ಷ ರೂಪಾಯಿ ನಗದು, ಮತ್ತು 89 ಲಕ್ಷ ರೂ. ಮೌಲ್ಯದ ವಿವಿಧ ಬ್ಯಾಂಕ್ ಎಫ್‌ಡಿಗಳು ಪತ್ತೆಯಾಗಿವೆ. ಜೊತೆಗೆ 3 ಸೈಟ್‌ಗಳು ಮತ್ತು 1 ಮನೆ ದಾಖಲೆಗಳು ವಶಕ್ಕೆ ಪಡೆಯಲಾಗಿದೆ.

ತೀವ್ರ ತನಿಖೆ ಮುಂದುವರೆದಿದ್ದು, ಎರಡೂ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗದಿತ ಆದಾಯಕ್ಕಿಂತ ಬಹಳಷ್ಟು ಅಧಿಕ ಸಂಪತ್ತನ್ನು ಹೊಂದಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳನ್ನಾಧರಿಸಿ ಈ ದಾಳಿಗಳನ್ನು ನಡೆಸಲಾಗಿದೆ. ಲೋಕಾಯುಕ್ತ ಎಸ್‌ಪಿ ಪ್ರಕಟಣೆಯಲ್ಲಿ, ಇನ್ನು ಮುಂದೆವೂ ಈ ರೀತಿಯ ದಾಳಿ ಮುಂದುವರಿಯಲಿದ್ದು, ಯಾವುದೇ ಅಧಿಕಾರಿ ಭ್ರಷ್ಟಾಚಾರ ಎಸಗಿದರೆ ಕಾನೂನು ಕ್ರಮ ತಪ್ಪದಂತೆ ಜಾರಿಗೆ ತರಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

59 minutes ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

17 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

23 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

23 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago