Categories: CrimeLatest

‘ಮಚ್ಚ್ ಮಂಜಾ’ ಹಲ್ಲೆ ಪ್ರಕರಣ: ಪಿಎಸ್‌ಐ ಅಮಾನತು, 8 ಸಿಬ್ಬಂದಿ ವರ್ಗಾವಣೆ

ಕಾರವಾರ: ಹಳಿಯಾಳದಲ್ಲಿ ಮಾಜಿ ರೌಡಿ ಶೀಟರ್‌ನಿಂದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಆಡಳಿತಾತ್ಮಕ ಕ್ರಮ ಕೈಗೊಂಡಿದೆ. ಕರ್ತವ್ಯ ನಿರ್ಲಕ್ಷ್ಯ ಹಾಗೂ ಸಿಬ್ಬಂದಿಯ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳದ ಆರೋಪದ ಹಿನ್ನೆಲೆ ಹಳಿಯಾಳ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ ಮಬನೂರು ಅವರನ್ನು ಅಮಾನತು ಮಾಡಲಾಗಿದ್ದು, ಠಾಣೆಯ 8 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ದೀಪನ್ ಅವರ ಆದೇಶದಂತೆ ಈ ಕ್ರಮ ಜಾರಿಗೊಂಡಿದೆ.

ಜೂನ್ 14ರ ರಾತ್ರಿ ಹಳಿಯಾಳ ಪಟ್ಟಣದ ಮೌರ್ಯ ಬಾರ್ ಮತ್ತು ರೆಸ್ಟೋರೆಂಟ್ ಎದುರು ಮಾಜಿ ರೌಡಿ ಶೀಟರ್ ಮಂಜುನಾಥ ಸುಬ್ರಾಯ ಬೇಕನಿ ಅಲಿಯಾಸ್ ‘ಮಚ್ಚ್ ಮಂಜಾ’ ಮದ್ಯದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ತೆರಳಿದ ಪೊಲೀಸರೊಂದಿಗೆ ಆರೋಪಿ ವಾಗ್ವಾದ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ಈ ಘಟನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಘಟನೆಯ ವೇಳೆ ಸ್ಥಳದಲ್ಲಿದ್ದ ಪಿಎಸ್‌ಐ ಬಸವರಾಜ ಮಬನೂರು ಅವರು ತಮ್ಮ ಸಿಬ್ಬಂದಿಯ ನೆರವಿಗೆ ಸಮರ್ಪಕವಾಗಿ ಧಾವಿಸಿಲ್ಲ ಎಂಬ ಆರೋಪವೂ ಕೇಳಿಬಂದಿತ್ತು. ಸಿಬ್ಬಂದಿಯ ಮೇಲೆಯೇ ಹಲ್ಲೆ ನಡೆಯುತ್ತಿದ್ದರೂ ಸೂಕ್ತ ಮಧ್ಯಪ್ರವೇಶ ಮಾಡದಿರುವುದು ಇಲಾಖೆಯೊಳಗೆ ಅಸಮಾಧಾನಕ್ಕೆ ಕಾರಣವಾಗಿತ್ತು ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಆಂತರಿಕ ತನಿಖೆ ನಡೆಸಿ, ಪಿಎಸ್‌ಐ ಅಮಾನತು ಹಾಗೂ 8 ಸಿಬ್ಬಂದಿಯ ವರ್ಗಾವಣೆಗೆ ಆದೇಶಿಸಿದೆ. ಸದ್ಯ ಪೊಲೀಸರ ಮೇಲಿನ ದಾಳಿ ಮತ್ತು ಕರ್ತವ್ಯ ಲೋಪ ಎರಡೂ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

11 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

11 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

11 hours ago