ಧಾರವಾಡ: ಪಾಪಿ ಮೈದುನೊಬ್ಬ ಅತ್ತಿಗೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಯುತ್ನಸಿದ ಪರಿಣಾಮ ಮಹಿಳೆ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾದ ಘಟನೆ ಕುಂದಗೋಳ ತಾಲೂಕಿನ ಹೊಸಕಟ್ಟಿ ಗ್ರಾಮದಲ್ಲಿ ನಡೆದಿದೆ.
ಕುಂದಗೋಳ ತಾಲೂಕಿನ ಹೊಸಕಟ್ಟಿ ಗ್ರಾಮದ ನಿವಾಸಿ ರಮೇಶ್ ಮೇಗುಂಡಿ, ವಿವಾಹಿತನಾಗಿದ್ದರೂ ಭಾನುವಾರ ಮುಂಜಾನೆ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ತನ್ನ ಅತ್ತಿಗೆ ಸವಿತಾ ಬಸಪ್ಪಳ ಮನೆಗೆ ನುಗ್ಗಿ ನಿನ್ನು ಬಂಜೆಯಾಗಿದ್ದು, ನನ್ನ ಜೊತೆ ಸಹಕರಿಸು ಎಂದು ಕೋರಿದ್ದಾನೆ, ಅಸಭ್ಯವಾಗಿ ವರ್ತಿಸಿದ್ದಾನೆ. ಆದರೆ, ಸವಿತಾ ಇದನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕೋಪಗೊಂಡ ರಮೇಶ್, ಆಕೆಯನ್ನು ಬಲವಂತವಾಗಿ ಹಿಡಿದುಕೊಂಡು ಮುಖ, ಎದೆ ಹಾಗೂ ಗಲ್ಲದ ಭಾಗಗಳಲ್ಲಿ ಕಚ್ಚಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಈ ಘಟನೆ ನಂತರ, ಸವಿತಾ ಹೇಗೋ ತಪ್ಪಿಸಿಕೊಂಡು ಮನೆಯಿಂದ ಹೊರಬಂದು ನೆರವಿಗಾಗಿ ಅಳಲು ಕೂಗಿದ್ದಾಳೆ. ಅವಳ ದನಿಗೆ ಅಕ್ಕಪಕ್ಕದ ಜನರು ಓಡೋಡಿ ಬಂದು ತಕ್ಷಣವೇ ಗಾಯಗೊಂಡಿದ್ದ ಸವಿತಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಸ್ತುತ ಸವಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಕುಂದಗೋಳ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆಯ ಬಳಿಕ ಆರೋಪಿಯಾದ ರಮೇಶ್ ಪರಾರಿಯಾಗಿದ್ದಾನೆ. ಪೊಲೀಸರಿಂದ ಆರೋಪಿ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಸಿಪಿಐ ಶಿವಾನಂದ ಅಂಬಿಗೇರ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…