Latest

ಮಹದೇವಪುರದ ‘80 ಹೆಸರುಗಳ ಮನೆ’ ವಿವಾದ: ತಾಂತ್ರಿಕ ದೋಷವೇ ಅಥವಾ ರಾಜಕೀಯ ಅಕ್ರಮವೇ?

ಬೆಂಗಳೂರು ರಾಜಕೀಯ ವಲಯದಲ್ಲಿ ಮಹದೇವಪುರ ಕ್ಷೇತ್ರದ ಬೆಳ್ಳಂದೂರು ಪ್ರದೇಶದ ಒಂದು ಸಣ್ಣ ಮನೆಯಲ್ಲಿ 80 ಮಂದಿ ಹೆಸರು ಮತದಾರರ ಪಟ್ಟಿಯಲ್ಲಿ ಇದೆ ಎಂಬ ಆರೋಪ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಆರೋಪವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೊರ ಹಾಕಿದ್ದು, ದೇಶದ ರಾಜಕೀಯದಲ್ಲಿ ಹೊಸ ಬಿರುಗಾಳಿ ಎಬ್ಬಿಸಿದೆ. ಆದರೆ, ಇದರ ಹಿಂದಿರುವ ಸತ್ಯ ಏನು?

ಬೆಳ್ಳಂದೂರಿನ ಟೆಕ್ ಕಾರಿಡಾರ್‌ನಿಂದ ಸ್ವಲ್ಪ ಒಳಗೆ ಹೋಗಿದರೆ ಮುನಿರೆಡ್ಡಿ ಗಾರ್ಡನ್ ಎಂಬ ಸಣ್ಣ ವಸತಿ ಪ್ರದೇಶ ಸಿಗುತ್ತದೆ. ಇಲ್ಲಿ ಸಾಲಾಗಿ ನಿರ್ಮಿಸಿರುವ, ತಗಡಿನ ಶೀಟ್ ಹೊದಿಸಿದ 10×15 ಅಳತೆಯ ಪುಟ್ಟ ಮನೆಗಳಲ್ಲಿ ಹೊರರಾಜ್ಯಗಳಿಂದ ಬಂದ ಕೂಲಿ ಕಾರ್ಮಿಕರು ವಾಸಿಸುತ್ತಿದ್ದಾರೆ. ಈ ಸಾಲಿನಲ್ಲಿರುವ 35ನೇ ಸಂಖ್ಯೆಯ ಮನೆ ಈಗ ರಾಷ್ಟ್ರದ ಮಟ್ಟದಲ್ಲಿ ಸುದ್ದಿಯ ಕೇಂದ್ರವಾಗಿದೆ.

ಮನೆಯ ಮುಂದೆ ಮಾಧ್ಯಮದ ಹಾವಳಿ, ನೆರೆಮನೆಯವರ ಅನುಮಾನಭರಿತ ಮುಖಗಳು ಮತ್ತು ಮಧ್ಯದಲ್ಲಿ ಗಾಬರಿಯಿಂದ ನಿಂತಿದ್ದ ಪಶ್ಚಿಮ ಬಂಗಾಳ ಮೂಲದ ದೀಪಕ್ ಅವರ ಕುಟುಂಬ ಕಣ್ಣಿಗೆ ಬಿತ್ತು.

“ನಮ್ಮ ಜೀವನ ನರಕವಾಗಿದೆ” – ದೀಪಕ್

ಮಾತ್ರ ಒಂದು ತಿಂಗಳ ಹಿಂದೆ ಬಾಡಿಗೆಗೆ ಬಂದ ದೀಪಕ್, ಸ್ವಿಗ್ಗಿ ಡೆಲಿವರಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಂಪ್ಯೂಟರ್ ರಿಪೇರಿ ಅಂಗಡಿ ನಷ್ಟವಾದ ಬಳಿಕ ಬದುಕಿಗಾಗಿ ಬೆಂಗಳೂರಿಗೆ ಬಂದಿದ್ದ ಅವರು, ತಮ್ಮ ಮನೆ ಇಂತಹ ವಿವಾದದಲ್ಲಿ ಸಿಲುಕುತ್ತದೆ ಎಂದು ಕನಸೂ ಕಾಣಿರಲಿಲ್ಲ.

ಎರಡು ದಿನಗಳಿಂದ ನಮ್ಮ ಮೇಲೆ ಅಪರಾಧಿಗಳಂತೆ ವರ್ತಿಸುತ್ತಿದ್ದಾರೆ. ‘ನಿಮ್ಮ ಮನೆಯಲ್ಲಿ 80 ಜನರ ಹೆಸರುಗಳಿವೆ’ ಎಂದು ಪ್ರಶ್ನಿಸುತ್ತಾರೆ. ನನ್ನ ಮಗನನ್ನು ಆಟಕ್ಕೂ ಸೇರಿಸಿಕೊಳ್ಳುತ್ತಿಲ್ಲ. ಮನೆ ಮಾಲೀಕರು ಖಾಲಿ ಮಾಡಿಸಿದರೆ ನಾವು ಎಲ್ಲಿ ಹೋಗುವುದು? ನನ್ನ ಮತದಾರರ ಗುರುತಿನ ಚೀಟಿ ಪಶ್ಚಿಮ ಬಂಗಾಳದಲ್ಲಿದೆ, ಇಲ್ಲಿ ಅಲ್ಲ,” ಎಂದು ದೀಪಕ್ ಆತಂಕದಿಂದ ಹೇಳಿದ್ದಾರೆ.

