ಬೆಂಗಳೂರು, ಜುಲೈ 9: ರಾಜ್ಯದ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಮತ್ತೆ ಕಠಿಣ ಕ್ರಮ ಕೈಗೊಂಡಿದ್ದು, ಬುಧವಾರ ಬೆಂಗಳೂರಿನಲ್ಲಿ ವಿವಿಧೆಡೆ ದಾಳಿ ನಡೆಸಲಾಗಿದೆ. ಕರ್ನಾಟಕ ಗೃಹಮಂಡಳಿಯ ಎಂಜಿನಿಯರ್ ಸೇರಿದಂತೆ ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಸಂಯುಕ್ತವಾಗಿ ಸರ್ಚ್ ನಡೆಸಿ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಲೋಕಾಯುಕ್ತ ಅಧಿಕಾರಿಗಳ ದಾಳಿಗೆ ಗೃಹಮಂಡಳಿಯ ಎಂಜಿನಿಯರ್ ಸೈಯದ್ ಅಜ್ಗರ್, ಅಧಿಕಾರಿ ಗೋವಿಂದಯ್ಯ ಹಾಗೂ ಹರಣಿ ಸತೀಶ್ ಇವರುಗಳು ಗುರಿಯಾಗಿದ್ದಾರೆ. ಇವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಲೆಕ್ಕಪತ್ರಗಳನ್ನು ಪರಿಶೀಲಿಸಲಾಗುತ್ತಿದೆ.
ಸುಮಾರು ₹10 ಕೋಟಿ ಮೌಲ್ಯದ ಸರ್ಕಾರಿ ನಷ್ಟಕ್ಕೆ ಕಾರಣರಾಗಿದ್ದಾರೆ ಎಂಬ ಗಂಭೀರ ಆರೋಪದ ಮೇರೆಗೆ ಈ ದಾಳಿ ನಡೆಯುತ್ತಿದೆ. ಈ ನಡುವೆ ಯಲಹಂಕ ಉಪನಗರದಲ್ಲಿರುವ ಅಜ್ಗರ್ನ ನಿವಾಸದಲ್ಲಿ ಹೆಚ್ಚುವರಿ ದಾಖಲೆಗಳು ಪತ್ತೆಯಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ಲೋಕಾಯುಕ್ತದ ಈ ಕ್ರಮದಿಂದ ಭ್ರಷ್ಟಾಚಾರಿಗಳಿಗೆ ಎಚ್ಚರಿಕೆಯಾಗಿದ್ದು, ಅಧಿಕಾರಿಗಳ ಅಕ್ರಮ ಆಸ್ತಿ ಹಾಗೂ ಲೆಕ್ಕಪತ್ರಗಳ ಶೋಧನೆಯು ಇನ್ನಷ್ಟು ಬಹಿರಂಗವಾಗುವ ನಿರೀಕ್ಷೆಯಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…