ಕನ್ನಡದ ಜನಪ್ರಿಯ ಹಾಸ್ಯ ರಿಯಾಲಿಟಿ ಶೋ ‘ಕಾಮಿಡಿ ಕಿಲಾಡಿಗಳು’ ಮೂಲಕ ಗುರುತಿಸಿಕೊಂಡಿದ್ದ ಕಿರುತೆರೆ ನಟ ಮಡೆನೂರು ಮನು ವಿರುದ್ಧ ಗಂಭೀರ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಟಿವಿ ಹಾಗೂ ಸಿನಿಮಾ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಿರುತೆರೆ ನಟಿಯೊಬ್ಬರು ಮನು ವಿರುದ್ಧ ಬೆಂಗಳೂರು ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಮನು ವಿರುದ್ಧ ಎಫ್‌ಐಆರ್ ದಾಖಲಿಸಿ, ಇದೀಗ ಅವರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ ಆರೋಪದ ನಿಖರ ವಿವರಗಳನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

ಈ ನಡುವೆಯೇ ಮನು ಅಭಿನಯಿಸಿರುವ ಹೊಸ ಚಿತ್ರ ‘ಕೀಳ್ಯಾವುದೋ’ ಮೇ 23ರಂದು ತೆರೆಗೆ ಬರಲು ಸಿದ್ಧವಾಗಿದೆ. ಈ ಚಿತ್ರದಲ್ಲಿ ಅವರು ನಟಿ ಮೌನ ಗುಡ್ಡೆಮನೆ ಜತೆಗೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ಯೋಗರಾಜ್ ಭಟ್ ಅವರ ಬ್ಯಾನರ್‌ನಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರದಲ್ಲಿ ಮನು ಮುಖ್ಯ ಆಕರ್ಷಣೆಯಾಗಿದ್ದು, ಬಿಡುಗಡೆಯ ಮುನ್ನ ಇಂತಹ ಆರೋಪ ಕೇಳಿಬಂದಿರುವುದು ಚಿತ್ರತಂಡಕ್ಕೆ ಆತಂಕದ ಕಾರಣವಾಗಿದೆ.

ಮನು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಎರಡನೇ ಸೀಸನ್‌ನ ವಿಜೇತರಾಗಿದ್ದ ಅವರು ತಮ್ಮ ವಿಶಿಷ್ಟ ಹಾಸ್ಯ ಶೈಲಿಯಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಆದರೆ ಇದೀಗ ಅವರ ವಿರುದ್ಧ ದಾಖಲಾಗಿರುವ ಅತ್ಯಾಚಾರ ಆರೋಪ, ಅವರಿಗೆ ರೂಪುಗೊಂಡಿದ್ದ ಪಾಸಿಟಿವ್ ಇಮೇಜ್‌ಗೆ ಧಕ್ಕೆ ತರುತ್ತಾ ಎಂಬ ಚಿಂತನೆ ನಿರ್ಮಾಣವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಹೊರಬೀಳುವ ನಿರೀಕ್ಷೆಯಿದ್ದು, ತೀವ್ರ ತನಿಖೆ ಮುಂದುವರಿಯುತ್ತಿದೆ. ಈ ಆರೋಪ ಮನು ಹಾಗೂ ‘ಕೀಳ್ಯಾವುದೋ’ ಸಿನಿಮಾದ ಭವಿಷ್ಯಕ್ಕೆ ಏನೆಲ್ಲಾ ಪರಿಣಾಮ ಬೀರಬಹುದು ಎಂಬುದನ್ನು ತೀರ್ಮಾನಿಸುವುದು ಇನ್ನೂ ಕಾಲವೇ ಉತ್ತರಿಸಬೇಕಾದ ಪ್ರಶ್ನೆಯಾಗಿರುವುದು ಸ್ಪಷ್ಟವಾಗಿದೆ.

Related News

error: Content is protected !!