Latest

ಮಾದಿಗರು ಕ್ರಾಸ್ ಬ್ರೀಡ್(ಬೆರಕೆ ತಳಿ) ಎಂದ ಶಿಕ್ಷಕ; ಲೀಕ್ ಆಯ್ತು ಆಡಿಯೋ.

ಶಿಕ್ಷಣ ಸಚಿವರ ತವರಿನಲ್ಲಿಯೇ ದಲಿತ ಶಿಕ್ಷಕರು ಸೇರಿದಂತೆ ತಳ ಸಮುದಾಯದ ಶಿಕ್ಷಕರು ಜಾತಿ ವಿಷಯದಲ್ಲಿ ಪ್ರತಿದಿನವೂ ಮೇಲ್ವರ್ಗದ ಜಾತಿಯ ಸರ್ಕಾರಿ ಶಿಕ್ಷಕರಿಂದ ತುಳಿತಕ್ಕೆ ಹಾಗೂ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ.

ಮುಂದಿನ ವರ್ಷದಲ್ಲಿ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಯುತ್ತಿದ್ದು ಚುನಾವಣೆಯ ವಿಚಾರವಾಗಿ ಶಿರಾ ತಾಲೂಕಿನ ಪದ್ಮಾಪುರ ಸರ್ಕಾರಿ ಶಾಲೆಯ ಶಿಕ್ಷಕ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಕಾರ್ಯದರ್ಶಿ ಕೆ ಸಿ ಜೀವನ್ ಪ್ರಕಾಶ್ ಮತ್ತೊರ್ವ ಶಿಕ್ಷಕನ ಬಳಿ ಮಾತನಾಡುವಾಗ ಬೆಳ್ಳಗೆ ಇರುವ ಮಾದಿಗರೆಲ್ಲ ಕ್ರಾಸ್ ಬ್ರೀಡ್ ಎಂದು ಹೇಳಿಕೊಂಡಿದ್ದಾನೆ.
ಮುಂದುವರೆದು ಮಾದಿಗ ಅಧಿಕಾರಿಗಳು ಶಿರಾ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸಲು ಬಿಡಲ್ಲ ಎಂದೂ ಮಾತನಾಡಿದ್ದಾನೆ.

ಈತ ಕಾರ್ಯನಿರ್ವಹಿಸುತ್ತಿರುವುದು ಸರ್ಕಾರಿ ಶಾಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಅಧಿಕವಾಗಿ ದಲಿತರ ಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ ಅಂತಹ ಮಕ್ಕಳಿಗೆ ಬೋಧಿಸಿ ಸಂಬಳ ಪಡೆಯುತ್ತಿರುವ ಈತನು ಅವರ ಜಾತಿಯವರನ್ನೇ ನಿಂದಿಸಿರುವುದು ನಿಜಕ್ಕೂ ನಾಚಿಕೆಗೇಡಿನ ವಿಚಾರ.
ಅವರಿಗೋಸ್ಕರ ಕೆಲಸ ಮಾಡಿ ಅವರಿಂದಲೇ ಅನ್ನ ತಿಂದು ಆ ಜಾತಿಯವರನ್ನೇ ಕ್ರಾಸ್ ಬ್ರೀಡ್ ಎಂದು ಹೇಳುತ್ತಿದ್ದಾನೆ ಎಂದರೆ ಇವನಿಗೆ ಯಾವ ಅಧಿಕಾರಿಗಳ ಭಯವಿಲ್ಲವೇ?
ಶಿರಾ ತಾಲ್ಲೂಕಿನ ಬಿಇಓ ಹಾಗೂ ಬಿ ಆರ್ ಸಿ ಅಧಿಕಾರಿಗಳು ಮಾದಿಗ ಸಮುದಾಯಕ್ಕೆ ಸೇರಿದ್ದರೂ ಕ್ರಮ ಕೈಗೊಂಡಿಲ್ಲ.
ಈ ಶಿಕ್ಷಕ ಈ ರೀತಿ ಮಾತನಾಡಿದರು ಅಂತಹ ಆಡಿಯೋಗಳು ವಾಟ್ಸಾಪ್ ಗಳಲ್ಲಿ ಹರಿದಾಡುತ್ತಿವೆ ಆದರೂ ಸಹ ಈತನ ವಿರುದ್ಧ ಆಟಾರ್ಸಿಟಿ ಕೇಸ್ ದಾಖಲಾಗದಿರಲು ಕಾರಣವೇನು?
ನಿಜಕ್ಕೂ ಈ ವಿಚಾರಗಳ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ಇಲ್ಲವೇ ಅಥವಾ ಕೆಳಸಮುದಾಯದ ಜಾತಿಯ ಬಗ್ಗೆ ಮಾತನಾಡಿದ್ದಾನೆ ಎಂದೇನಾದರೂ ಮೇಲಾಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರಾ?
ಕೂಡಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸದರಿ ಶಿಕ್ಷಕನ ವಿರುದ್ದ ಎಸ್.ಸಿ/ಎಸ್.ಟಿ ದೌರ್ಜನ್ಯ ಕಾಯಿದೆಯಡಿ ದೂರು ದಾಖಲಿಸಿಕೊಳ್ಳಬೇಕೆಂದು ಭ್ರಷ್ಟರ ಬೇಟೆ ಪತ್ರಿಕೆಯ ಆಗ್ರಹ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago