ಧಾರವಾಡ: ಪಾಪಿ ಮೈದುನೊಬ್ಬ ಅತ್ತಿಗೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಯುತ್ನಸಿದ ಪರಿಣಾಮ ಮಹಿಳೆ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾದ ಘಟನೆ ಕುಂದಗೋಳ ತಾಲೂಕಿನ ಹೊಸಕಟ್ಟಿ ಗ್ರಾಮದಲ್ಲಿ ನಡೆದಿದೆ.
ಕುಂದಗೋಳ ತಾಲೂಕಿನ ಹೊಸಕಟ್ಟಿ ಗ್ರಾಮದ ನಿವಾಸಿ ರಮೇಶ್ ಮೇಗುಂಡಿ, ವಿವಾಹಿತನಾಗಿದ್ದರೂ ಭಾನುವಾರ ಮುಂಜಾನೆ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ತನ್ನ ಅತ್ತಿಗೆ ಸವಿತಾ ಬಸಪ್ಪಳ ಮನೆಗೆ ನುಗ್ಗಿ ನಿನ್ನು ಬಂಜೆಯಾಗಿದ್ದು, ನನ್ನ ಜೊತೆ ಸಹಕರಿಸು ಎಂದು ಕೋರಿದ್ದಾನೆ, ಅಸಭ್ಯವಾಗಿ ವರ್ತಿಸಿದ್ದಾನೆ. ಆದರೆ, ಸವಿತಾ ಇದನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕೋಪಗೊಂಡ ರಮೇಶ್, ಆಕೆಯನ್ನು ಬಲವಂತವಾಗಿ ಹಿಡಿದುಕೊಂಡು ಮುಖ, ಎದೆ ಹಾಗೂ ಗಲ್ಲದ ಭಾಗಗಳಲ್ಲಿ ಕಚ್ಚಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಈ ಘಟನೆ ನಂತರ, ಸವಿತಾ ಹೇಗೋ ತಪ್ಪಿಸಿಕೊಂಡು ಮನೆಯಿಂದ ಹೊರಬಂದು ನೆರವಿಗಾಗಿ ಅಳಲು ಕೂಗಿದ್ದಾಳೆ. ಅವಳ ದನಿಗೆ ಅಕ್ಕಪಕ್ಕದ ಜನರು ಓಡೋಡಿ ಬಂದು ತಕ್ಷಣವೇ ಗಾಯಗೊಂಡಿದ್ದ ಸವಿತಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಸ್ತುತ ಸವಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಕುಂದಗೋಳ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆಯ ಬಳಿಕ ಆರೋಪಿಯಾದ ರಮೇಶ್ ಪರಾರಿಯಾಗಿದ್ದಾನೆ. ಪೊಲೀಸರಿಂದ ಆರೋಪಿ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಸಿಪಿಐ ಶಿವಾನಂದ ಅಂಬಿಗೇರ ತಿಳಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…