ಬೆಳಗಾವಿ, ಆ.7: ಮುನವಳ್ಳಿ ಪುರಸಭೆ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ನೇತೃತ್ವದ ತಂಡ ಇಂದು ಮುಂಜಾನೆ ಪುರಸಭೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ಆರಂಭಿಸಿದೆ. ದಾಳಿಯ ವೇಳೆ ಲೋಕಾಯುಕ್ತ ಎಸ್ಪಿ ಹನುಮಂತರಾಯ ಹಾಗೂ ಸಿಬ್ಬಂದಿ ಸಹಿತ ದರ್ಜೆಯ ಅಧಿಕಾರಿಗಳ ತಂಡವೂ ಸೇರಿತ್ತು.
ಪೌರ ಸೇವೆಗಳ ಕುರಿತಂತೆ ಸಾರ್ವಜನಿಕರಿಂದ ನೇರವಾಗಿ ಮಾಹಿತಿ ಸಂಗ್ರಹಿಸಿ, ಕಚೇರಿಯಲ್ಲಿ ನಡೆಯುತ್ತಿರುವ ಕಾರ್ಯಪದ್ಧತಿಯನ್ನು ಅಧ್ಯಯನ ನಡೆಸಲಾಗಿದೆ. ದಾಖಲೆ ಹಸ್ತಾಂತರದಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವ ತಿಳಿದುಬಂದಿದೆ.
ಕಚೇರಿಯಲ್ಲಿನ ಪ್ರಮುಖ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದ್ದು, ಅವ್ಯವಸ್ಥೆಯ ಯಾವುದೇ ಲಕ್ಷಣಗಳು ಕಂಡುಬಂದರೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ದಾಳಿಯಿಂದ ಸ್ಥಳೀಯ ಆಡಳಿತ ಯಂತ್ರಕ್ಕೆ ಶಾಕ್ ನೀಡಿದ್ದು, ಪುರಸಭೆಯ ಒಳಾಂಗಣದಲ್ಲಿ ಆತಂಕದ ವಾತಾವರಣ ಮೂಡಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…