Latest

ನಕಲಿ ನೋಟುಗಳ ಮಾಯಜಾಲ: 6 ಲಕ್ಷ ಲೂಟಿ ನಡೆಸಿ ಮೋಸಗಾರ ನಾಪತ್ತೆ!

ಬೆಂಗಳೂರು: 6 ಲಕ್ಷ ರೂ. ಮೌಲ್ಯದ ನಕಲಿ ನೋಟುಗಳ ಮೂಲಕ ವ್ಯಕ್ತಿಯೊಬ್ಬನನ್ನು ವಂಚಿಸಿದ ಘಟನೆ ರಾಜಧಾನಿಯ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಆಂಧ್ರ ಪ್ರದೇಶದ ಕಡಪ ಮೂಲದ ಸೈಯದ್ ಸಮೀರ್ ಎಂಬುವವರು, ಕುವೈತ್‌ನಲ್ಲಿ 14 ವರ್ಷಗಳಿಂದ ಕಾರು ಚಾಲಕನಾಗಿ ಕೆಲಸ ಮಾಡಿದ್ದರು. ತಮ್ಮ ಕುಟುಂಬ ಬೆಂಗಳೂರು ನಗರದಲ್ಲಿರುವ ಕಾರಣ ಅವರು ಇಲ್ಲಿ ಬಂದಿದ್ದರು. ಈ ಸಂದರ್ಭ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೈಯದ್ ಖುರ್ಶಿ ಎಂಬ ವ್ಯಕ್ತಿಯೊಂದಿಗೆ ಪರಿಚಯವಾಯಿತು. ಇಬ್ಬರು ತಮ್ಮ ಸಂಪರ್ಕ ಸಂಖ್ಯೆಗಳನ್ನೂ ಹಂಚಿಕೊಂಡಿದ್ದರು.

ಅನಂತರ, ಸಮೀರ್ ಬೆಂಗಳೂರಿನಲ್ಲೇ ಕಾರು ಖರೀದಿಸಿ ಬಾಡಿಗೆ ಓಡಿಸಲು ಉತ್ಸುಕರಾಗಿದ್ದರು. ಈ ಬಗ್ಗೆ ಖುರ್ಶಿಯೊಂದಿಗೆ ಚರ್ಚಿಸಿದ ಅವರು, ಕಡಿಮೆ ಬೆಲೆಯಲ್ಲಿ ಕಾರು ದೊರಕಿಸಿಕೊಡುವ ಭರವಸೆ ಪಡೆದಿದ್ದರು. ಹೀಗಾಗಿ, ಜ. 19ರಂದು ಖುರ್ಶಿಯನ್ನು ಭೇಟಿಯಾದ ಸಮೀರ್,  ಮಾತುಗಳನ್ನು ನಂಬಿ ಬ್ಯಾಂಕ್ ಖಾತೆಯ ಮೂಲಕ ರೂ. 5.40 ಲಕ್ಷ ಹಣ ವರ್ಗಾಯಿಸಿದರು.

ಆದರೆ, ಖುರ್ಶಿ ತಕ್ಷಣ ಕಾರು ನೀಡಲು ಸಾಧ್ಯವಿಲ್ಲವೆಂದು ಹೇಳಿ, “ನಿಮ್ಮ ಹಣ ಸುರಕ್ಷಿತವಾಗಿರಲು ನಾನು ರೂ. 6 ಲಕ್ಷ ನಗದು ನೋಟುಗಳನ್ನು ಬಂಡಲ್ ರೂಪದಲ್ಲಿ ನೀಡುತ್ತೇನೆ. ಕಾರು ತರುವವರೆಗೆ ಇದನ್ನು ನಿಮ್ಮ ಬಳಿಯೇ ಇಟ್ಟುಕೊಳ್ಳಿ” ಎಂದನು. ಈ ಸಂದರ್ಭ ಬಂಡಲ್ ಮೇಲೆ ಸೈಯದ್ ಸಮೀರ್ ನಂಬಿ ಬಿಟ್ಟರು.

ಆದರೆ, ಹೂಡಿಕೆ ಬಳಿಕ ಬಂಡಲ್ ಪರಿಶೀಲಿಸಿದಾಗ ನೋಟುಗಳಲ್ಲಿ ಮೇಲ್ಭಾಗದಲ್ಲಿ ಅಸಲಿ 500 ರೂಪಾಯಿ ನೋಟುಗಳಿದ್ದು, ಉಳಿದವು ನಕಲಿ ಎಂಬುದು ತಿಳಿಯಿತು. ಯತ್ನಿಸಿದರೂ ಖುರ್ಶಿಯನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ.

ಈ ಕುರಿತು ಸಮೀರ್ ಕೂಡಲೇ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಕಲಿ ನೋಟುಗಳ ತಪಾಸಣೆ ನಡೆಸಿದ ಪೊಲೀಸರು ಪ್ರಕರಣದ ತೀವ್ರತೆ ಅರಿದು, ಆರೋಪಿ ಖುರ್ಶಿಯನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

8 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

8 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

8 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

8 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

8 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

8 hours ago