Latest

ಅಧಿಕಾರಿಗಳ ಕಣ್ಣು ತಪ್ಪಿಸಿ ಬೆಲೆ ಬಾಳುವ ಮರಗಿಡಗಳನ್ನು ನಾಶ ಮಾಡುತ್ತಿರುವ ಮರಗಳ್ಳರು.

ಉತ್ತರಕನ್ನಡ ಜಿಲ್ಲೆಯಲ್ಲಿ ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಬೆಲೆ ಬಾಳುವ ಮರಗಿಡಗಳು ಹಾಗೂ ದಟ್ಟ ಕಾಡು ಮಲೆನಾಡು ಪ್ರದೇಶ ಎಂದೂ ಹೆಸರುವಾಸಿಯಾಗಿದೆ. ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಡು ಬೆಳೆಸಿ ನಾಡು ಉಳಿಸಿ ಎಂಬ ಮಾತಿನಂತೆ. ಉತ್ತರಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಅರಣ್ಯ ಸಂಪತ್ತಿದೆ ಅದನ್ನು ರಕ್ಷಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ. ಆದರೆ ಈ ಜೆಲ್ಲೆಯಲ್ಲಿ ಅಧಿಕಾರಿಗಳ ಕಣ್ಣು ತಪ್ಪಿಸಿ ಮರಗಳ್ಳರು ಬೆಲೆ ಬಾಳುವ ಅರಣ್ಯ ಸಂಪತ್ತನ್ನು ನಾಶಗೊಳಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಾಲೂಕಿನ ಉಳ್ಳುರು ,ಅಬ್ಬಳ್ಳಿ , ಹೆರೊಳ್ಳಿ, ಹಿಂಡಬೈಲ್ ಸಂತೆಗುಳಿ ಮುಂಡಗೋಡ ತಾಲೂಕಿನ ಕಾತುರು ವಲಯ ಹಾಗೂ ಯಲ್ಲಾಪುರ ಬನವಾಸಿ ಸಿರ್ಸಿ ಮತ್ತು ಇನ್ನಿತರ ಕ್ಷೇತ್ರಗಳಲ್ಲಿ ಪರಿಸರವನ್ನು ನಾಶಗೊಳಿಸುತ್ತಿರುವುದು ಬೇಸರದ ವಿಷಯವಾಗಿದೆ .

ಇದನ್ನು ತಿಳಿದೂ ತಿಳಿಯದ ಹಾಗೆ ಇಲ್ಲಿನ ಅಧಿಕಾರಿಗಳು ಯಾಕೆ ಸುಮ್ಮನೆ ಕುಳಿತಿದ್ದಾರೆ ತಿಳಿಯುತ್ತಿಲ್ಲ..ಇನ್ನಾದರೂ ಕಾಡನ್ನು ನಾಶಗೊಳಿಸುವುದು ಮತ್ತು ಬೆಲೆ ಬಾಳುವ ಅರಣ್ಯ ಸಂಪತ್ತನ್ನು ಮರಗಳ್ಳರ ಪಾಲಾಗದಂತೆ ಸಂಭಂದ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರಾ ಕಾದು ನೋಡಬೇಕಾಗಿದೆ.

ವರದಿ: ಶ್ರೀಪಾದ್ ಹೆಗಡೆ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago