Latest

ಪ್ರಭುದೇವನನ್ನು ಹುಚ್ಚಿಯಂತೆ ಪ್ರೀತಿಸುತ್ತಿದೆ, ಕನಸಿನಲ್ಲಿ ನಾನು ಪ್ರಭುದೇವ ಜೊತೆ ನಗ್ಮಾ ಆಗಿ ಹೆಜ್ಜೆ ಹಾಕುತ್ತಿದ್ದೆ- ನಟಿ ವನಿತಾ ವಿಜಯಕುಮಾರ್

ತಮಿಳು ಚಿತ್ರರಂಗಕ್ಕಂತೂ ವನಿತಾ ವಿಜಯ್‌ಕುಮಾರ್ ತುಂಬಾನೇ ಚಿರಪರಿಚಿತ. ವನಿತಾ ವಿಜಯಕುಮಾರ್ ತಮಿಳಿನ ಜನಪ್ರಿಯ ಹಿರಿಯ ನಟ ವಿಜಯಕುಮಾರ್ ಅವರ ಪುತ್ರಿ. ಈಕೆ ಕೂಡ ತಂದೆಯ ಹಾದಿಯಲ್ಲೇ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ವನಿತಾ ವಿಜಜ್‌ಕುಮಾರ್ ಹಲವು ಸಿನಿಮಾಗಳಿಗೆ ನಾಯಕಿಯಾಗಿಯೂ ಕಾಣಿಸಿಕೊಂಡಿದ್ದರು.
ಒಂದಿಷ್ಟು ಸಿನಿಮಾಗಳಲ್ಲಿ ನಟಿಸಿದ ಬಳಿಕ ಅವರು ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಸಿನಿಮಾ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರೂ, ನಟನೆಗಿಂತ ಹೆಚ್ಚು ವಿವಾದಗಳಿಂದ ಸುದ್ದಿಯಲ್ಲಿದ್ದಾರೆ. ವನಿತಾ ವಿಜಯಕುಮಾರ್ ತನ್ನ ಕುಟುಂಬದೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿಲ್ಲ. ತನ್ನ ಮಗಳ ವೈಯಕ್ತಿಕ ಬದುಕಿನ ನಿರ್ಧಾರಗಳಿಂದ ತಂದೆ ವಿಜಯಕುಮಾರ್ ಮತ್ತು ಆಕೆಯ ಸಹೋದರ ಅರುಣ್ ವಿಜಯ್ ಈ ನಟನಿಂದ ದೂರವೇ ಉಳಿಸಿದ್ದಾರೆ. ಈಕೆ ಕೂಡ ತನ್ನ ಕುಟುಂಬದಿಂದ ದೂರವೇ ಇದ್ದಾರೆ ಎಂದು ಹೇಳಲಾಗುತ್ತಿದೆ. ಎಷ್ಟೋ ಬಾರಿ ತಂದೆಯ ವಿರುದ್ಧವೇ ಮಾತಾಡಿದ್ದಾರೆ. ಅಲ್ಲದೆ, ಈಕೆಯ ದಾಂಪತ್ಯ ಜೀವನ ಕೂಡ ಅಸ್ತವ್ಯಸ್ತವಾಗಿದೆ.
ವನಿತಾ ವಿಜಯಕುಮಾರ್ ಎರಡು ಬಾರಿ ವಿವಾಹವಾಗಿದ್ದರು. ಆದರೆ, ಈಕೆಯ ಎರಡೂ ಮದುವೆಗಳು ತುಂಬಾ ಕೆಟ್ಟದಾಗಿ ಅಂತ್ಯಗೊಂಡಿವೆ. ಒಮ್ಮೆ ನೃತ್ಯ ನಿರ್ದೇಶಕ ರಾಬರ್ಟ್ ಮಾಸ್ಟರ್ ಜೊತೆ ಪ್ರೀತಿಯಲ್ಲಿದ್ದರು. ಆದರೆ, ಈ ಸಂಬಂಧ ಹೆಚ್ಚು ಕಾಲ ಉಳಿಯಲಿಲ್ಲ. ಇಬ್ಬರೂ ತಮ್ಮ ಸಂಬಂಧವನ್ನು ಜಗಳದಲ್ಲಿಯೇ ಅಂತ್ಯಗೊಳಿಸುತ್ತಾರೆ. ಬಳಿಕ ಪೀಟರ್ ಪಾಲ್ ಜೊತೆ ವಿವಾಹವಾದರೂ, ಅದು ಕೂಡ ಬೇಗನೇ ಕೊನೆ ಆಯ್ತು.
