ಹರ್ಯಾಣದ ಪಾಣಿಪತ್ನಲ್ಲಿ ಮದುವೆಯಾದ ಕೇವಲ ಮೂರು ತಿಂಗಳಲ್ಲೇ ಪತಿಯ ಕುಟುಂಬಕ್ಕೆ ಆಘಾತ ಉಂಟುಮಾಡಿದ ಘಟನೆ ಬೆಳಕಿಗೆ ಬಂದಿದೆ. ಗರ್ಭಿಣಿಯಾಗಿದ್ದ ಮಹಿಳೆ ತವರು ಮನೆಗೆ ತೆರಳಿ ಪತಿಯ ಗಮನಕ್ಕೆ ತರದೇ ಗರ್ಭಪಾತ ಮಾಡಿಸಿಕೊಂಡು, ಬಳಿಕ ನೈಸರ್ಗಿಕವಾಗಿ ಗರ್ಭಪಾತವಾಗಿದೆ ಎಂದು ನಂಬಿಸಿದ್ದಾಳೆ. ಅದಾದ ಕೆಲವೇ ದಿನಗಳಲ್ಲಿ ಮನೆಯವರ ಚಹಾದಲ್ಲಿ ನಿದ್ದೆ ಮಾತ್ರೆ ಬೆರೆಸಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಪರಾರಿಯಾಗಿರುವ ಆರೋಪ ಕೇಳಿಬಂದಿದೆ.
ಮಾಹಿತಿಯ ಪ್ರಕಾರ, ಪಾಣಿಪತ್ ನಿವಾಸಿ ಕೃಷ್ಣ ಎಂಬುವರೊಂದಿಗೆ ‘ನಿವೃತ್ತಿ’ ಎಂಬ ಯುವತಿಯ ವಿವಾಹ ಮೂರು ತಿಂಗಳ ಹಿಂದೆ ನಡೆದಿತ್ತು. ಮದುವೆಯಾದ ಕೆಲವೇ ದಿನಗಳಲ್ಲಿ ಆಕೆ ಗರ್ಭಿಣಿಯಾಗಿದ್ದಳು. ಎರಡು ತಿಂಗಳ ಬಳಿಕ ತವರು ಮನೆಗೆ ತೆರಳಿದ ಆಕೆ, ಪತಿ ಅಥವಾ ಅತ್ತೆ ಮನೆಯವರ ಅನುಮತಿ ಅಥವಾ ಮಾಹಿತಿಯಿಲ್ಲದೆ ಗರ್ಭಪಾತ ಮಾಡಿಸಿಕೊಂಡು ವಾಪಸ್ಸಾಗಿದ್ದಳು. ಮನೆಗೆ ಮರಳಿದ ಬಳಿಕ ತನಗೆ ಸ್ವಾಭಾವಿಕವಾಗಿ ಗರ್ಭಪಾತವಾಗಿದೆ ಎಂದು ಹೇಳಿ ಕುಟುಂಬಸ್ಥರನ್ನು ನಂಬಿಸಿದ್ದಾಳೆ ಎನ್ನಲಾಗಿದೆ.
ಈ ಘಟನೆಯ ಕೆಲ ದಿನಗಳ ನಂತರ, ರಾತ್ರಿ ವೇಳೆ ಮನೆಯ ಎಲ್ಲರಿಗೂ ಚಹಾ ತಯಾರಿಸಿ ಅದರಲ್ಲಿ ನಿದ್ದೆ ಮಾತ್ರೆ ಬೆರೆಸಿದ್ದಾಳೆ ಎಂದು ಆರೋಪಿಸಲಾಗಿದೆ. ಚಹಾ ಸೇವಿಸಿದ ಬಳಿಕ ಕುಟುಂಬದ ಸದಸ್ಯರೆಲ್ಲರೂ ಗಾಢ ನಿದ್ರೆಗೆ ಜಾರಿದಾಗ, ಮನೆಯಲ್ಲಿದ್ದ ನಗದು, ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ಬ್ಯಾಗ್ಗೆ ತುಂಬಿಕೊಂಡು ರಾತ್ರೋರಾತ್ರಿ ಪರಾರಿಯಾಗಿದ್ದಾಳೆ.
ಮರುದಿನ ಬೆಳಿಗ್ಗೆ ಕುಟುಂಬಸ್ಥರು ಎಚ್ಚರಗೊಂಡಾಗ ಮನೆಯಲ್ಲಿದ್ದ ಹಣ ಹಾಗೂ ಆಭರಣಗಳು ಕಾಣೆಯಾಗಿದ್ದು, ನಿವೃತ್ತಿಯೂ ನಾಪತ್ತೆಯಾಗಿರುವುದು ಗೊತ್ತಾಗಿದೆ. ಬಳಿಕ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ದೊಡ್ಡ ಬ್ಯಾಗ್ಗಳನ್ನು ಹೊತ್ತುಕೊಂಡು ಮಹಿಳೆ ರಾತ್ರಿ ಮನೆಯಿಂದ ಹೊರಟು ಹೋಗುತ್ತಿರುವ ದೃಶ್ಯಗಳು ದಾಖಲಾಗಿರುವುದು ಪತ್ತೆಯಾಗಿದೆ.
ಈ ಸಂಬಂಧ ಪತಿ ಕೃಷ್ಣ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಇತರೆ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದಾರೆ. ಪರಾರಿಯಾಗಿರುವ ಮಹಿಳೆಯ ಪತ್ತೆಗೆ ವಿಶೇಷ ಶೋಧ ಕಾರ್ಯವೂ ನಡೆಯುತ್ತಿದೆ.
ಗೋವಾ ಮತ್ತು ಬೆಳಗಾವಿಯನ್ನು ಸಂಪರ್ಕಿಸಿದ ಐದು ವರ್ಷದ ಪ್ರೇಮಕಥೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕಾಲೇಜು ದಿನಗಳಲ್ಲಿ ಆರಂಭವಾದ ಪ್ರೀತಿ…
ದೆಹಲಿ ನಗರದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ, ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹಾಗೂ ಅವರ…
ಅಮೆರಿಕದ ಓಹಿಯೋ ರಾಜ್ಯದಲ್ಲಿ ಮಹಿಳೆಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ ವಿಡಿಯೋ ಚಿತ್ರೀಕರಿಸಿದ ಪ್ರಕರಣದಲ್ಲಿ ಭಾರತೀಯ ಮೂಲದ ಅಮೆರಿಕನ್ ವೈದ್ಯನಿಗೆ…
ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಬಹುಚರ್ಚಿತ 'ಗುಲಾಲ್' ಸಿನಿಮಾದಲ್ಲಿ ನಟಿಸುವ ಅವಕಾಶವನ್ನು ತಾವು ಏಕೆ ಕೈಬಿಟ್ಟೆ ಎಂಬುದನ್ನು ನಟಿ…
ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಮೋಹಳ್ಳಿ ಕೆರೆಯಲ್ಲಿ ಸೂಟ್ಕೇಸ್ನಲ್ಲಿ ಪತ್ತೆಯಾಗಿದ್ದ 65 ವರ್ಷದ ಜಯಮ್ಮ ಅವರ ಕೊಲೆ ಪ್ರಕರಣವನ್ನು…
ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಇತ್ತೀಚಿನ ಪ್ರತಿಭಟನೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಕೆಲವು ವೀಡಿಯೊಗಳು ಭದ್ರತಾ…