Categories: CrimeLatest

ಅಪ್ರಾಪ್ತ ಮಗಳ ಮೇಲೆ ಕಣ್ಣು ಹಾಕಿದ ಪ್ರೇಮಿ; ರೊಚ್ಚಿಗೆದ್ದ ತಾಯಿ ಮರ್ಮಾಂಗ ಕತ್ತರಿಸಿ ತಕ್ಕ ಪಾಠ ಕಲಿಸಿದಳು!

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಮಹಿಳೆಯೊಬ್ಬಳು ತನ್ನ ಪ್ರೇಮಿಯ ಮರ್ಮಾಂಗವನ್ನು ಕತ್ತರಿಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಸ್ಥಳೀಯರಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಆಟೋ ಚಾಲಕ ಸುರೇಶ್ ಎಂಬಾತ ಕಳೆದ ಐದು ವರ್ಷಗಳಿಂದ ಸ್ಥಳೀಯ ಡ್ರೈವರ್ಸ್ ಕಾಲೋನಿಯಲ್ಲಿ ವಾಸವಿರುವ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದನು. ಆದರೆ, ಕಳೆದ ಕೆಲ ತಿಂಗಳುಗಳಿಂದ ಆತನ ವರ್ತನೆ ಮಹಿಳೆಯ 17 ವರ್ಷದ ಅಪ್ರಾಪ್ತ ಮಗಳ ಕಡೆಗೂ ತಿರುಗಿತ್ತು ಎನ್ನಲಾಗಿದೆ. ಈ ಬಗ್ಗೆ ಬಾಲಕಿ ಹಲವು ಬಾರಿ ತಾಯಿಗೆ ದೂರು ನೀಡಿದ್ದಳು. ಇದರಿಂದ ಆಕ್ರೋಶಗೊಂಡ ಮಹಿಳೆ, ತನ್ನ ಮಗಳ ಬಳಿ ಸುಳಿಯದಂತೆ ಸುರೇಶ್‌ಗೆ ಎಚ್ಚರಿಕೆ ನೀಡಿದ್ದರೂ ಆತ ಅದನ್ನು ಲೆಕ್ಕಿಸಿರಲಿಲ್ಲ ಎಂದು ಹೇಳಲಾಗಿದೆ.

ಘಟನೆ ನಡೆದ ರಾತ್ರಿ ಎಂದಿನಂತೆ ಸುರೇಶ್ ಮಹಿಳೆಯ ಮನೆಗೆ ಬಂದಿದ್ದನು. ಮಧ್ಯರಾತ್ರಿ ಮಹಿಳೆ ಶೌಚಾಲಯಕ್ಕೆ ತೆರಳಿದ್ದ ವೇಳೆ, ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಭಯಗೊಂಡ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದು, ಸದ್ದು ಕೇಳಿ ಓಡಿಬಂದ ತಾಯಿ ಪ್ರಿಯಕರನನ್ನು ತಡೆಯಲು ಮುಂದಾಗಿದ್ದಾಳೆ. ಆದರೆ ಆತ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಕೋಪಗೊಂಡ ಮಹಿಳೆ ಚಾಕುವಿನಿಂದ ಆತನ ಮರ್ಮಾಂಗಕ್ಕೆ ಇರಿದಿದ್ದಾಳೆ.

ತೀವ್ರವಾಗಿ ಗಾಯಗೊಂಡ ಸುರೇಶ್ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದು, ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

23 hours ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

23 hours ago

₹5 ಲಕ್ಷ ಸಾಲ ವಾಪಸ್ ಕೇಳಿದ್ದಕ್ಕೆ ರೇಪ್ ಕೇಸ್ ಬೆದರಿಕೆ? ಮಾನಸಿಕ ಕಿರುಕುಳಕ್ಕೆ ನೊಂದು ಯುವಕ ಆತ್ಮಹತ್ಯೆ; ಕುಟುಂಬದ ಗಂಭೀರ ಆರೋಪ

ಮಂಡ್ಯ: ಸಾಲವಾಗಿ ನೀಡಿದ್ದ ಹಣವನ್ನು ಮರಳಿ ಕೇಳಿದ್ದಕ್ಕೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ವಿವಾಹಿತೆಯ ಮಾನಸಿಕ ಕಿರುಕುಳದಿಂದ…

23 hours ago

ಹುಟ್ಟುಹಬ್ಬದ ಸಂಭ್ರಮ ದುರಂತದಲ್ಲಿ ಅಂತ್ಯ: ನೆಲಮಂಗಲದಲ್ಲಿ ಕಾರು ಪಲ್ಟಿ, ಇಬ್ಬರು ಸಾವು..!

ಬೆಂಗಳೂರು ಗ್ರಾಮಾಂತರ: ಹುಟ್ಟುಹಬ್ಬದ ಸಂಭ್ರಮ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸ್ನೇಹಿತರ ತಂಡ ಭೀಕರ ರಸ್ತೆ ಅಪಘಾತಕ್ಕೆ ಗುರಿಯಾಗಿದ್ದು, ಇಬ್ಬರು…

23 hours ago

ರೋಡ್ ರೇಜ್ ವಿವಾದದ ಬಳಿಕ ಮಾಲೂರು ನ್ಯಾಯಾಧೀಶೆ ಗಾಯತ್ರಿಗೆ ಬೀದರ್ ವರ್ಗಾವಣೆ; ಹೈಕೋರ್ಟ್ ಆಡಳಿತಾತ್ಮಕ ಕ್ರಮ

ಬೆಂಗಳೂರು: ಸಾರ್ವಜನಿಕರೊಂದಿಗೆ ರಸ್ತೆ ಮಧ್ಯೆ ಮಾತಿನ ಚಕಮಕಿ ನಡೆಸಿ ಅಧಿಕಾರ ದುರ್ಬಳಕೆ ಆರೋಪಕ್ಕೆ ಗುರಿಯಾಗಿದ್ದ ಹಾಗೂ ಹೈಕೋರ್ಟ್‌ನಿಂದ ತೀವ್ರ ತರಾಟೆಗೆ…

23 hours ago

ರಾಪಿಡೋ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿಯ ಬದುಕೇ ಚಿಂದಿ: 20 ಲಕ್ಷ ಚಿಕಿತ್ಸಾ ವೆಚ್ಚ, ನ್ಯಾಯಕ್ಕಾಗಿ ಕಣ್ಣೀರಿನ ಹೋರಾಟ!

ಬೆಂಗಳೂರು: ಆನ್‌ಲೈನ್ ಬೈಕ್ ಟ್ಯಾಕ್ಸಿ ಸೇವೆಗಳ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಮೂಡುವಂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಪಿಡೋ ಬೈಕ್…

23 hours ago