Latest

ಮಾದಿಗರು ಕ್ರಾಸ್ ಬ್ರೀಡ್(ಬೆರಕೆ ತಳಿ) ಎಂದ ಶಿಕ್ಷಕ; ಲೀಕ್ ಆಯ್ತು ಆಡಿಯೋ.

ಶಿಕ್ಷಣ ಸಚಿವರ ತವರಿನಲ್ಲಿಯೇ ದಲಿತ ಶಿಕ್ಷಕರು ಸೇರಿದಂತೆ ತಳ ಸಮುದಾಯದ ಶಿಕ್ಷಕರು ಜಾತಿ ವಿಷಯದಲ್ಲಿ ಪ್ರತಿದಿನವೂ ಮೇಲ್ವರ್ಗದ ಜಾತಿಯ ಸರ್ಕಾರಿ ಶಿಕ್ಷಕರಿಂದ ತುಳಿತಕ್ಕೆ ಹಾಗೂ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ.

ಮುಂದಿನ ವರ್ಷದಲ್ಲಿ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಯುತ್ತಿದ್ದು ಚುನಾವಣೆಯ ವಿಚಾರವಾಗಿ ಶಿರಾ ತಾಲೂಕಿನ ಪದ್ಮಾಪುರ ಸರ್ಕಾರಿ ಶಾಲೆಯ ಶಿಕ್ಷಕ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಕಾರ್ಯದರ್ಶಿ ಕೆ ಸಿ ಜೀವನ್ ಪ್ರಕಾಶ್ ಮತ್ತೊರ್ವ ಶಿಕ್ಷಕನ ಬಳಿ ಮಾತನಾಡುವಾಗ ಬೆಳ್ಳಗೆ ಇರುವ ಮಾದಿಗರೆಲ್ಲ ಕ್ರಾಸ್ ಬ್ರೀಡ್ ಎಂದು ಹೇಳಿಕೊಂಡಿದ್ದಾನೆ.
ಮುಂದುವರೆದು ಮಾದಿಗ ಅಧಿಕಾರಿಗಳು ಶಿರಾ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸಲು ಬಿಡಲ್ಲ ಎಂದೂ ಮಾತನಾಡಿದ್ದಾನೆ.

ಈತ ಕಾರ್ಯನಿರ್ವಹಿಸುತ್ತಿರುವುದು ಸರ್ಕಾರಿ ಶಾಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಅಧಿಕವಾಗಿ ದಲಿತರ ಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ ಅಂತಹ ಮಕ್ಕಳಿಗೆ ಬೋಧಿಸಿ ಸಂಬಳ ಪಡೆಯುತ್ತಿರುವ ಈತನು ಅವರ ಜಾತಿಯವರನ್ನೇ ನಿಂದಿಸಿರುವುದು ನಿಜಕ್ಕೂ ನಾಚಿಕೆಗೇಡಿನ ವಿಚಾರ.
ಅವರಿಗೋಸ್ಕರ ಕೆಲಸ ಮಾಡಿ ಅವರಿಂದಲೇ ಅನ್ನ ತಿಂದು ಆ ಜಾತಿಯವರನ್ನೇ ಕ್ರಾಸ್ ಬ್ರೀಡ್ ಎಂದು ಹೇಳುತ್ತಿದ್ದಾನೆ ಎಂದರೆ ಇವನಿಗೆ ಯಾವ ಅಧಿಕಾರಿಗಳ ಭಯವಿಲ್ಲವೇ?
ಶಿರಾ ತಾಲ್ಲೂಕಿನ ಬಿಇಓ ಹಾಗೂ ಬಿ ಆರ್ ಸಿ ಅಧಿಕಾರಿಗಳು ಮಾದಿಗ ಸಮುದಾಯಕ್ಕೆ ಸೇರಿದ್ದರೂ ಕ್ರಮ ಕೈಗೊಂಡಿಲ್ಲ.
ಈ ಶಿಕ್ಷಕ ಈ ರೀತಿ ಮಾತನಾಡಿದರು ಅಂತಹ ಆಡಿಯೋಗಳು ವಾಟ್ಸಾಪ್ ಗಳಲ್ಲಿ ಹರಿದಾಡುತ್ತಿವೆ ಆದರೂ ಸಹ ಈತನ ವಿರುದ್ಧ ಆಟಾರ್ಸಿಟಿ ಕೇಸ್ ದಾಖಲಾಗದಿರಲು ಕಾರಣವೇನು?
ನಿಜಕ್ಕೂ ಈ ವಿಚಾರಗಳ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ಇಲ್ಲವೇ ಅಥವಾ ಕೆಳಸಮುದಾಯದ ಜಾತಿಯ ಬಗ್ಗೆ ಮಾತನಾಡಿದ್ದಾನೆ ಎಂದೇನಾದರೂ ಮೇಲಾಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರಾ?
ಕೂಡಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸದರಿ ಶಿಕ್ಷಕನ ವಿರುದ್ದ ಎಸ್.ಸಿ/ಎಸ್.ಟಿ ದೌರ್ಜನ್ಯ ಕಾಯಿದೆಯಡಿ ದೂರು ದಾಖಲಿಸಿಕೊಳ್ಳಬೇಕೆಂದು ಭ್ರಷ್ಟರ ಬೇಟೆ ಪತ್ರಿಕೆಯ ಆಗ್ರಹ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

20 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

20 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

20 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

20 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

20 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

20 hours ago