ಪಟ್ಟಣದಲ್ಲಿ ಹುಚ್ಚುನಾಯಿ ಹಾವಳಿಯಿಂದಾಗಿ 13 ಜನಕ್ಕೆ ಕಚ್ಚಿ ಪಟ್ಟಣವನ್ನು ಬೆಚ್ಚಿ ಬೀಳಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಜಮ್ಮಾ ಮಸೀದಿ, ಮುದಕನಕಟ್ಟಿ, ತೇರು ಬಯಲು, ಮುಖ್ಯ ರಸ್ತೆ ಗಳಲ್ಲಿ, ಈ ನಾಯಿ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ವಿಪರೀತ ಸಮಸ್ಯೆ ಉಂಟುಮಾಡಿ ಓಡಾಡಲು ಭಯಭೀತರಾಗುವಂತೆ ಮಾಡಲಾಗಿದೆ.
ಹುಚ್ಚು ನಾಯಿ ಕಡಿತದಿಂದಾಗಿ ಪ್ರಥಮ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆ ತೆರಳಿದ ಗಾಯಾಳುಗಳಿಗೆ ಅಲ್ಲಿನ ವ್ಯಂಟರ್ ರೇಬಿಸ್,ಟಿ.ಟಿ.ಅಂತಹ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಕಳಿಸಿಕೊಡಲಾಗಿದೆ ಎಂದು ಹೇಳಲಾಗಿದೆ ಸಂಬಂಧ ಪಟ್ಟ ಇಲಾಖೆಯವರು ನಾಯಿಗಳನ್ನು ನಿಯಂತ್ರಣದಲ್ಲಿ ಇಡುವಂತೆ ಸಾರ್ವಜನಿಕರ ಒತ್ತಾಯ ವಾಗಿದೆ.
ವರದಿ :ಮಣಿಕಂಠ ಬಿ
***
ನಾಯಿಗಳನ್ನು ಸುರಕ್ಷಿತವಾಗಿ ಇಡಲು ಮತ್ತು ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ
ಸಮಸ್ಯೆ ಆಗದಂತೆ ಕ್ರಮ ವಹಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಇದ್ದರೂ ಸಹ ನಾಯಿಗಳ ಬಗ್ಗೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ವರ್ಗದವರು ಮುಂಜಾಗ್ರತವಾಗಿ ಯಾವುದೆ ಕ್ರಮ ಕೈಗೊಂಡಿಲ್ಲ ಹಾಗೇ ಸರ್ಕಾರಿ ಆಸ್ಪತ್ರೆಯಲ್ಲಿ ಇದರ ಸಂಬಂಧ ಸರಿಯಾದ ಚಿಕಿತ್ಸೆ ಸಹ ಇಲ್ಲದೆ ಇರುವುದು ತುಂಬಾ ಬೇಸರದ ವಿಚಾರ
-ಸಂದೀಪ
ವಕೀಲರು.
***
ಇದು ಹುಚ್ಚುನಾಯಿ ಅಥವಾ ಸಾಮಾನ್ಯ ನಾಯಿ ಅಂತ ಹೇಳಲು ಆಗುವುದಿಲ್ಲ ಇದು ನಿನ್ನೆ ರಾತ್ರಿ ಏಕಾಏಕಿ ಸಾರ್ವಜನಿಕರ ಮೇಲೆ ದಾಳಿ ಮಾಡಿದೆ ತಕ್ಷಣ ಆ ನಾಯಿಯನ್ನು ಹಿಡಿದು ಮುಂದೆ ಆಗುವ ಅನಾಹುತವನ್ನು ತಪ್ಪಿಸಲಾಗಿದೆ ತೊಂದರೆಯಾದ ಗಾಯಾಳುಗಳಿಗೆ ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
-ಅನುಷಾ
ಪ.ಪಂ.ಕಿರಿಯ ಆರೋಗ್ಯ ನಿರೀಕ್ಷಕರು.
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…