Categories: Latest

ಮಿಸ್ಡ್ ಕಾಲ್‌ನಿಂದ ಶುರುವಾದ ಪ್ರೇಮ: ಐದು ಮಕ್ಕಳ ತಾಯಿ 19 ವರ್ಷದ ಯುವಕನೊಂದಿಗೆ ವಿವಾಹ, ಮತಾಂತರವೂ ಚರ್ಚೆಗೆ ಕಾರಣ!

ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದ ವಿಶಿಷ್ಟ ಮದುವೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಒಂದು ಮಿಸ್ಡ್ ಕಾಲ್‌ನಿಂದ ಆರಂಭವಾದ ಪರಿಚಯ ಪ್ರೀತಿಯಾಗಿ ಬೆಳೆಯುತ್ತಿದ್ದಂತೆ, ಐದು ಮಕ್ಕಳ ತಾಯಿಯಾದ ಮಹಿಳೆ ತನ್ನ ಪತಿ ಹಾಗೂ ಮಕ್ಕಳನ್ನು ಬಿಟ್ಟು 19 ವರ್ಷದ ಯುವಕನನ್ನು ವಿವಾಹವಾಗಿರುವ ಘಟನೆ ಎಲ್ಲರ ಗಮನ ಸೆಳೆದಿದೆ.

ಜಮುಯಿ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಾದುಯಿ ಬರಿಯಾರ್ಪುರ ಗ್ರಾಮದ ನಿವಾಸಿ 36 ವರ್ಷದ ಸೀಮಾ ಪರ್ವಿನ್ ಅಲಿಯಾಸ್ ಬಿಂದು ದೇವಿ, 19 ವರ್ಷದ ಮಹಾವೀರ್ ಠಾಕೂರ್ ಅವರನ್ನು ವಿವಾಹವಾಗಿದ್ದಾರೆ. ಇಬ್ಬರ ನಡುವಿನ 17 ವರ್ಷಗಳ ವಯೋಮಾನದ ಅಂತರ ಈ ಮದುವೆಯನ್ನು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಮಾಹಿತಿಯ ಪ್ರಕಾರ, ಸೀಮಾ ಪರ್ವಿನ್ ಮತ್ತು ಮಹಾವೀರ್ ಠಾಕೂರ್ ನಡುವೆ ಮಿಸ್ಡ್ ಕಾಲ್ ಮೂಲಕ ಪರಿಚಯವಾಗಿತ್ತು. ಬಳಿಕ ಇಬ್ಬರೂ ನಿರಂತರವಾಗಿ ದೂರವಾಣಿ ಮೂಲಕ ಮಾತನಾಡುತ್ತಿದ್ದು, ಆ ಸ್ನೇಹ ಪ್ರೀತಿಗೆ ತಿರುಗಿತ್ತು. ಪ್ರೇಮ ಸಂಬಂಧ ಗಾಢವಾಗುತ್ತಿದ್ದಂತೆ ಸೀಮಾ ತನ್ನ ಕುಟುಂಬವನ್ನು ತೊರೆದು ಕೋಲ್ಕತ್ತಾಗೆ ತೆರಳಿದ್ದು, ಅಲ್ಲಿ ದೇವಸ್ಥಾನವೊಂದರಲ್ಲಿ ಮಹಾವೀರ್ ಅವರನ್ನು ವಿವಾಹವಾಗಿದ್ದಾಳೆ ಎನ್ನಲಾಗಿದೆ.

ಮದುವೆಯ ಬಳಿಕ ಇಬ್ಬರೂ ಒಟ್ಟಿಗೆ ಇರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅವು ವೈರಲ್ ಆಗಿವೆ. ಈ ಘಟನೆ ಸ್ಥಳೀಯವಾಗಿ ಮಾತ್ರವಲ್ಲದೆ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದೆ.

ಸೀಮಾ ಪರ್ವಿನ್ ಅವರ ವೈಯಕ್ತಿಕ ಜೀವನವೂ ಕುತೂಹಲ ಕೆರಳಿಸಿದೆ. ಸುಮಾರು ಹತ್ತು ವರ್ಷಗಳ ಹಿಂದೆ ಬಿಂದು ದೇವಿ ಎಂಬ ಹೆಸರಿನಿಂದ ಪರಿಚಿತರಾಗಿದ್ದ ಅವರು, ಮನನ್ ಆಲಂ ಎಂಬ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದರು. ಆ ಸಂದರ್ಭದಲ್ಲಿ ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಸೀಮಾ ಪರ್ವಿನ್ ಎಂಬ ಹೆಸರನ್ನು ಸ್ವೀಕರಿಸಿದ್ದರು. ದಾಂಪತ್ಯ ಜೀವನದಲ್ಲಿ ಅವರಿಗೆ ಐದು ಮಕ್ಕಳು ಜನಿಸಿದ್ದರು.

ಆದರೆ ಈಗ ಮಹಾವೀರ್ ಠಾಕೂರ್ ಅವರನ್ನು ವಿವಾಹವಾಗುವ ಸಂದರ್ಭದಲ್ಲಿ ಅವರು ಮತ್ತೆ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಮದುವೆಯ ಜೊತೆಗೆ ಮತಾಂತರದ ವಿಚಾರವನ್ನೂ ಚರ್ಚೆಯ ಕೇಂದ್ರಬಿಂದುವಾಗಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸೀಮಾ, ತನ್ನ ಮೊದಲ ದಾಂಪತ್ಯ ಜೀವನದಲ್ಲಿ ಸಂತೋಷ ಇರಲಿಲ್ಲ ಹಾಗೂ ಅನೇಕ ಕಷ್ಟಗಳನ್ನು ಅನುಭವಿಸಿದ್ದೆ ಎಂದು ಹೇಳಿದ್ದಾಳೆ. ಈಗ ಮಹಾವೀರ್ ಜೊತೆ ಸಂತೋಷದಿಂದ ಜೀವನ ನಡೆಸುತ್ತಿದ್ದೇನೆ ಎಂದು ಆಕೆ ತಿಳಿಸಿದ್ದಾಳೆ.

ಇನ್ನೊಂದೆಡೆ ಮಹಾವೀರ್ ಠಾಕೂರ್ ಕೂಡ ಈ ಮದುವೆ ತನ್ನ ಇಚ್ಛೆಯಂತೆ ನಡೆದಿದ್ದು, ಇಬ್ಬರೂ ಪರಸ್ಪರ ಒಪ್ಪಿಗೆಯೊಂದಿಗೆ ಜೀವನ ಆರಂಭಿಸಿದ್ದೇವೆ ಎಂದು ಹೇಳಿದ್ದಾರೆ.

ಆದರೆ ಸೀಮಾ ಅವರ ಮೊದಲ ಪತಿ ಮನನ್ ಆಲಂ, ಪತ್ನಿಯ ನಡೆ-ನುಡಿಗಳ ಬಗ್ಗೆ ಆರೋಪಗಳನ್ನು ಮಾಡಿದ್ದು, ಮಕ್ಕಳನ್ನು ತನ್ನ ವಶದಲ್ಲೇ ಇಟ್ಟುಕೊಳ್ಳುವುದಾಗಿ ತಿಳಿಸಿದ್ದಾರೆ. ಈ ಘಟನೆಯು ಸಾಮಾಜಿಕ, ಕುಟುಂಬ ಹಾಗೂ ಧಾರ್ಮಿಕ ಆಯಾಮಗಳ ಹಿನ್ನೆಲೆಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

12 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

12 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

12 hours ago