ಸಿನಿಮಾಗಳಿಂದ ಕಿರುತೆರೆಗೆ ಎಂಟ್ರಿ ಕೊಟ್ಟ ನಟಿ ಜನಪ್ರಿಯ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟಿದ್ದರು. ಅಲ್ಲೂ ವಿವಾದಗಳನ್ನೇ ಸೃಷ್ಟಿಸಿ ಹೆಸರು ಗಳಿಸಿದ್ರು. ಬಿಗ್ ಬಾಸ್‌ನಿಂದ ಹೊರ ಬರುತ್ತಿದ್ದಂತೆ ವನಿತಾ ವಿಜಯ್‌ಕುಮಾರ್ ಯೂಟ್ಯೂಬ್ ಚಾನೆಲ್‌ಗಳಲ್ಲಿ ನಿರೂಪಕಿ ಕಾಣಿಸಿಕೊಂಡರು. ವನಿತಾ ನಿರೂಪಕಿಯಾಗಿ ಯಶಸ್ಸು ಗಳಿಸಿದ್ದಾರೆ. ಈಕೆ ಸ್ಟಾರ್‌ ನಟ, ನಟಿಯನ್ನು ಬೇರೆ ಬೇರೆ ಚಾನೆಲ್‌ಗಳಲ್ಲಿ ಸಂದರ್ಶನ ಮಾಡಿದ್ದಾರೆ. ಇಷ್ಟೆ ಅಲ್ಲದೆ ನಟನೆಯಲ್ಲಿಯೂ ವನಿತಾ ವಿಜಯ್‌ಕುಮಾರ್ ಸಕ್ರಿಯರಾಗಿದ್ದಾರೆ. ಇದೀಗ ನೃತ್ಯ ನಿರ್ದೇಶಕ, ನಟ ಹಾಗೂ ನಿರ್ದೇಶಕ ಪ್ರಭುದೇವ ಬಗ್ಗೆ ವನಿತಾ ವಿಜಯ್‌ಕುಮಾರ್ ಇಂಟ್ರೆಸ್ಟಿಂಗ್ ವಿಷಯಗಳನ್ನು ಹೊರ ಹಾಕಿದ್ದಾರೆ.
“ನಾನು ಪ್ರಭುದೇವ ಅವರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದೆ. ಅವರ ಪ್ರತಿಯೊಂದು ಸಿನಿಮಾ ಬಂದಾಗಲೂ ಎಲ್ಲಾ ಸುದ್ದಿಗಳನ್ನು ಹಾಗೂ ಫೋಟೊಗಳನ್ನು ಸಂಗ್ರಹಿಸಿ ಇಡುತ್ತಿದ್ದೆ. ಅದು ನನ್ನ ಕೋಣೆಯಲ್ಲಿ ರಾರಾಜಿಸುತ್ತಿತ್ತು. ನನ್ನ ಕನಸಿನಲ್ಲಿ ನಾನು ಪ್ರಭುದೇವ ಜೊತೆ ನಗ್ಮಾ ಆಗಿ ಹೆಜ್ಜೆ ಹಾಕುತ್ತಿದ್ದೆ. ನಾನು ಪ್ರಭುದೇವರನ್ನು ಇಷ್ಟು ಪಡುತ್ತಿದ್ದದ್ದನ್ನು ನೋಡಿ ನನ್ನ ತಂದೆ ಅವರನ್ನೇ ಮನೆಗೆ ಕರೆದುಕೊಂಡು ಬಂದಿದ್ದರು.” ಎಂದು ವನಿತಾ ವಿಜಯ್‌ಕುಮಾರ್ ಹೇಳಿದ್ದಾರೆ. “ಪ್ರಭುದೇವ ಬರುತ್ತಾರೆಂದು ತಿಳಿದು ಹಿರಿ ಹಿರಿ ಹಿಗ್ಗಿದ್ದೆ. ಅವರಿಗಾಗಿ ಮಾಂಸಾಹಾರದ ಅಡುಗೆಯನ್ನು ತಯಾರಿಸಿದ್ದೆ. ಆದರೆ, ಅವರು ಮಾಂಸಾಹಾರ ಸೇವಿಸುವುದಿಲ್ಲ ಎಂದರು. ಆ ವಿಷಯವನ್ನು ಕೇಳಿ ನನಗೆ ಶಾಕ್ ಆಗಿತ್ತು. ಅದನ್ನು ತೋರಿಸಿಕೊಳ್ಳದೆ ಅವರಿಗೆ ಮೊಟ್ಟೆಯನ್ನು ಬೇಯಿಸಿ ಬಡಿಸಿದೆ. ಅಲ್ಲದೆ ಕೆಲವು ದಿನಗಳವರೆಗೆ ನಾನು ಕೂಡ ಮಾಂಸಾಹಾರವನ್ನು ಸೇವಿಸುತ್ತಿರಲಿಲ್ಲ” ಎಂದು ಹೇಳಿವ ಮೂಲಕ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

12 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

17 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

17 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

17 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

17 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

17 hours ago