ಶಿವಮೊಗ್ಗ: ರಾಜ್ಯದಾದ್ಯಂತ ಭ್ರಷ್ಟಾಚಾರ ವಿರುದ್ಧ ತೀವ್ರ ಕ್ರಮಕ್ಕೆ ಮುಂದಾದ ಲೋಕಾಯುಕ್ತ ಸಂಸ್ಥೆ ಇಂದು (ಮಂಗಳವಾರ) ವಿವಿಧ ಜಿಲ್ಲೆಗಳಾದ್ಯಂತ ಏಕಕಾಲದಲ್ಲಿ ದಾಳಿಗೆ ಕೈಹಾಕಿದೆ. ಈ ಕ್ರಮದ ಭಾಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿಯೂ ಮೂರು ವಿಭಿನ್ನ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡಗಳು ಪರಿಶೀಲನೆ ನಡೆಸಿವೆ.
ಲೋಕಾಯುಕ್ತ ಎಸ್ಪಿ ಎಂ.ಎಚ್. ಮಂಜುನಾಥ್ ಚೌಧರಿ ನೇತೃತ್ವದ ತಂಡ, ಸಾವಯವ ಕೃಷಿ ಹಾಗೂ ಸಂಶೋಧನಾ ನಿರ್ದೇಶಕರಾಗಿರುವ ಡಾ. ಎಸ್. ಪ್ರದೀಪ್ ನಿವಾಸ, ಕಚೇರಿ ಸೇರಿದಂತೆ ಹತ್ತುಹಲವು ಪ್ರದೇಶಗಳಲ್ಲಿ ದಾಳಿ ನಡೆಸಿದೆ. ಶಿವಮೊಗ್ಗ ನಗರದ ಪ್ರಿಯಾಂಕಾ ಲೇಔಟ್ನಲ್ಲಿರುವ ಅವರ ನಿವಾಸ, ಶಿಕಾರಿಪುರ ತಾಲೂಕು ಭದ್ರಾಪುರದಲ್ಲಿರುವ ಫಾರ್ಮ್ ಹೌಸ್ ಹಾಗೂ ಹೊಸನಗರದಲ್ಲಿರುವ ಇನ್ನೊಂದು ಸ್ಥಳದಲ್ಲಿ ಸರ್ಚ್ ಆಪರೇಷನ್ ನಡೆಯುತ್ತಿದೆ.
ರಾಜ್ಯದ ಹಲವು ನಗರಗಳಲ್ಲಿ ಇದೇ ರೀತಿಯ ದಾಳಿಗಳು ನಡೆಯುತ್ತಿದ್ದು, ಅಧಿಕೃತ ಮಾಹಿತಿ ಲಭ್ಯವಿರುವ ಮಟ್ಟಿಗೆ, ಭ್ರಷ್ಟಾಚಾರದ ವಿರುದ್ಧ ಈ ವರ್ಷದಲ್ಲೇ ಇದೊಂದು ಪ್ರಮುಖ ಕ್ರಮವಾಗಿದೆ. ಶಿವಮೊಗ್ಗದಲ್ಲಿ ನಡೆಯುತ್ತಿರುವ ಈ ಪರಿಶೀಲನೆಯ ಪರಿಣಾಮ ಹೇಗಿರುತ್ತದೆ ಎಂಬುದನ್ನು ಮುಂದೆ ತಿಳಿದುಬರಬೇಕಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…