ಬೆಂಗಳೂರು, ಜುಲೈ 9: ರಾಜ್ಯದ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಮತ್ತೆ ಕಠಿಣ ಕ್ರಮ ಕೈಗೊಂಡಿದ್ದು, ಬುಧವಾರ ಬೆಂಗಳೂರಿನಲ್ಲಿ ವಿವಿಧೆಡೆ ದಾಳಿ ನಡೆಸಲಾಗಿದೆ. ಕರ್ನಾಟಕ ಗೃಹಮಂಡಳಿಯ ಎಂಜಿನಿಯರ್ ಸೇರಿದಂತೆ ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಸಂಯುಕ್ತವಾಗಿ ಸರ್ಚ್ ನಡೆಸಿ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಲೋಕಾಯುಕ್ತ ಅಧಿಕಾರಿಗಳ ದಾಳಿಗೆ ಗೃಹಮಂಡಳಿಯ ಎಂಜಿನಿಯರ್ ಸೈಯದ್ ಅಜ್ಗರ್, ಅಧಿಕಾರಿ ಗೋವಿಂದಯ್ಯ ಹಾಗೂ ಹರಣಿ ಸತೀಶ್ ಇವರುಗಳು ಗುರಿಯಾಗಿದ್ದಾರೆ. ಇವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಲೆಕ್ಕಪತ್ರಗಳನ್ನು ಪರಿಶೀಲಿಸಲಾಗುತ್ತಿದೆ.
ಸುಮಾರು ₹10 ಕೋಟಿ ಮೌಲ್ಯದ ಸರ್ಕಾರಿ ನಷ್ಟಕ್ಕೆ ಕಾರಣರಾಗಿದ್ದಾರೆ ಎಂಬ ಗಂಭೀರ ಆರೋಪದ ಮೇರೆಗೆ ಈ ದಾಳಿ ನಡೆಯುತ್ತಿದೆ. ಈ ನಡುವೆ ಯಲಹಂಕ ಉಪನಗರದಲ್ಲಿರುವ ಅಜ್ಗರ್ನ ನಿವಾಸದಲ್ಲಿ ಹೆಚ್ಚುವರಿ ದಾಖಲೆಗಳು ಪತ್ತೆಯಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ಲೋಕಾಯುಕ್ತದ ಈ ಕ್ರಮದಿಂದ ಭ್ರಷ್ಟಾಚಾರಿಗಳಿಗೆ ಎಚ್ಚರಿಕೆಯಾಗಿದ್ದು, ಅಧಿಕಾರಿಗಳ ಅಕ್ರಮ ಆಸ್ತಿ ಹಾಗೂ ಲೆಕ್ಕಪತ್ರಗಳ ಶೋಧನೆಯು ಇನ್ನಷ್ಟು ಬಹಿರಂಗವಾಗುವ ನಿರೀಕ್ಷೆಯಿದೆ.
ಹೈಕೋರ್ಟ್ ನಿರ್ದೇಶನದಂತೆ ನಡೆದ ಅಂಚೆ ಮತಗಳ ಮರುಎಣಿಕೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮಹತ್ವದ ತಿರುವು ಕಂಡುಬಂದಿದೆ. ಬಿಜೆಪಿ ಅಭ್ಯರ್ಥಿ…
ತಿಪಟೂರು ಘಟಕದ ಕೆಎಸ್ಆರ್ಟಿಸಿ ಬಸ್ ಸಿಬ್ಬಂದಿಯ ಪ್ರಾಮಾಣಿಕ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ತಿಪಟೂರು ಘಟಕದ ವಾಹನ ಸಂಖ್ಯೆ 876…
ರಾಮನಗರ ಜಿಲ್ಲೆಯ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಜ್ಯೋತಿಷಿಯೊಬ್ಬ ಮಹಿಳೆಗೆ ಅಸಭ್ಯವಾಗಿ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ವಿಶೇಷ ಪೂಜೆಯ ಹೆಸರಿನಲ್ಲಿ…
ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಬೋಟ್ ದುರಂತ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ದುರ್ಘಟನೆಯಲ್ಲಿ ಇದುವರೆಗೆ 11 ಮಂದಿ ಸಾವನ್ನಪ್ಪಿರುವುದು…
ಚಿಕ್ಕಬಳ್ಳಾಪುರ: ಮದುವೆಯ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು, ಗಂಡನ ಅನುಮಾನ ಹಾಗೂ ನಿರಂತರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ…
ಪೂಜೆ ಮತ್ತು ದೀಕ್ಷೆಯ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣ ಸಿ.ಕೆ. ಅಚ್ಚುಕಟ್ಟು ಪೊಲೀಸ್…