Latest

ಪ್ರೇಮ ಒತ್ತಾಯ: ನಿರಾಕರಿಸಿದ ಯುವತಿಗೆ ಕಿರುಕುಳ, ತಂದೆಯೊಂದಿಗೆ ಯುವಕನ ಹೊಡೆದಾಟ

ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದ ವೆಂಕಟೇಶ್ವರ ನಗರದಲ್ಲಿ ಪ್ರೇಮ ನಿರಾಕರಣೆ ಕೋಪಕ್ಕೆ ಕಾರಣವಾಗಿದೆ. ಪ್ರೀತಿಸುವಂತೆ ಒತ್ತಾಯಿಸಿ ಯುವತಿ ಮನೆ ಮುಂದೆ ಹಾವಳಿ ನಡೆಸಿದ ಯುವಕ, ಆಕೆಯ ಪೋಷಕರಿಗೆ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

ನಿರಾಕರಿಸಿದ ಪ್ರೇಮ, ನಿತ್ಯ ಕಿರುಕುಳ

ವೆಂಕಟೇಶ್ವರ ನಗರ ನಿವಾಸಿ ಸತೀಶ್ ಅವರ ಮಗಳು ಕಾಲೇಜು ವಿದ್ಯಾರ್ಥಿನಿ. ಆಕೆಗೆ ವಸಂತ್ ಎಂಬ ಯುವಕ ಪ್ರೀತಿಯ ಒತ್ತಾಯ ಮಾಡುತ್ತಿದ್ದನು. ಆದರೆ ಯುವತಿಯ ನಿರಾಕರಣೆಗೆ ತಾಳಲಾರದೆ, ಪ್ರತಿದಿನವೂ ಆಕೆಯ ಹಿಂದೆ ಬಿದ್ದು ಕಿರುಕುಳ ನೀಡುತ್ತಿದ್ದನು. ನಿರಂತರ ಕಿರಿಕಿರಿ ತಾಳಲಾಗದ ಯುವತಿ ಕೆಲ ದಿನಗಳ ಕಾಲ ಸಿಂಧನೂರಿನಿಂದ ಹೊರಟು ಹೋಗಿದ್ದಳು.

ಕುಡಿದು ಮನೆ ಮುಂದೆ ಹಂಗಾಮಾ

ಆಕೆ ಮರಳಿ ಪಟ್ಟಣಕ್ಕೆ ಬಂದ ಸುದ್ದಿ ತಿಳಿದ ವಸಂತ್, ಕೋಪದಿಂದ ಕುಡಿದು, ಯುವತಿ ಮನೆಯ ಮುಂದೆ ಗಲಾಟೆ ಆರಂಭಿಸಿದ್ದಾನೆ. ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿ, ಅಸಭ್ಯ ವರ್ತನೆ ಮೆರೆದಿದ್ದಾನೆ. ಈ ಅವ್ಯವಹಾರಕ್ಕೆ ವಿರೋಧ ವ್ಯಕ್ತಪಡಿಸಿದ ಯುವತಿಯ ತಂದೆ ಸತೀಶ್ ಅವರೊಂದಿಗೆ ವಸಂತ್ ಹೊಡೆದಾಟ ನಡೆಸಿದ್ದಾನೆ.

ಗಲಾಟೆಯಲ್ಲಿ ಇಬ್ಬರಿಗೆ ಗಾಯ

ಕಿತ್ತಾಟದ ವೇಳೆ ಇಬ್ಬರೂ ಗಾಯಗೊಂಡಿದ್ದು, ಅವರನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತಂತೆ ಸಿಂಧನೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪುಂಡತನದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago