Categories: CrimeLatest

ಪ್ರಿಯತಮೆಯನ್ನು ಕೊಂದು ಶವಕ್ಕೆ ಬೆಂಕಿ ಹಚ್ಚಿದ ಪ್ರಿಯಕರ; ಸಾಕ್ಷ್ಯ ನಾಶಕ್ಕೆ ತಂದೆಯೂ ಸಾಥ್, ಇಬ್ಬರೂ ಅಂದರ್!

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕಿನಾತ್ತುಕಡವು ಸಮೀಪ ಮಹಿಳೆಯೊಬ್ಬಳನ್ನು ಕೊಲೆ ಮಾಡಿ, ಬಳಿಕ ಶವಕ್ಕೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಪ್ರಿಯಕರ ಹಾಗೂ ಆತನ ತಂದೆಯನ್ನು ಬಂಧಿಸಿದ್ದಾರೆ.

ಕೆಲವು ದಿನಗಳ ಹಿಂದೆ ಖಾಸಗಿ ಸಂಸ್ಥೆಯೊಂದರ ಹಿಂಭಾಗದಲ್ಲಿ ಸುಮಾರು 30 ವರ್ಷದ ಮಹಿಳೆಯ ಅರೆಬೆಂದ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಿ, ಘಟನಾ ಸ್ಥಳದ ಸುತ್ತಮುತ್ತಲಿನ 120ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದರು.

ತನಿಖೆ ವೇಳೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಬೈಕ್‌ವೊಂದು ಪೊಲೀಸರ ಗಮನ ಸೆಳೆದಿತ್ತು. ಬೈಕ್‌ನ ನೋಂದಣಿ ಸಂಖ್ಯೆ ಆಧರಿಸಿ ನಡೆಸಿದ ತನಿಖೆಯಲ್ಲಿ ಅದು ಪೊಲ್ಲಾಚಿ ನಿವಾಸಿ ಪಳನಿಮುತ್ತು (35) ಎಂಬಾತನದ್ದಾಗಿರುವುದು ಪತ್ತೆಯಾಯಿತು. ಬಳಿಕ ಆತನನ್ನು ಹಾಗೂ ತಂದೆ ಗುರುನಾಥನ್ (60) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣದ ಸತ್ಯ ಬಯಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಪಳನಿಮುತ್ತುಗೆ ಈಗಾಗಲೇ ಮದುವೆಯಾಗಿದ್ದರೂ ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ. ಈ ನಡುವೆ ಸಂಗೀತಾ (30) ಎಂಬ ಮಹಿಳೆಯೊಂದಿಗೆ ಆತನಿಗೆ ಆತ್ಮೀಯ ಸಂಬಂಧ ಬೆಳೆದಿತ್ತು. ಎರಡು ತಿಂಗಳ ಹಿಂದೆ ಸಂಗೀತಾ ತನ್ನ ಕುಟುಂಬವನ್ನು ತೊರೆದು ಪಳನಿಮುತ್ತು ಜೊತೆ ಬಾಡಿಗೆ ಮನೆಯಲ್ಲಿ ವಾಸಕ್ಕೆ ಬಂದಿದ್ದಳು.

ಇತ್ತೀಚಿನ ದಿನಗಳಲ್ಲಿ ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಪದೇಪದೆ ಜಗಳವಾಗುತ್ತಿತ್ತು. ಘಟನೆ ನಡೆದ ದಿನವೂ ವಾಗ್ವಾದ ನಡೆದಿದ್ದು, ನಂತರ ಪಳನಿಮುತ್ತು ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದಾಗ ಸಂಗೀತಾ ನಿರಾಕರಿಸಿದ್ದಾಳೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಆರೋಪಿ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಬಳಿಕ ಸಾಕ್ಷ್ಯ ನಾಶಪಡಿಸಲು ಪಳನಿಮುತ್ತು ತನ್ನ ತಂದೆಯ ಸಹಾಯ ಪಡೆದಿದ್ದಾನೆ. ಇಬ್ಬರೂ ಸೇರಿ ಮೃತದೇಹವನ್ನು ಚೀಲದಲ್ಲಿ ತುಂಬಿ ಬೈಕ್‌ನಲ್ಲಿ ಸಾಗಿಸಿ, ಮಾರ್ಗಮಧ್ಯೆ ಪೆಟ್ರೋಲ್ ಖರೀದಿಸಿ ನಿರ್ಜನ ಪ್ರದೇಶದಲ್ಲಿ ಶವದ ಮೇಲೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದರು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಸಿಸಿಟಿವಿ ದೃಶ್ಯಾವಳಿ ಹಾಗೂ ಇತರೆ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಘಟನೆ ಕೊಯಮತ್ತೂರು ಜಿಲ್ಲೆಯಲ್ಲಿ ಭಾರೀ ಆಘಾತಕ್ಕೆ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

