Categories: CrimeLatest

ಇನ್‌ಸ್ಟಾಗ್ರಾಮ್‌ನಲ್ಲಿ ಆರಂಭವಾದ ಪ್ರೀತಿ ದುರಂತ ಅಂತ್ಯ: ಬೆಂಗಳೂರಿನಲ್ಲಿ ಲಿವ್-ಇನ್ ಸಂಗಾತಿಯ ಕತ್ತು ಹಿಸುಕಿ ಕೊಲೆ.!

ಬೆಂಗಳೂರು: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಪ್ರೀತಿಗೆ ತಿರುಗಿದ್ದ ಸಂಬಂಧವು ಕೊನೆಗೆ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವಕನೊಬ್ಬ ತನ್ನ ಸಂಗಾತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ.

ಹಾಸನ ಜಿಲ್ಲೆಯ ಸಕಲೇಶಪುರ ಮೂಲದ ಶರತ್ ಹಾಗೂ ಅನುಷಾ ಎಂಬುವವರಿಗೆ ಸುಮಾರು ಆರು ತಿಂಗಳ ಹಿಂದೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಬಳಿಕ ಸ್ನೇಹ ಪ್ರೀತಿಗೆ ತಿರುಗಿ, ಇಬ್ಬರೂ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿ ವಾಸಿಸುತ್ತಿದ್ದರು. ಶರತ್ ವಾಟರ್ ಟ್ಯಾಂಕ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕೊಠಡಿಯಲ್ಲೇ ಇಬ್ಬರೂ ನೆಲೆಸಿದ್ದರು.

ಅನುಷಾಗೆ ತಂದೆ-ತಾಯಿ ಇರಲಿಲ್ಲ. ಆಕೆಗೆ ಒಬ್ಬ ಅಕ್ಕ ಮಾತ್ರ ಇದ್ದರು ಎನ್ನಲಾಗಿದೆ. ಶರತ್ ಕೆಲಸಕ್ಕೆ ತೆರಳಿದ ವೇಳೆ ಅನುಷಾ ಮನೆಯಲ್ಲೇ ಇರುತ್ತಿದ್ದಳು. ಆದರೆ ಮನೆ ಕೆಲಸಗಳಲ್ಲಿ ಆಸಕ್ತಿ ತೋರದಿರುವುದು, ಆಗಾಗ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳುವುದು ಹಾಗೂ ಕೆಲ ಯುವಕರೊಂದಿಗೆ ಮೊಬೈಲ್ ಮೂಲಕ ಸಂಪರ್ಕದಲ್ಲಿರುವ ವಿಚಾರಗಳಿಗೆ ಸಂಬಂಧಿಸಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ ಉಂಟಾದ ಗಲಾಟೆಯ ಬಳಿಕ ಅನುಷಾ ಮನೆ ಬಿಟ್ಟು ತೆರಳಿದ್ದಳು. ಬಳಿಕ ಶರತ್ ಸಕಲೇಶಪುರಕ್ಕೆ ತೆರಳಿ ಆಕೆಯನ್ನು ಮರಳಿ ಬೆಂಗಳೂರಿಗೆ ಕರೆತಂದಿದ್ದನು. ಆದರೆ ಶನಿವಾರ ರಾತ್ರಿ ಮತ್ತೆ ಇದೇ ವಿಚಾರವಾಗಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ ಎನ್ನಲಾಗಿದೆ.

