ಬೆಂಗಳೂರು, ಜುಲೈ 9: ರಾಜ್ಯದ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಮತ್ತೆ ಕಠಿಣ ಕ್ರಮ ಕೈಗೊಂಡಿದ್ದು, ಬುಧವಾರ ಬೆಂಗಳೂರಿನಲ್ಲಿ ವಿವಿಧೆಡೆ ದಾಳಿ ನಡೆಸಲಾಗಿದೆ. ಕರ್ನಾಟಕ ಗೃಹಮಂಡಳಿಯ ಎಂಜಿನಿಯರ್ ಸೇರಿದಂತೆ ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಸಂಯುಕ್ತವಾಗಿ ಸರ್ಚ್ ನಡೆಸಿ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಲೋಕಾಯುಕ್ತ ಅಧಿಕಾರಿಗಳ ದಾಳಿಗೆ ಗೃಹಮಂಡಳಿಯ ಎಂಜಿನಿಯರ್ ಸೈಯದ್ ಅಜ್ಗರ್, ಅಧಿಕಾರಿ ಗೋವಿಂದಯ್ಯ ಹಾಗೂ ಹರಣಿ ಸತೀಶ್ ಇವರುಗಳು ಗುರಿಯಾಗಿದ್ದಾರೆ. ಇವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಲೆಕ್ಕಪತ್ರಗಳನ್ನು ಪರಿಶೀಲಿಸಲಾಗುತ್ತಿದೆ.
ಸುಮಾರು ₹10 ಕೋಟಿ ಮೌಲ್ಯದ ಸರ್ಕಾರಿ ನಷ್ಟಕ್ಕೆ ಕಾರಣರಾಗಿದ್ದಾರೆ ಎಂಬ ಗಂಭೀರ ಆರೋಪದ ಮೇರೆಗೆ ಈ ದಾಳಿ ನಡೆಯುತ್ತಿದೆ. ಈ ನಡುವೆ ಯಲಹಂಕ ಉಪನಗರದಲ್ಲಿರುವ ಅಜ್ಗರ್ನ ನಿವಾಸದಲ್ಲಿ ಹೆಚ್ಚುವರಿ ದಾಖಲೆಗಳು ಪತ್ತೆಯಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ಲೋಕಾಯುಕ್ತದ ಈ ಕ್ರಮದಿಂದ ಭ್ರಷ್ಟಾಚಾರಿಗಳಿಗೆ ಎಚ್ಚರಿಕೆಯಾಗಿದ್ದು, ಅಧಿಕಾರಿಗಳ ಅಕ್ರಮ ಆಸ್ತಿ ಹಾಗೂ ಲೆಕ್ಕಪತ್ರಗಳ ಶೋಧನೆಯು ಇನ್ನಷ್ಟು ಬಹಿರಂಗವಾಗುವ ನಿರೀಕ್ಷೆಯಿದೆ.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…