18 hours ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

18 hours ago

₹5 ಲಕ್ಷ ಸಾಲ ವಾಪಸ್ ಕೇಳಿದ್ದಕ್ಕೆ ರೇಪ್ ಕೇಸ್ ಬೆದರಿಕೆ? ಮಾನಸಿಕ ಕಿರುಕುಳಕ್ಕೆ ನೊಂದು ಯುವಕ ಆತ್ಮಹತ್ಯೆ; ಕುಟುಂಬದ ಗಂಭೀರ ಆರೋಪ

ಮಂಡ್ಯ: ಸಾಲವಾಗಿ ನೀಡಿದ್ದ ಹಣವನ್ನು ಮರಳಿ ಕೇಳಿದ್ದಕ್ಕೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ವಿವಾಹಿತೆಯ ಮಾನಸಿಕ ಕಿರುಕುಳದಿಂದ…

18 hours ago

ಹುಟ್ಟುಹಬ್ಬದ ಸಂಭ್ರಮ ದುರಂತದಲ್ಲಿ ಅಂತ್ಯ: ನೆಲಮಂಗಲದಲ್ಲಿ ಕಾರು ಪಲ್ಟಿ, ಇಬ್ಬರು ಸಾವು..!

ಬೆಂಗಳೂರು ಗ್ರಾಮಾಂತರ: ಹುಟ್ಟುಹಬ್ಬದ ಸಂಭ್ರಮ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸ್ನೇಹಿತರ ತಂಡ ಭೀಕರ ರಸ್ತೆ ಅಪಘಾತಕ್ಕೆ ಗುರಿಯಾಗಿದ್ದು, ಇಬ್ಬರು…

18 hours ago

ರೋಡ್ ರೇಜ್ ವಿವಾದದ ಬಳಿಕ ಮಾಲೂರು ನ್ಯಾಯಾಧೀಶೆ ಗಾಯತ್ರಿಗೆ ಬೀದರ್ ವರ್ಗಾವಣೆ; ಹೈಕೋರ್ಟ್ ಆಡಳಿತಾತ್ಮಕ ಕ್ರಮ

ಬೆಂಗಳೂರು: ಸಾರ್ವಜನಿಕರೊಂದಿಗೆ ರಸ್ತೆ ಮಧ್ಯೆ ಮಾತಿನ ಚಕಮಕಿ ನಡೆಸಿ ಅಧಿಕಾರ ದುರ್ಬಳಕೆ ಆರೋಪಕ್ಕೆ ಗುರಿಯಾಗಿದ್ದ ಹಾಗೂ ಹೈಕೋರ್ಟ್‌ನಿಂದ ತೀವ್ರ ತರಾಟೆಗೆ…

18 hours ago

ರಾಪಿಡೋ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿಯ ಬದುಕೇ ಚಿಂದಿ: 20 ಲಕ್ಷ ಚಿಕಿತ್ಸಾ ವೆಚ್ಚ, ನ್ಯಾಯಕ್ಕಾಗಿ ಕಣ್ಣೀರಿನ ಹೋರಾಟ!

ಬೆಂಗಳೂರು: ಆನ್‌ಲೈನ್ ಬೈಕ್ ಟ್ಯಾಕ್ಸಿ ಸೇವೆಗಳ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಮೂಡುವಂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಪಿಡೋ ಬೈಕ್…

18 hours ago