“ಇದು ಶುದ್ಧ ಸುಳ್ಳು” – ಮನೆ ಮಾಲೀಕ ಜಯರಾಮ್ ರೆಡ್ಡಿ

ಈ 35 ಮನೆಗಳ ಮಾಲೀಕರಾದ ಜಯರಾಮ್ ರೆಡ್ಡಿ ಆರೋಪವನ್ನು ತಿರಸ್ಕರಿಸಿದ್ದಾರೆ.

ಇಲ್ಲಿರುವ ಮನೆಗಳು ಚಿಕ್ಕದಾಗಿದ್ದು, ಬಡ ಕೂಲಿ ಕಾರ್ಮಿಕರು ವಾಸಿಸುವರು. 80 ಮಂದಿ ಒಂದೇ ಮನೆಯಲ್ಲಿ ವಾಸಿಸುವುದು ಅಸಾಧ್ಯ. ಬಾಡಿಗೆದಾರರು ಕೆಲ ತಿಂಗಳು ಇದ್ದು ಬೇರೆ ಕಡೆ ಹೋಗುತ್ತಾರೆ, ಆದರೆ ತಮ್ಮ ಮತದಾರರ ಪಟ್ಟಿಯಲ್ಲಿ ವಿಳಾಸ ಬದಲಾಯಿಸುವುದಿಲ್ಲ. ಹೀಗಾಗಿ ಹಳೆಯ ಹೆಸರುಗಳು ಉಳಿದಿರಬಹುದು. ಯಾವುದೇ ತನಿಖೆಗೂ ನಾನು ಸಿದ್ಧ,” ಎಂದು ಅವರು ಹೇಳಿದ್ದಾರೆ.

ತಮ್ಮನ್ನು ‘ಬಿಜೆಪಿ ಸಂಘಟಕ’ ಎಂದು ವರದಿಯಾದ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದು, “ನಾನು ಬಿಜೆಪಿ ಮತದಾರ, ಆದರೆ ಪಕ್ಷದ ಪರ ಪ್ರಚಾರ ಮಾಡಿಲ್ಲ,” ಎಂದಿದ್ದಾರೆ.

ಚುನಾವಣಾಧಿಕಾರಿಗಳ ವಾದ: ತಾಂತ್ರಿಕ ದೋಷ

ಮುಖ್ಯ ಚುನಾವಣಾಧಿಕಾರಿ ಕಚೇರಿ ಮೂಲಗಳು, ಈ ವಿವಾದದ ಮೂಲ ತಾಂತ್ರಿಕ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

“ನಾವು 80 ಹೆಸರುಗಳಿವೆ ಎಂದು ಹೇಳಿದ್ದೇವೆ, ಆದರೆ ಅವರು ಎಲ್ಲರೂ ಅಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿಲ್ಲ. ಅನೇಕರು ಮನೆ ಬಿಟ್ಟು ಹೋಗಿದ್ದರೂ ವಿಳಾಸ ಬದಲಾಯಿಸದ ಕಾರಣ ಹೆಸರುಗಳು ಉಳಿದಿವೆ. ಶೀಘ್ರದಲ್ಲೇ ಪಟ್ಟಿಯಿಂದ ಇಂತಹ ಹೆಸರುಗಳನ್ನು ತೆಗೆದುಹಾಕಲಾಗುತ್ತದೆ,” ಎಂದು ಮೂಲಗಳು ತಿಳಿಸಿದ್ದಾರೆ.

ಕಾಂಗ್ರೆಸ್ ಆರೋಪ, ಬಿಜೆಪಿ ವಿರುದ್ಧ ಕಿಡಿ

ಕಾಂಗ್ರೆಸ್ನ ಸ್ಥಳೀಯ ನಾಯಕ ಮೂರ್ತಿ, ಈ ಎಲ್ಲವನ್ನು ತಾಂತ್ರಿಕ ದೋಷವೆಂದು ತಳ್ಳಿಹಾಕಿದ್ದಾರೆ.

“ಮಹದೇವಪುರ ಕ್ಷೇತ್ರದಲ್ಲಿ ಒಂದೇ ಮನೆಯಲ್ಲಿ 80 ಹೆಸರುಗಳಿರುವುದು ನಿಜ. ಇಂತಹ ಪ್ರಕರಣಗಳು ಬೇರೆಡೆಗಳಲ್ಲೂ ಇದ್ದೇ ಇವೆ. ಇದು ಬಿಜೆಪಿ ನಡೆಸಿದ ವ್ಯವಸ್ಥಿತ ಅಕ್ರಮ. ಇವರಿಗೆ ಇಂತಹ ಕೆಲಸ ಮಾಮೂಲು,” ಎಂದು ಅವರು ಆರೋಪಿಸಿದ್ದಾರೆ.

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

12 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

13 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago