Latest

ಸಾಲ ಕೊಡಿಸುವ ಆಮಿಷ.. ಲಕ್ಷಾಂತರ ರೂ ವಂಚನೆ: ಆರೋಪಿ ಅಂದರ್..!

ನಂಜನಗೂಡು: ಮೈಕ್ರೋ ಫೈನಾನ್ಸ್ ಹಾವಳಿಗಳಿಂದ ಜನರು ಬೇಸತ್ತು ಗ್ರಾಮಗಳನ್ನು ತೊರೆಯುತ್ತಿರುವುದರ ಜೊತೆಗೆ ಪ್ರಾಣಗಳನ್ನು ಕಳೆದುಕೊಳ್ಳುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲೂ ಇಲ್ಲೊಬ್ಬ ಖತರ್ನಾಕ್ ಸಾಲಕೊಡಿಸುವ ನೆಪದಲ್ಲಿ ಹಲವಾರು ಮಂದಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿ ಬಂಧಿತನಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಮಾದನಹಳ್ಳಿ ಗ್ರಾಮದ ಸುನಿಲ್ ಎಂಬುವವನೆ ಬಂದಿತ ಆರೋಪಿ
ಹುಲ್ಲಹಳ್ಳಿಯ ಕಲ್ಯಾಣಿ ಮೋಟಾರ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮಾದನಹಳ್ಳಿ ಸುನಿಲ್ ತನಗೆ ಪ್ರತಿಷ್ಠಿತ ಫೈನಾನ್ಸ್ ಹಾಗೂ ಸ್ಥಳೀಯ ಬ್ಯಾಂಕುಗಳ ವ್ಯವಸ್ಥಾಪಕರು ಪರಿಚಯವಿದ್ದು ಕಡಿಮೆ ಬಡ್ಡಿ ದರದಲ್ಲಿ ಲಕ್ಷಾಂತರ ರೂಪಾಯಿ ಸಾಲ ಕೊಡಿಸುವುದಾಗಿ ನಂಬಿಸಿ ಸಾಲದ ಹಣಕ್ಕೆ ಕಮಿಷನ್ ನೀಡಬೇಕೆಂದು ಹೇಳಿದ್ದಾನೆ. ಈತನ ಬೆಣ್ಣೆ ಮಾತಿಗೆ ಕರಗಿದ ಅಮಾಯಕರು ಸಾಲದ ಆಸೆಗಾಗಿ ಮೊದಲೆ ಕಮಿಷನ್ ಹಣ ನೀಡಿದ್ದಾರೆ. ಸಾಕಷ್ಟು ಜನರಿಂದ ಹಣ ಪಡೆದಿದ್ದರು ಯಾವುದೇ ಸಾಲ ಕೊಡಿಸಿಲ್ಲವೆಂದು ಹೇಳಲಾಗಿದೆ. ಅಲ್ಲದೆ ಕಮಿಷನ್ ಹೆಸರಿನಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದಾನೆಂದು ತಿಳಿದು ಬಂದಿದೆ.
ಪ್ರತಿಷ್ಠಿತ ಫೈನಾನ್ಸ್ ಗಳಲ್ಲಿ ಹಾಗೂ ಸ್ಥಳೀಯ ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ಲಕ್ಷಾಂತರ ರೂ ವಂಚಿಸಿದ ಐನಾತಿಯನ್ನ ಡಿವೈಎಸ್ಪಿ ರಘು ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಚಂದ್ರಶೇಖರ್ ಹಾಗೂ ಹುಲ್ಲಹಳ್ಳಿ ಪಿಎಸ್ಐ ಚೇತನ್ ಕುಮಾರ್ ಹಾಗೂ ದಫೆದಾರ್ ದೊಡ್ಡಯ್ಯ ಕಾರ್ಯಚರಣೆ ಮಾಡಿ ಖತರ್ನಾಕ್ ಐನಾತಿಯನ್ನು ಬಂಧಿಸಿದ್ದಾರೆ.
ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಆಕಲ ಗ್ರಾಮದ ಮಹಿಳೆಯೋರ್ವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸುನಿಲ್ ನನ್ನು ವಶಕ್ಕೆ ಪಡೆದಿದ್ದಾರೆ. ಮೈಕ್ರೋ ಫೈನಾನ್ಸ್ ಗಳ ಹಾವಳಿಯ ಶಾಕ್ ನಿಂದ ನರಳುತ್ತಿರುವ ಜನರಿಗೆ ಈ ಐನಾತಿಯ ವಂಚನೆ ಮತ್ತಷ್ಟು ಚಿಂತೆಗೀಡು ಮಾಡಿದೆ. ವರದಿ: ಮೋಹನ್

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

6 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

6 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

9 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

11 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

11 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

11 hours ago