ಜಗಳ ತಾರಕಕ್ಕೇರಿದ ವೇಳೆ ಆಕ್ರೋಶಗೊಂಡ ಶರತ್, ಅನುಷಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಯಾರಿಗೂ ಅನುಮಾನ ಬರದಂತೆ ಕೊಠಡಿಗೆ ಬೀಗ ಹಾಕಿ, ಕೀಲಿಕೈಯನ್ನು ಕಿಟಕಿ ಬಳಿ ಇಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆ ಬೆಳಕಿಗೆ ಬಂದಿದ್ದು ಕೂಡ ವಿಚಿತ್ರ ರೀತಿಯಲ್ಲಿ. ಆರೋಪಿ ಶರತ್ ತಾನೇ ಒಬ್ಬ ವಕೀಲರಿಗೆ ಕರೆ ಮಾಡಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ. ತಕ್ಷಣ ವಕೀಲರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಕಿಟಕಿ ಬಳಿ ಇದ್ದ ಕೀಲಿಯಿಂದ ಬಾಗಿಲು ತೆರೆದು ಪರಿಶೀಲಿಸಿದಾಗ ಅನುಷಾಳ ಮೃತದೇಹ ಪತ್ತೆಯಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶರತ್‌ನನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿಗೆ ನೆರವು ನೀಡಲು ಲಂಚದ ಆಫರ್: ತಂದೆ-ಮಗ ಲೋಕಾಯುಕ್ತ ಬಲೆಗೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನಿಸಿದ…

12 hours ago

ತಪ್ಪು ದಾರಿಯಲ್ಲಿ ಬಂದ ಸರ್ಕಾರಿ ಬಸ್‌ಗೆ ಬೈಕ್ ಸವಾರನ ಟಕ್ಕರ್: ಚಾಲಕನಿಂದಲೇ ರಿವರ್ಸ್ ಹಾಕಿಸಿದ ಸಾಹಸ

ಸಾರ್ವಜನಿಕ ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ದಿನೇ ದಿನೇ ಹೆಚ್ಚುತ್ತಿರುವ ನಡುವೆಯೇ, ಹೈದರಾಬಾದ್‌ನಲ್ಲಿ ನಡೆದ ಘಟನೆೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ…

13 hours ago

“ನನಗೆ ಸೆಲ್ಯೂಟ್ ಮಾಡಿಲ್ಲ!”: ಬನ್ ಹಣ ಕೊಡದೇ ಐಪಿಎಸ್ ಅಧಿಕಾರಿ ಎಂದು ನಾಟಕ, ಕೊನೆಗೆ ಜೈಲು ಪಾಲು

ಲಕ್ನೋದಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದ್ದು, ಬನ್ ತಿಂದು ಹಣ ನೀಡದೆ ಹೋಗಲು ಯತ್ನಿಸಿದ ವ್ಯಕ್ತಿಯೊಬ್ಬ ತಾನು ಐಪಿಎಸ್ ಅಧಿಕಾರಿ…

13 hours ago

ಟೆಂಡರ್ ಹಗರಣ ಆರೋಪ: ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು

ರಾಜ್ಯ ರಾಜಕಾರಣದಲ್ಲಿ ಭ್ರಷ್ಟಾಚಾರದ ಆರೋಪಗಳು ಮತ್ತೆ ಸದ್ದು ಮಾಡುತ್ತಿದ್ದು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.…

13 hours ago

ಸ್ನೇಹದ ನಂಬಿಕೆಗೆ ದ್ರೋಹ: ಸ್ನೇಹಿತನ ಪತ್ನಿಯೊಂದಿಗೆ ಪರಾರಿಯಾದ ವಿವಾಹಿತ, ಮಂಡ್ಯದಲ್ಲಿ ಸಂಚಲನ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ಕುಟುಂಬಗಳನ್ನು ಬೆಚ್ಚಿಬೀಳಿಸುವ ಘಟನೆೊಂದು ಬೆಳಕಿಗೆ ಬಂದಿದೆ. ಸ್ನೇಹದ ಹೆಸರಿನಲ್ಲಿ ಮನೆಗೆ ಆಗಾಗ್ಗೆ…

13 hours ago

ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು 2 ವರ್ಷದ ಮಗು ದುರ್ಮರಣ

ಮಂಡ್ಯ: ಆಟವಾಡುತ್ತಿದ್ದ ವೇಳೆ ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ ದುರ್ಘಟನೆ ಮಂಡ್ಯ ಜಿಲ್ಲೆಯ…

14 hours ago