ಉತ್ತರ ಪ್ರದೇಶದ ಕಾನ್ಪುರದಲ್ಲಿ 17 ವರ್ಷದ ಯುವತಿಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಭೀಕರ ಘಟನೆ ಸೋಮವಾರ (ಮಾರ್ಚ್ 10) ನಡೆದಿದೆ. ಈ ಕೃತ್ಯಕ್ಕೆ ಆರೋಪಿ ಶಿವಂ ವರ್ಮ ಎಂದು ಗುರುತಿಸಲಾಗಿದ್ದು, ಆತ ಕೊಲೆ ಮಾಡಿದ ಬಳಿಕ ಸಂತ್ರಸ್ತೆಯ ಸ್ನೇಹಿತೆಗೆ ಕರೆ ಮಾಡಿ “ನಿನ್ನ ಸ್ನೇಹಿತೆಯನ್ನು ಕೊಂದಿದ್ದೇನೆ” ಎಂದು ಹೇಳಿದ್ದಾನೆ.
ನಂಬಿಕೆಯನ್ನು ಉಳಿಸಿಕೊಳ್ಳಲಿಲ್ಲ ಎಂಬ ಕಾರಣಕ್ಕೆ ಹತ್ಯೆ
ಪೊಲೀಸರ ಪ್ರಕಾರ, ಸಂತ್ರಸ್ತೆ ಸೋಮವಾರ ಮಧ್ಯಾಹ್ನ ತನ್ನ ಸ್ನೇಹಿತೆಯೊಂದಿಗೆ ಮಾರುಕಟ್ಟೆಗೆ ತೆರಳಿದ್ದಳು. ಈ ವೇಳೆ, ಆಕೆಯ ಪ್ರೇಮಿ ಶಿವಂ ವರ್ಮನನ್ನು ಭೇಟಿಯಾಗಿ, ಆತ ಬೈಕ್ನಲ್ಲಿ ಬಂದು ತನ್ನ ಬಾಡಿಗೆ ಮನೆಯ ಕಡೆಗೆ ಆಹ್ವಾನಿಸಿದನು. ಯುವತಿ ಆತನೊಂದಿಗೆ ಹೋಗಿದಳು, ಆದರೆ ಆಕೆಯ ಸ್ನೇಹಿತೆ ಮಾತ್ರ ಮನೆಗೆ ಮರಳಿದಳು.
ಕೇವಲ ಒಂದು ಗಂಟೆ ಬಳಿಕ, ಶಿವಂ ವರ್ಮ ಆಕೆಯ ಸ್ನೇಹಿತೆಗೆ ಕರೆ ಮಾಡಿ, “ಅವಳು ನಂಬಿಕೆ ಇಲ್ಲದವಳು” ಎಂದು ಹೇಳಿ, ತಕ್ಷಣ ಕರೆ ಕಡಿತಗೊಳಿಸಿದ್ದಾನೆ. ಇದೇ ಸಂದೇಶವನ್ನು ಆಕೆಯ ತಂದೆಗೆ ಕರೆ ಮಾಡಿ ತಿಳಿಸಿದ್ದಾನೆ, ಆಘಾತಗೊಂಡ ತಂದೆ ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿ, ತನ್ನ ಪುತ್ರಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರು ಮಾಹಿತಿ ನೀಡಿದನು.
ಶೋಧ ಕಾರ್ಯ ಮತ್ತು ತನಿಖೆ
ಪೊಲೀಸರು ಅಪರಾಧ ಸ್ಥಳಕ್ಕೆ ಭೇಟಿ ನೀಡಿ, ಕೊಲೆ ಮಾಡಲು ಬಳಸಿದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಮರಣೋತ್ತರ ಪರೀಕ್ಷೆಗೆ ಮೃತದೇಹ ಕಳುಹಿಸಲು ಕುಟುಂಬ ಸದಸ್ಯರು ಆರಂಭದಲ್ಲಿ ವಿರೋಧಿಸಿದರು. ಸುಮಾರು ಎರಡು ಗಂಟೆಗಳ ವಾದ-ವಿವಾದದ ನಂತರ, ಪೊಲೀಸರು ಅವರನ್ನು ಮನವೊಲಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.
ಆರೋಪಿ ಕುರಿತು ಕುಟುಂಬದ ಗಂಭೀರ ಆರೋಪ
ಸಂತ್ರಸ್ತೆಯ ತಂದೆಯ ಪ್ರಕಾರ, ಶಿವಂ ವರ್ಮ ಬಾಡಿಗೆ ಮನೆಯಲ್ಲಿ ಹಲವಾರು ಬಾರಿ ಯುವತಿಗಳನ್ನು ಕರೆತರುವ ಬಗ್ಗೆ ಮನೆಯ ಮಾಲೀಕರಿಗೂ ಗೊತ್ತಿತ್ತು. ಮನೆಯ ಮಾಲೀಕರ ಮಗ ಸಂದೀಪ್ ಶರ್ಮ ಕೂಡ ಇದೇ ಹೇಳಿಕೆಯನ್ನು ನೀಡಿದ್ದಾರೆ. ಈ ಘಟನೆ ಕುರಿತು ವಿಧಿವಿಜ್ಞಾನ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸಂತ್ರಸ್ತೆಯ ತಂದೆ, “ನನ್ನ ಮಗಳಿಗೆ ನ್ಯಾಯ ಬೇಕು” ಎಂದು ಆಗ್ರಹಿಸಿದ್ದಾರೆ. ದಕ್ಷಿಣ ಡಿಸಿಪಿ ಆಶಿಶ್ ಶ್ರೀವಾಸ್ತವ ಈ ಬಗ್ಗೆ ಪ್ರತಿಕ್ರಿಯಿಸಿ, “ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿ ನೀಡಲಾಗದು” ಎಂದು ತಿಳಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…