Categories: CrimeLatest

ಕೊಪ್ಪಳದಲ್ಲಿ ‘ಲವ್ ಜಿಹಾದ್’ ಆರೋಪ: ಮುಸ್ತಫಾ ಖಾದ್ರಿ ವಿರುದ್ಧ ಹೊಸ ವಿಡಿಯೋ ವೈರಲ್, ಬ್ಲಾಕ್‌ಮೇಲ್ ಶಂಕೆ

ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಮುಸ್ತಫಾ ಖಾದ್ರಿ ವಿರುದ್ಧದ ‘ಲವ್ ಜಿಹಾದ್’ ಆರೋಪ ಪ್ರಕರಣದಲ್ಲಿ ಇದೀಗ ಮತ್ತೊಂದು ಹೊಸ ವಿಡಿಯೋ ವೈರಲ್ ಆಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಮುಸ್ತಫಾ ಖಾದ್ರಿ ಯುವತಿಯನ್ನು ಬಲವಂತವಾಗಿ ಪ್ರೀತಿಸಲು ಮತ್ತು ಮದುವೆಯಾಗಲು ಒತ್ತಾಯಿಸುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಕಾಣಿಸುತ್ತವೆ. ಬೈಕ್ ಮೇಲೆ ಕುಳಿತುಕೊಂಡು ಯುವತಿಯೊಂದಿಗೆ ವಾಗ್ವಾದ ನಡೆಸುತ್ತಿರುವ ಆತ, “ಇಷ್ಟು ದಿನ ಮಾತಾಡಿದ್ದು, ಪ್ರೀತಿ ಮಾಡಿದ್ದು ಏಕೆ? ಈಗ ಯಾಕೆ ನನ್ನನ್ನು ಪ್ರೀತಿಸಲ್ಲ, ಮದುವೆಯಾಗಲ್ಲ ಅಂತೀಯಾ?” ಎಂದು ಪ್ರಶ್ನಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಇದೇ ವೇಳೆ, ಯುವತಿ ಮತ್ತೊಬ್ಬರೊಂದಿಗೆ ಮಾತನಾಡುತ್ತಿರುವುದರ ಬಗ್ಗೆ ಮುಸ್ತಫಾ ಪ್ರಶ್ನಿಸಿ, ಆಕೆಯ ವೈಯಕ್ತಿಕ ಬದುಕಿನಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಕೂಡ ಗೋಚರಿಸುತ್ತದೆ. ಆದರೆ, ಮುಸ್ತಫಾದ ಒತ್ತಡಕ್ಕೆ ಮಣಿಯದ ಯುವತಿ, “ನಿನ್ನ ಬಗ್ಗೆ ಈಗ ನನಗೆ ಸಂಪೂರ್ಣವಾಗಿ ಅರ್ಥವಾಗಿದೆ. ನಿನ್ನನ್ನು ಪ್ರೀತಿಸಲು ಸಾಧ್ಯವಿಲ್ಲ. ನನ್ನನ್ನು ಪ್ರಶ್ನಿಸುವ ಹಕ್ಕು ನಿನಗಿಲ್ಲ” ಎಂದು ಸ್ಪಷ್ಟವಾಗಿ ಪ್ರತಿಕ್ರಿಯಿಸಿದ್ದಾಳೆ.

ಈ ಘಟನೆಯ ವೇಳೆ ಮುಸ್ತಫಾ ತನ್ನ ಮೊಬೈಲ್‌ನಲ್ಲಿ ಸ್ವತಃ ವಿಡಿಯೋ ಚಿತ್ರೀಕರಿಸಿಕೊಂಡಿದ್ದು, “ಈ ವಿಡಿಯೋ ಮುಂದೆ ಬೇಕಾಗುತ್ತೆ, ಮಾತಾಡು” ಎಂದು ಹೇಳಿರುವುದು ಆತ ಯುವತಿಯನ್ನು ಬ್ಲಾಕ್‌ಮೇಲ್ ಮಾಡಲು ಪೂರ್ವ ಯೋಜನೆ ರೂಪಿಸಿದ್ದಾನೆ ಎಂಬ ಅನುಮಾನಕ್ಕೆ ಕಾರಣವಾಗಿದೆ.

ಇದರ ಜೊತೆಗೆ, ಮುಸ್ತಫಾ ಮೊಬೈಲ್‌ನಲ್ಲಿ ಈಗಾಗಲೇ ಸಾವಿರಾರು ವಿಡಿಯೋಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದ್ದು, ಇಷ್ಟೊಂದು ಸಾಕ್ಷ್ಯಗಳಿದ್ದರೂ ಪೊಲೀಸರು ಇನ್ನೂ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

ಮಗ ತನ್ನಂತಿಲ್ಲವೆಂದು ಕೊಂದೇ ಬಿಟ್ಟ ಪಾಪಿ ತಂದೆ: ವಿಜಯಪುರದಲ್ಲಿ ಅಮಾನವೀಯ ಘಟನೆ..!

ವಿಜಯಪುರ ಜಿಲ್ಲೆಯಲ್ಲಿ ಮಾನವೀಯತೆಯನ್ನು ಕಳೆದುಹೋಗುವಂತೆ ಮಾಡುವ ಕ್ರೂರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ತನ್ನ ಮಗನು ತನ್ನಂತಿಲ್ಲ ಎಂಬ ಅಸಂಬದ್ಧ…

49 minutes ago

ಪತ್ನಿಯ ಮೇಲಿನ ಬಲವಂತದ ಸಂಭೋಗ ಆರೋಪ: ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಣೆ

ಪ್ರತ್ಯೇಕವಾಗಿ ವಾಸಿಸುತ್ತಿದ್ದ ಪತ್ನಿಯೊಂದಿಗೆ ಬಲವಂತದ ಸಂಭೋಗ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪತಿಯೊಬ್ಬರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್…

5 hours ago

ನೆಲಮಂಗಲದಲ್ಲಿ ಲಂಚದ ಜಾಲ ಬಯಲು: ಇಬ್ಬರು ಆರ್‌ಟಿಓ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ವಾಹನ ಚಾಲಕರಿಂದ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಆರ್‌ಟಿಓ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ…

7 hours ago

ತಪ್ಪು ಅರ್ಥದ ದ್ವೇಷವೇ ಕಾರಣ: ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಕೊಲೆ ಪ್ರಕರಣಕ್ಕೆ ತಿರುವು

ಧಾರವಾಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ…

12 hours ago

ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋದ ಯುವತಿ: ಕುಟುಂಬಸ್ಥರಿಂದ ಯುವತಿಯ ಹತ್ಯೆ, ಶವ ಸುಟ್ಟು ಸಾಕ್ಷ್ಯ ನಾಶ ಯತ್ನ

ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾನವೀಯತೆ ಮೀರಿದ ದಾರುಣ ಘಟನೆ ಬೆಳಕಿಗೆ ಬಂದಿದೆ. ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ…

13 hours ago

ರಸ್ತೆ ಕಾಮಗಾರಿಯಲ್ಲಿ ನಿರ್ಲಕ್ಷ್ಯ: ಧೂಳಿನ ಕಾಟದಿಂದ ನರಳುತ್ತಿರುವ ಮೇಡ್ಲೇರಿ ಭಾಗದ ಜನರು

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಮೇಡ್ಲೇರಿ ಹೋಬಳಿಯ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿ ಜನರಿಗೆ ಸಂಕಷ್ಟದ ಕಾರಣವಾಗಿದೆ. ಈಗಾಗಲೇ ಇದ್ದ…

13 hours ago