Categories: CrimeLatest

‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ಹೆಸರಿನಲ್ಲಿ ಪ್ರಿಯಕರನ ದಹನ! ಕಣ್ಣಿಗೆ ಬಟ್ಟೆ ಕಟ್ಟಿ, ಬೆಂಕಿ ಹಚ್ಚಿ ಮೊಬೈಲ್ ನಲ್ಲಿ ಚಿತ್ರೀಕರಣ.

ರಾಜ್ಯದಲ್ಲಿ ಪ್ರೀತಿ-ಪ್ರೇಮಗಳ ಹೆಸರಿನಲ್ಲಿ ನಡೆಯುತ್ತಿರುವ ಅವಾಂತರಗಳು ದಿನೇದಿನೇ ಆತಂಕ ಹುಟ್ಟಿಸುತ್ತಿವೆ. ನಂಬಿಕೆ ಕುಸಿದಾಗ ಸಂಬಂಧಗಳು ಹೇಗೆ ಕ್ರೌರ್ಯಕ್ಕೆ ತಿರುಗುತ್ತವೆ ಎಂಬುದಕ್ಕೆ ಬೆಚ್ಚಿಬೀಳಿಸುವ ಉದಾಹರಣೆ ಬೆಂಗಳೂರಿನ ಬ್ಯಾಡರಹಳ್ಳಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

‘ವೆಸ್ಟರ್ನ್ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡ್ತೀನಿ’ ಎಂದು ನಂಬಿಸಿ ಪ್ರಿಯಕರನನ್ನು ಕೊಲೆ ಮಾಡಿರುವ ಆರೋಪ ಯುವತಿಯ ಮೇಲೆ ಕೇಳಿಬಂದಿದೆ. ಮೃತ ಕಿರಣ್ ಹಾಗೂ ಆರೋಪಿತ ಯುವತಿ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಪರಸ್ಪರ ಪ್ರೀತಿಸುತ್ತಿದ್ದರು.

ಮಂಗಳವಾರ ಯುವತಿಯ ಮನೆದಲ್ಲಿ ತಾಯಿ ಮತ್ತು ಅಣ್ಣ ಇಲ್ಲದಿರುವುದನ್ನು ಗಮನಿಸಿದ ಕಿರಣ್, ಆಕೆಯ ಮನೆಗೆ ಭೇಟಿ ನೀಡಿದ್ದನು. ಈ ವೇಳೆ ಯುವತಿ ಕುತಂತ್ರ ರೂಪಿಸಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. “ನಿನಗೆ ವಿಭಿನ್ನವಾಗಿ ಪ್ರಪೋಸ್ ಮಾಡ್ತೀನಿ” ಎಂದು ಹೇಳಿ, ಕಿರಣ್‌ನ ಕಣ್ಣಿಗೆ ಬಟ್ಟೆ ಕಟ್ಟಿ, ಕೈ-ಕಾಲುಗಳನ್ನು ಹಗ್ಗದಿಂದ ಬಿಗಿದಿದ್ದಾಳೆ. ಕಿರಣ್ ಅನುಮಾನ ವ್ಯಕ್ತಪಡಿಸಿದಾಗ, “ಇದು ಫಾರಿನ್ ಸ್ಟೈಲ್” ಎಂದು ನಂಬಿಸಿ ಅವನನ್ನು ಸಂಪೂರ್ಣ ಅಸಹಾಯಕನನ್ನಾಗಿ ಮಾಡಿದ್ದಾಳೆ.

ನಂತರ ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪರಿಣಾಮ, ಕಿರಣ್ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ. ಈ ಕ್ರೂರ ಘಟನೆಯನ್ನು ಯುವತಿ ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾಳೆ ಎಂಬ ಅಚ್ಚರಿಯ ಸಂಗತಿಯೂ ಬಹಿರಂಗವಾಗಿದೆ.

ಪ್ರಾರಂಭದಲ್ಲಿ ಪೊಲೀಸರ ಮುಂದೆ ಯುವತಿ ಸುಳ್ಳು ಕಥೆ ಹೇಳಿದ್ದು ಗಮನಾರ್ಹ. “ನಾನು ಟಾಯ್ಲೆಟ್‌ನಲ್ಲಿದ್ದೆ. ಸೌಂಡ್ ಕೇಳಿ ಹೊರಗೆ ಬಂದಾಗ ಕಿರಣ್ ಬೆಂಕಿ ಹಚ್ಚಿಕೊಂಡಿದ್ದ” ಎಂದು ಹೇಳಿದ್ದಳು. ಆದರೆ ಕಿರಣ್ ಪೆಟ್ರೋಲ್ ತರಲೇ ಇಲ್ಲ ಎಂಬುದು ಸಿಸಿಟಿವಿ ದೃಶ್ಯಗಳಿಂದ ದೃಢಪಟ್ಟಿದ್ದು, ಪೆಟ್ರೋಲ್ ಅನ್ನು ಯುವತಿಯೇ ಮುಂಚಿತವಾಗಿ ತಂದಿಟ್ಟಿದ್ದಾಳೆ ಎಂಬ ಶಂಕೆ ಗಟ್ಟಿಯಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಯುವತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಇಷ್ಟೊಂದು ಭೀಕರ ಕೃತ್ಯಕ್ಕೆ ಕಾರಣವೇನು? ವಿಡಿಯೋ ಚಿತ್ರೀಕರಣದ ಹಿಂದಿನ ಉದ್ದೇಶವೇನು? ಎಂಬುದನ್ನು ತಿಳಿಯಲು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಈ ಘಟನೆ ಪ್ರೀತಿ ಎಂಬ ನಾಜೂಕಿನ ಸಂಬಂಧವು ಹೇಗೆ ಅಪಾಯಕಾರಿ ತಿರುವು ಪಡೆಯಬಹುದು ಎಂಬುದನ್ನು ಮತ್ತೊಮ್ಮೆ ನೆನಪಿಸಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

16 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

16 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

16 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

16 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

16 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

16 hours ago