Latest

ಮಹದೇವಪುರದ ‘80 ಹೆಸರುಗಳ ಮನೆ’ ವಿವಾದ: ತಾಂತ್ರಿಕ ದೋಷವೇ ಅಥವಾ ರಾಜಕೀಯ ಅಕ್ರಮವೇ?

ಬೆಂಗಳೂರು ರಾಜಕೀಯ ವಲಯದಲ್ಲಿ ಮಹದೇವಪುರ ಕ್ಷೇತ್ರದ ಬೆಳ್ಳಂದೂರು ಪ್ರದೇಶದ ಒಂದು ಸಣ್ಣ ಮನೆಯಲ್ಲಿ 80 ಮಂದಿ ಹೆಸರು ಮತದಾರರ ಪಟ್ಟಿಯಲ್ಲಿ ಇದೆ ಎಂಬ ಆರೋಪ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಆರೋಪವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೊರ ಹಾಕಿದ್ದು, ದೇಶದ ರಾಜಕೀಯದಲ್ಲಿ ಹೊಸ ಬಿರುಗಾಳಿ ಎಬ್ಬಿಸಿದೆ. ಆದರೆ, ಇದರ ಹಿಂದಿರುವ ಸತ್ಯ ಏನು?

ಬೆಳ್ಳಂದೂರಿನ ಟೆಕ್ ಕಾರಿಡಾರ್‌ನಿಂದ ಸ್ವಲ್ಪ ಒಳಗೆ ಹೋಗಿದರೆ ಮುನಿರೆಡ್ಡಿ ಗಾರ್ಡನ್ ಎಂಬ ಸಣ್ಣ ವಸತಿ ಪ್ರದೇಶ ಸಿಗುತ್ತದೆ. ಇಲ್ಲಿ ಸಾಲಾಗಿ ನಿರ್ಮಿಸಿರುವ, ತಗಡಿನ ಶೀಟ್ ಹೊದಿಸಿದ 10×15 ಅಳತೆಯ ಪುಟ್ಟ ಮನೆಗಳಲ್ಲಿ ಹೊರರಾಜ್ಯಗಳಿಂದ ಬಂದ ಕೂಲಿ ಕಾರ್ಮಿಕರು ವಾಸಿಸುತ್ತಿದ್ದಾರೆ. ಈ ಸಾಲಿನಲ್ಲಿರುವ 35ನೇ ಸಂಖ್ಯೆಯ ಮನೆ ಈಗ ರಾಷ್ಟ್ರದ ಮಟ್ಟದಲ್ಲಿ ಸುದ್ದಿಯ ಕೇಂದ್ರವಾಗಿದೆ.

ಮನೆಯ ಮುಂದೆ ಮಾಧ್ಯಮದ ಹಾವಳಿ, ನೆರೆಮನೆಯವರ ಅನುಮಾನಭರಿತ ಮುಖಗಳು ಮತ್ತು ಮಧ್ಯದಲ್ಲಿ ಗಾಬರಿಯಿಂದ ನಿಂತಿದ್ದ ಪಶ್ಚಿಮ ಬಂಗಾಳ ಮೂಲದ ದೀಪಕ್ ಅವರ ಕುಟುಂಬ ಕಣ್ಣಿಗೆ ಬಿತ್ತು.

“ನಮ್ಮ ಜೀವನ ನರಕವಾಗಿದೆ” – ದೀಪಕ್

ಮಾತ್ರ ಒಂದು ತಿಂಗಳ ಹಿಂದೆ ಬಾಡಿಗೆಗೆ ಬಂದ ದೀಪಕ್, ಸ್ವಿಗ್ಗಿ ಡೆಲಿವರಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಂಪ್ಯೂಟರ್ ರಿಪೇರಿ ಅಂಗಡಿ ನಷ್ಟವಾದ ಬಳಿಕ ಬದುಕಿಗಾಗಿ ಬೆಂಗಳೂರಿಗೆ ಬಂದಿದ್ದ ಅವರು, ತಮ್ಮ ಮನೆ ಇಂತಹ ವಿವಾದದಲ್ಲಿ ಸಿಲುಕುತ್ತದೆ ಎಂದು ಕನಸೂ ಕಾಣಿರಲಿಲ್ಲ.

ಎರಡು ದಿನಗಳಿಂದ ನಮ್ಮ ಮೇಲೆ ಅಪರಾಧಿಗಳಂತೆ ವರ್ತಿಸುತ್ತಿದ್ದಾರೆ. ‘ನಿಮ್ಮ ಮನೆಯಲ್ಲಿ 80 ಜನರ ಹೆಸರುಗಳಿವೆ’ ಎಂದು ಪ್ರಶ್ನಿಸುತ್ತಾರೆ. ನನ್ನ ಮಗನನ್ನು ಆಟಕ್ಕೂ ಸೇರಿಸಿಕೊಳ್ಳುತ್ತಿಲ್ಲ. ಮನೆ ಮಾಲೀಕರು ಖಾಲಿ ಮಾಡಿಸಿದರೆ ನಾವು ಎಲ್ಲಿ ಹೋಗುವುದು? ನನ್ನ ಮತದಾರರ ಗುರುತಿನ ಚೀಟಿ ಪಶ್ಚಿಮ ಬಂಗಾಳದಲ್ಲಿದೆ, ಇಲ್ಲಿ ಅಲ್ಲ,” ಎಂದು ದೀಪಕ್ ಆತಂಕದಿಂದ ಹೇಳಿದ್ದಾರೆ.

“ಇದು ಶುದ್ಧ ಸುಳ್ಳು” – ಮನೆ ಮಾಲೀಕ ಜಯರಾಮ್ ರೆಡ್ಡಿ

ಈ 35 ಮನೆಗಳ ಮಾಲೀಕರಾದ ಜಯರಾಮ್ ರೆಡ್ಡಿ ಆರೋಪವನ್ನು ತಿರಸ್ಕರಿಸಿದ್ದಾರೆ.

ಇಲ್ಲಿರುವ ಮನೆಗಳು ಚಿಕ್ಕದಾಗಿದ್ದು, ಬಡ ಕೂಲಿ ಕಾರ್ಮಿಕರು ವಾಸಿಸುವರು. 80 ಮಂದಿ ಒಂದೇ ಮನೆಯಲ್ಲಿ ವಾಸಿಸುವುದು ಅಸಾಧ್ಯ. ಬಾಡಿಗೆದಾರರು ಕೆಲ ತಿಂಗಳು ಇದ್ದು ಬೇರೆ ಕಡೆ ಹೋಗುತ್ತಾರೆ, ಆದರೆ ತಮ್ಮ ಮತದಾರರ ಪಟ್ಟಿಯಲ್ಲಿ ವಿಳಾಸ ಬದಲಾಯಿಸುವುದಿಲ್ಲ. ಹೀಗಾಗಿ ಹಳೆಯ ಹೆಸರುಗಳು ಉಳಿದಿರಬಹುದು. ಯಾವುದೇ ತನಿಖೆಗೂ ನಾನು ಸಿದ್ಧ,” ಎಂದು ಅವರು ಹೇಳಿದ್ದಾರೆ.

ತಮ್ಮನ್ನು ‘ಬಿಜೆಪಿ ಸಂಘಟಕ’ ಎಂದು ವರದಿಯಾದ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದು, “ನಾನು ಬಿಜೆಪಿ ಮತದಾರ, ಆದರೆ ಪಕ್ಷದ ಪರ ಪ್ರಚಾರ ಮಾಡಿಲ್ಲ,” ಎಂದಿದ್ದಾರೆ.

ಚುನಾವಣಾಧಿಕಾರಿಗಳ ವಾದ: ತಾಂತ್ರಿಕ ದೋಷ

ಮುಖ್ಯ ಚುನಾವಣಾಧಿಕಾರಿ ಕಚೇರಿ ಮೂಲಗಳು, ಈ ವಿವಾದದ ಮೂಲ ತಾಂತ್ರಿಕ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

“ನಾವು 80 ಹೆಸರುಗಳಿವೆ ಎಂದು ಹೇಳಿದ್ದೇವೆ, ಆದರೆ ಅವರು ಎಲ್ಲರೂ ಅಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿಲ್ಲ. ಅನೇಕರು ಮನೆ ಬಿಟ್ಟು ಹೋಗಿದ್ದರೂ ವಿಳಾಸ ಬದಲಾಯಿಸದ ಕಾರಣ ಹೆಸರುಗಳು ಉಳಿದಿವೆ. ಶೀಘ್ರದಲ್ಲೇ ಪಟ್ಟಿಯಿಂದ ಇಂತಹ ಹೆಸರುಗಳನ್ನು ತೆಗೆದುಹಾಕಲಾಗುತ್ತದೆ,” ಎಂದು ಮೂಲಗಳು ತಿಳಿಸಿದ್ದಾರೆ.

ಕಾಂಗ್ರೆಸ್ ಆರೋಪ, ಬಿಜೆಪಿ ವಿರುದ್ಧ ಕಿಡಿ

ಕಾಂಗ್ರೆಸ್ನ ಸ್ಥಳೀಯ ನಾಯಕ ಮೂರ್ತಿ, ಈ ಎಲ್ಲವನ್ನು ತಾಂತ್ರಿಕ ದೋಷವೆಂದು ತಳ್ಳಿಹಾಕಿದ್ದಾರೆ.

“ಮಹದೇವಪುರ ಕ್ಷೇತ್ರದಲ್ಲಿ ಒಂದೇ ಮನೆಯಲ್ಲಿ 80 ಹೆಸರುಗಳಿರುವುದು ನಿಜ. ಇಂತಹ ಪ್ರಕರಣಗಳು ಬೇರೆಡೆಗಳಲ್ಲೂ ಇದ್ದೇ ಇವೆ. ಇದು ಬಿಜೆಪಿ ನಡೆಸಿದ ವ್ಯವಸ್ಥಿತ ಅಕ್ರಮ. ಇವರಿಗೆ ಇಂತಹ ಕೆಲಸ ಮಾಮೂಲು,” ಎಂದು ಅವರು ಆರೋಪಿಸಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

5 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

12 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

12 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago