Latest

ಸಾಲ ಕೊಡಿಸುವ ಆಮಿಷ.. ಲಕ್ಷಾಂತರ ರೂ ವಂಚನೆ: ಆರೋಪಿ ಅಂದರ್..!

ನಂಜನಗೂಡು: ಮೈಕ್ರೋ ಫೈನಾನ್ಸ್ ಹಾವಳಿಗಳಿಂದ ಜನರು ಬೇಸತ್ತು ಗ್ರಾಮಗಳನ್ನು ತೊರೆಯುತ್ತಿರುವುದರ ಜೊತೆಗೆ ಪ್ರಾಣಗಳನ್ನು ಕಳೆದುಕೊಳ್ಳುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲೂ ಇಲ್ಲೊಬ್ಬ ಖತರ್ನಾಕ್ ಸಾಲಕೊಡಿಸುವ ನೆಪದಲ್ಲಿ ಹಲವಾರು ಮಂದಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿ ಬಂಧಿತನಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಮಾದನಹಳ್ಳಿ ಗ್ರಾಮದ ಸುನಿಲ್ ಎಂಬುವವನೆ ಬಂದಿತ ಆರೋಪಿ
ಹುಲ್ಲಹಳ್ಳಿಯ ಕಲ್ಯಾಣಿ ಮೋಟಾರ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮಾದನಹಳ್ಳಿ ಸುನಿಲ್ ತನಗೆ ಪ್ರತಿಷ್ಠಿತ ಫೈನಾನ್ಸ್ ಹಾಗೂ ಸ್ಥಳೀಯ ಬ್ಯಾಂಕುಗಳ ವ್ಯವಸ್ಥಾಪಕರು ಪರಿಚಯವಿದ್ದು ಕಡಿಮೆ ಬಡ್ಡಿ ದರದಲ್ಲಿ ಲಕ್ಷಾಂತರ ರೂಪಾಯಿ ಸಾಲ ಕೊಡಿಸುವುದಾಗಿ ನಂಬಿಸಿ ಸಾಲದ ಹಣಕ್ಕೆ ಕಮಿಷನ್ ನೀಡಬೇಕೆಂದು ಹೇಳಿದ್ದಾನೆ. ಈತನ ಬೆಣ್ಣೆ ಮಾತಿಗೆ ಕರಗಿದ ಅಮಾಯಕರು ಸಾಲದ ಆಸೆಗಾಗಿ ಮೊದಲೆ ಕಮಿಷನ್ ಹಣ ನೀಡಿದ್ದಾರೆ. ಸಾಕಷ್ಟು ಜನರಿಂದ ಹಣ ಪಡೆದಿದ್ದರು ಯಾವುದೇ ಸಾಲ ಕೊಡಿಸಿಲ್ಲವೆಂದು ಹೇಳಲಾಗಿದೆ. ಅಲ್ಲದೆ ಕಮಿಷನ್ ಹೆಸರಿನಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದಾನೆಂದು ತಿಳಿದು ಬಂದಿದೆ.
ಪ್ರತಿಷ್ಠಿತ ಫೈನಾನ್ಸ್ ಗಳಲ್ಲಿ ಹಾಗೂ ಸ್ಥಳೀಯ ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ಲಕ್ಷಾಂತರ ರೂ ವಂಚಿಸಿದ ಐನಾತಿಯನ್ನ ಡಿವೈಎಸ್ಪಿ ರಘು ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಚಂದ್ರಶೇಖರ್ ಹಾಗೂ ಹುಲ್ಲಹಳ್ಳಿ ಪಿಎಸ್ಐ ಚೇತನ್ ಕುಮಾರ್ ಹಾಗೂ ದಫೆದಾರ್ ದೊಡ್ಡಯ್ಯ ಕಾರ್ಯಚರಣೆ ಮಾಡಿ ಖತರ್ನಾಕ್ ಐನಾತಿಯನ್ನು ಬಂಧಿಸಿದ್ದಾರೆ.
ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಆಕಲ ಗ್ರಾಮದ ಮಹಿಳೆಯೋರ್ವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸುನಿಲ್ ನನ್ನು ವಶಕ್ಕೆ ಪಡೆದಿದ್ದಾರೆ. ಮೈಕ್ರೋ ಫೈನಾನ್ಸ್ ಗಳ ಹಾವಳಿಯ ಶಾಕ್ ನಿಂದ ನರಳುತ್ತಿರುವ ಜನರಿಗೆ ಈ ಐನಾತಿಯ ವಂಚನೆ ಮತ್ತಷ್ಟು ಚಿಂತೆಗೀಡು ಮಾಡಿದೆ. ವರದಿ: ಮೋಹನ್

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

8 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

8 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

8 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

8 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

8 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

8 hours ago