Latest

ಪ್ರೇಮ ಒತ್ತಾಯ: ನಿರಾಕರಿಸಿದ ಯುವತಿಗೆ ಕಿರುಕುಳ, ತಂದೆಯೊಂದಿಗೆ ಯುವಕನ ಹೊಡೆದಾಟ

ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದ ವೆಂಕಟೇಶ್ವರ ನಗರದಲ್ಲಿ ಪ್ರೇಮ ನಿರಾಕರಣೆ ಕೋಪಕ್ಕೆ ಕಾರಣವಾಗಿದೆ. ಪ್ರೀತಿಸುವಂತೆ ಒತ್ತಾಯಿಸಿ ಯುವತಿ ಮನೆ ಮುಂದೆ ಹಾವಳಿ ನಡೆಸಿದ ಯುವಕ, ಆಕೆಯ ಪೋಷಕರಿಗೆ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

ನಿರಾಕರಿಸಿದ ಪ್ರೇಮ, ನಿತ್ಯ ಕಿರುಕುಳ

ವೆಂಕಟೇಶ್ವರ ನಗರ ನಿವಾಸಿ ಸತೀಶ್ ಅವರ ಮಗಳು ಕಾಲೇಜು ವಿದ್ಯಾರ್ಥಿನಿ. ಆಕೆಗೆ ವಸಂತ್ ಎಂಬ ಯುವಕ ಪ್ರೀತಿಯ ಒತ್ತಾಯ ಮಾಡುತ್ತಿದ್ದನು. ಆದರೆ ಯುವತಿಯ ನಿರಾಕರಣೆಗೆ ತಾಳಲಾರದೆ, ಪ್ರತಿದಿನವೂ ಆಕೆಯ ಹಿಂದೆ ಬಿದ್ದು ಕಿರುಕುಳ ನೀಡುತ್ತಿದ್ದನು. ನಿರಂತರ ಕಿರಿಕಿರಿ ತಾಳಲಾಗದ ಯುವತಿ ಕೆಲ ದಿನಗಳ ಕಾಲ ಸಿಂಧನೂರಿನಿಂದ ಹೊರಟು ಹೋಗಿದ್ದಳು.

ಕುಡಿದು ಮನೆ ಮುಂದೆ ಹಂಗಾಮಾ

ಆಕೆ ಮರಳಿ ಪಟ್ಟಣಕ್ಕೆ ಬಂದ ಸುದ್ದಿ ತಿಳಿದ ವಸಂತ್, ಕೋಪದಿಂದ ಕುಡಿದು, ಯುವತಿ ಮನೆಯ ಮುಂದೆ ಗಲಾಟೆ ಆರಂಭಿಸಿದ್ದಾನೆ. ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿ, ಅಸಭ್ಯ ವರ್ತನೆ ಮೆರೆದಿದ್ದಾನೆ. ಈ ಅವ್ಯವಹಾರಕ್ಕೆ ವಿರೋಧ ವ್ಯಕ್ತಪಡಿಸಿದ ಯುವತಿಯ ತಂದೆ ಸತೀಶ್ ಅವರೊಂದಿಗೆ ವಸಂತ್ ಹೊಡೆದಾಟ ನಡೆಸಿದ್ದಾನೆ.

ಗಲಾಟೆಯಲ್ಲಿ ಇಬ್ಬರಿಗೆ ಗಾಯ

ಕಿತ್ತಾಟದ ವೇಳೆ ಇಬ್ಬರೂ ಗಾಯಗೊಂಡಿದ್ದು, ಅವರನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತಂತೆ ಸಿಂಧನೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪುಂಡತನದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

11 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

11 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

11 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

11 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

11 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

11 hours ago