Latest

ಕರ್ನಾಟಕದ ವಿವಿಧೆಡೆ ಲೋಕಾಯುಕ್ತ ದಾಳಿ: ಅಧಿಕೃತ ನಿವಾಸಗಳಿಂದ ಲಕ್ಷಾಂತರ ನಗದು, ಬಂಗಾರದ ಒಡವೆ, ಜಮೀನು ದಾಖಲೆಗಳು ಪತ್ತೆ

ಬೆಂಗಳೂರು, ಜುಲೈ 23: ರಾಜ್ಯದಲ್ಲಿ ಭ್ರಷ್ಟಾಚಾರ ಎದುರಿಸಲು ಚಾಲನೆ ನೀಡಿರುವ ಲೋಕಾಯುಕ್ತ ಸಂಸ್ಥೆ ಇಂದು ಕರ್ನಾಟಕದ ಹಲವೆಡೆ ಭರ್ಜರಿ ದಾಳಿಗಳನ್ನು ನಡೆಸಿದ್ದು, ಅಧಿಕಾರಿಗಳ ನಿವಾಸಗಳಿಂದ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಕೊಪ್ಪಳ:
ಕೊಪ್ಪಳ ಜಿಲ್ಲೆಯಲ್ಲಿ ಡಿಐಸಿ ಉಪ ನಿರ್ದೇಶಕ ಎಸ್.ಎಂ. ಚವ್ಹಾಣ ಅವರ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಆರ್. ವಸಂತಕುಮಾರ್ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ. ಅಧಿಕೃತ ನಿವಾಸದಲ್ಲಿ ದಾಳಿ ವೇಳೆ ಇದೀಗವರೆಗೂ 52 ಲಕ್ಷ ರೂಪಾಯಿ ನಗದು, 1 ಕೆಜಿ ಬಂಗಾರ, 3 ಕೆಜಿ ಬೆಳ್ಳಿ, 13 ಸೈಟ್, ಆರು ಎಕರೆ ಜಮೀನು, ಮತ್ತು ಮೂರು ಮನೆಗಳ ದಾಖಲೆಗಳು ಪತ್ತೆಯಾಗಿದೆ. ಕೊಪ್ಪಳದಲ್ಲಿ ಎರಡು ಮನೆಗಳು ಹಾಗೂ ಹುಬ್ಬಳ್ಳಿಯಲ್ಲಿ ಒಂದು ಮನೆ ಹೊಂದಿರುವುದೂ ದಾಖಲೆಗಳಿಂದ ದೃಢಪಟ್ಟಿದೆ. ಹಣ ಎಣಿಕೆ ಕಾರ್ಯ ಇನ್ನೂ ಮುಂದುವರಿದಿದ್ದು, ಹೆಚ್ಚು ಸಂಪತ್ತಿನ ಪತ್ತೆಯಾಗುವ ಸಾಧ್ಯತೆ ಇದೆ.

ಕಲ್ಬುರ್ಗಿ ಮತ್ತು ಬೀದರ್:
ಇದೇ ವೇಳೆ, ಕಲ್ಬುರ್ಗಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸುನೀಲ್ ಕುಮಾರ್ ಅವರ ವಿರುದ್ಧವೂ ಭರ್ಜರಿ ದಾಳಿ ನಡೆದಿದೆ. ಕಲ್ಬುರ್ಗಿಯ ಕಚೇರಿ, ಬಾಡಿಗೆ ಮನೆಯಲ್ಲಿ ಹಾಗೂ ಬೀದರ್ ಜಿಲ್ಲೆಯ ಜೈಲ್ ಕಾಲೋನಿಯ ಮನೆಯಲ್ಲಿ, ಜೊತೆಗೆ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದಲ್ಲಿರುವ ಮನೆ ಸೇರಿದಂತೆ ನಾಲ್ಕು ಕಡೆ ಏಕಕಾಲಕ್ಕೆ 20 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ದಾಳಿಯಲ್ಲಿ 1 ಕೆಜಿ 266 ಗ್ರಾಂ ಬಂಗಾರದ ಒಡವೆ, ಅಂದಾಜು 2.5 ಕೆಜಿ ಬೆಳ್ಳಿಯ ಆಭರಣಗಳು, 15 ಲಕ್ಷ ರೂಪಾಯಿ ನಗದು, ಮತ್ತು 89 ಲಕ್ಷ ರೂ. ಮೌಲ್ಯದ ವಿವಿಧ ಬ್ಯಾಂಕ್ ಎಫ್‌ಡಿಗಳು ಪತ್ತೆಯಾಗಿವೆ. ಜೊತೆಗೆ 3 ಸೈಟ್‌ಗಳು ಮತ್ತು 1 ಮನೆ ದಾಖಲೆಗಳು ವಶಕ್ಕೆ ಪಡೆಯಲಾಗಿದೆ.

ತೀವ್ರ ತನಿಖೆ ಮುಂದುವರೆದಿದ್ದು, ಎರಡೂ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗದಿತ ಆದಾಯಕ್ಕಿಂತ ಬಹಳಷ್ಟು ಅಧಿಕ ಸಂಪತ್ತನ್ನು ಹೊಂದಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳನ್ನಾಧರಿಸಿ ಈ ದಾಳಿಗಳನ್ನು ನಡೆಸಲಾಗಿದೆ. ಲೋಕಾಯುಕ್ತ ಎಸ್‌ಪಿ ಪ್ರಕಟಣೆಯಲ್ಲಿ, ಇನ್ನು ಮುಂದೆವೂ ಈ ರೀತಿಯ ದಾಳಿ ಮುಂದುವರಿಯಲಿದ್ದು, ಯಾವುದೇ ಅಧಿಕಾರಿ ಭ್ರಷ್ಟಾಚಾರ ಎಸಗಿದರೆ ಕಾನೂನು ಕ್ರಮ ತಪ್ಪದಂತೆ ಜಾರಿಗೆ ತರಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

3 hours ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

3 hours ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

14 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

14 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

14 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

14 hours ago