Latest

ಪ್ರಭುದೇವನನ್ನು ಹುಚ್ಚಿಯಂತೆ ಪ್ರೀತಿಸುತ್ತಿದೆ, ಕನಸಿನಲ್ಲಿ ನಾನು ಪ್ರಭುದೇವ ಜೊತೆ ನಗ್ಮಾ ಆಗಿ ಹೆಜ್ಜೆ ಹಾಕುತ್ತಿದ್ದೆ- ನಟಿ ವನಿತಾ ವಿಜಯಕುಮಾರ್

ತಮಿಳು ಚಿತ್ರರಂಗಕ್ಕಂತೂ ವನಿತಾ ವಿಜಯ್‌ಕುಮಾರ್ ತುಂಬಾನೇ ಚಿರಪರಿಚಿತ. ವನಿತಾ ವಿಜಯಕುಮಾರ್ ತಮಿಳಿನ ಜನಪ್ರಿಯ ಹಿರಿಯ ನಟ ವಿಜಯಕುಮಾರ್ ಅವರ ಪುತ್ರಿ. ಈಕೆ ಕೂಡ ತಂದೆಯ ಹಾದಿಯಲ್ಲೇ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ವನಿತಾ ವಿಜಜ್‌ಕುಮಾರ್ ಹಲವು ಸಿನಿಮಾಗಳಿಗೆ ನಾಯಕಿಯಾಗಿಯೂ ಕಾಣಿಸಿಕೊಂಡಿದ್ದರು.
ಒಂದಿಷ್ಟು ಸಿನಿಮಾಗಳಲ್ಲಿ ನಟಿಸಿದ ಬಳಿಕ ಅವರು ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಸಿನಿಮಾ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರೂ, ನಟನೆಗಿಂತ ಹೆಚ್ಚು ವಿವಾದಗಳಿಂದ ಸುದ್ದಿಯಲ್ಲಿದ್ದಾರೆ. ವನಿತಾ ವಿಜಯಕುಮಾರ್ ತನ್ನ ಕುಟುಂಬದೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿಲ್ಲ. ತನ್ನ ಮಗಳ ವೈಯಕ್ತಿಕ ಬದುಕಿನ ನಿರ್ಧಾರಗಳಿಂದ ತಂದೆ ವಿಜಯಕುಮಾರ್ ಮತ್ತು ಆಕೆಯ ಸಹೋದರ ಅರುಣ್ ವಿಜಯ್ ಈ ನಟನಿಂದ ದೂರವೇ ಉಳಿಸಿದ್ದಾರೆ. ಈಕೆ ಕೂಡ ತನ್ನ ಕುಟುಂಬದಿಂದ ದೂರವೇ ಇದ್ದಾರೆ ಎಂದು ಹೇಳಲಾಗುತ್ತಿದೆ. ಎಷ್ಟೋ ಬಾರಿ ತಂದೆಯ ವಿರುದ್ಧವೇ ಮಾತಾಡಿದ್ದಾರೆ. ಅಲ್ಲದೆ, ಈಕೆಯ ದಾಂಪತ್ಯ ಜೀವನ ಕೂಡ ಅಸ್ತವ್ಯಸ್ತವಾಗಿದೆ.
ವನಿತಾ ವಿಜಯಕುಮಾರ್ ಎರಡು ಬಾರಿ ವಿವಾಹವಾಗಿದ್ದರು. ಆದರೆ, ಈಕೆಯ ಎರಡೂ ಮದುವೆಗಳು ತುಂಬಾ ಕೆಟ್ಟದಾಗಿ ಅಂತ್ಯಗೊಂಡಿವೆ. ಒಮ್ಮೆ ನೃತ್ಯ ನಿರ್ದೇಶಕ ರಾಬರ್ಟ್ ಮಾಸ್ಟರ್ ಜೊತೆ ಪ್ರೀತಿಯಲ್ಲಿದ್ದರು. ಆದರೆ, ಈ ಸಂಬಂಧ ಹೆಚ್ಚು ಕಾಲ ಉಳಿಯಲಿಲ್ಲ. ಇಬ್ಬರೂ ತಮ್ಮ ಸಂಬಂಧವನ್ನು ಜಗಳದಲ್ಲಿಯೇ ಅಂತ್ಯಗೊಳಿಸುತ್ತಾರೆ. ಬಳಿಕ ಪೀಟರ್ ಪಾಲ್ ಜೊತೆ ವಿವಾಹವಾದರೂ, ಅದು ಕೂಡ ಬೇಗನೇ ಕೊನೆ ಆಯ್ತು.
ಸಿನಿಮಾಗಳಿಂದ ಕಿರುತೆರೆಗೆ ಎಂಟ್ರಿ ಕೊಟ್ಟ ನಟಿ ಜನಪ್ರಿಯ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟಿದ್ದರು. ಅಲ್ಲೂ ವಿವಾದಗಳನ್ನೇ ಸೃಷ್ಟಿಸಿ ಹೆಸರು ಗಳಿಸಿದ್ರು. ಬಿಗ್ ಬಾಸ್‌ನಿಂದ ಹೊರ ಬರುತ್ತಿದ್ದಂತೆ ವನಿತಾ ವಿಜಯ್‌ಕುಮಾರ್ ಯೂಟ್ಯೂಬ್ ಚಾನೆಲ್‌ಗಳಲ್ಲಿ ನಿರೂಪಕಿ ಕಾಣಿಸಿಕೊಂಡರು. ವನಿತಾ ನಿರೂಪಕಿಯಾಗಿ ಯಶಸ್ಸು ಗಳಿಸಿದ್ದಾರೆ. ಈಕೆ ಸ್ಟಾರ್‌ ನಟ, ನಟಿಯನ್ನು ಬೇರೆ ಬೇರೆ ಚಾನೆಲ್‌ಗಳಲ್ಲಿ ಸಂದರ್ಶನ ಮಾಡಿದ್ದಾರೆ. ಇಷ್ಟೆ ಅಲ್ಲದೆ ನಟನೆಯಲ್ಲಿಯೂ ವನಿತಾ ವಿಜಯ್‌ಕುಮಾರ್ ಸಕ್ರಿಯರಾಗಿದ್ದಾರೆ. ಇದೀಗ ನೃತ್ಯ ನಿರ್ದೇಶಕ, ನಟ ಹಾಗೂ ನಿರ್ದೇಶಕ ಪ್ರಭುದೇವ ಬಗ್ಗೆ ವನಿತಾ ವಿಜಯ್‌ಕುಮಾರ್ ಇಂಟ್ರೆಸ್ಟಿಂಗ್ ವಿಷಯಗಳನ್ನು ಹೊರ ಹಾಕಿದ್ದಾರೆ.
“ನಾನು ಪ್ರಭುದೇವ ಅವರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದೆ. ಅವರ ಪ್ರತಿಯೊಂದು ಸಿನಿಮಾ ಬಂದಾಗಲೂ ಎಲ್ಲಾ ಸುದ್ದಿಗಳನ್ನು ಹಾಗೂ ಫೋಟೊಗಳನ್ನು ಸಂಗ್ರಹಿಸಿ ಇಡುತ್ತಿದ್ದೆ. ಅದು ನನ್ನ ಕೋಣೆಯಲ್ಲಿ ರಾರಾಜಿಸುತ್ತಿತ್ತು. ನನ್ನ ಕನಸಿನಲ್ಲಿ ನಾನು ಪ್ರಭುದೇವ ಜೊತೆ ನಗ್ಮಾ ಆಗಿ ಹೆಜ್ಜೆ ಹಾಕುತ್ತಿದ್ದೆ. ನಾನು ಪ್ರಭುದೇವರನ್ನು ಇಷ್ಟು ಪಡುತ್ತಿದ್ದದ್ದನ್ನು ನೋಡಿ ನನ್ನ ತಂದೆ ಅವರನ್ನೇ ಮನೆಗೆ ಕರೆದುಕೊಂಡು ಬಂದಿದ್ದರು.” ಎಂದು ವನಿತಾ ವಿಜಯ್‌ಕುಮಾರ್ ಹೇಳಿದ್ದಾರೆ. “ಪ್ರಭುದೇವ ಬರುತ್ತಾರೆಂದು ತಿಳಿದು ಹಿರಿ ಹಿರಿ ಹಿಗ್ಗಿದ್ದೆ. ಅವರಿಗಾಗಿ ಮಾಂಸಾಹಾರದ ಅಡುಗೆಯನ್ನು ತಯಾರಿಸಿದ್ದೆ. ಆದರೆ, ಅವರು ಮಾಂಸಾಹಾರ ಸೇವಿಸುವುದಿಲ್ಲ ಎಂದರು. ಆ ವಿಷಯವನ್ನು ಕೇಳಿ ನನಗೆ ಶಾಕ್ ಆಗಿತ್ತು. ಅದನ್ನು ತೋರಿಸಿಕೊಳ್ಳದೆ ಅವರಿಗೆ ಮೊಟ್ಟೆಯನ್ನು ಬೇಯಿಸಿ ಬಡಿಸಿದೆ. ಅಲ್ಲದೆ ಕೆಲವು ದಿನಗಳವರೆಗೆ ನಾನು ಕೂಡ ಮಾಂಸಾಹಾರವನ್ನು ಸೇವಿಸುತ್ತಿರಲಿಲ್ಲ” ಎಂದು ಹೇಳಿವ ಮೂಲಕ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲಿಂಗಸಗೂರು ತಾಲೂಕಿನಲ್ಲಿ ಕಳ್ಳಭಟ್ಟಿ ದಂಧೆ ವಿರುದ್ಧ ಅಬಕಾರಿ ದಾಳಿ: 4 ಲೀಟರ್ ಸರಾಯಿ ವಶ, ಮೂವರು ಬಂಧನ

ಲಿಂಗಸಗೂರು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಳ್ಳಭಟ್ಟಿ ಸರಾಯಿ ದಂಧೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿದ್ದು,…

28 minutes ago

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

1 day ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

1 day ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

1 day ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

1 day ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

1 day ago